ಪಂಜಾಬ್ ಕಿಂಗ್ಸ್‌ನ ಪ್ರಿಯಾಂಶ್ ಆರ್ಯ, ಪ್ರಭುಸಿಮ್ರಾನ್ ಸಿಂಗ್ ಆಡುತ್ತಿದ್ದರು. 
ಕ್ರಿಕೆಟ್

ಪಾಕಿಸ್ತಾನ ದಾಳಿ ನಡುವೆ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ IPL ಪಂದ್ಯ ಸ್ಥಗಿತ!

ಆಕಾಶದಲ್ಲಿ ಸ್ಫೋಟದ ಶಬ್ದ, ಬೆಂಕಿಯ ಜ್ವಾಲೆ ಉಗುಳುವಂತೆ ಕಾಣುವ ಕ್ಷಿಪಣಿಗಳ ವಿಡಿಯೋ ಕೂಡಾ ವೈರಲ್ ಆಗಿದೆ. ಆಕಾಶದಲ್ಲಿ ಪಾಕಿಸ್ತಾನದ 8 ಕ್ಷಿಪಣಿಗಳನ್ನು S-400 ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಗಿದೆ.

ನವದೆಹಲಿ: ಭಾರತದ 'ಆಪರೇಷನ್ ಸಿಂಧೂರ' ಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಗುರುವಾರ ರಾತ್ರಿ ಭಾರತದ ಹಲವೆಡೆ ಕ್ಷಿಪಣಿ, ಡ್ರೋನ್ ಹಾಗೂ ಗುಂಡಿನ ದಾಳಿ ನಡೆಸಿದೆ.

ರಾಜಸ್ಥಾನದ ಜೈಸಲ್ಮಾರ್ ವಾಯುನೆಲೆ ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ. ಆದರೆ, ಜೈಸಲ್ಮಾರ್ ನಲ್ಲಿನ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯಿಂದ ಪಾಕ್ ಡ್ರೋನ್ ಗಳನ್ನು ಹೊಡೆದುರುಳಿಸಲಾಗಿದೆ.

ಆಕಾಶದಲ್ಲಿ ಸ್ಫೋಟದ ಶಬ್ದ, ಬೆಂಕಿಯ ಜ್ವಾಲೆ ಉಗುಳುವಂತೆ ಕಾಣುವ ಕ್ಷಿಪಣಿಗಳ ವಿಡಿಯೋ ಕೂಡಾ ವೈರಲ್ ಆಗಿದೆ. ಆಕಾಶದಲ್ಲಿ ಪಾಕಿಸ್ತಾನದ 8 ಕ್ಷಿಪಣಿಗಳನ್ನು S-400 ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಗಿದೆ.

ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಸೆಕ್ಟರ್‌ನಲ್ಲಿ ಪಾಕಿಸ್ತಾನ ಉಡಾಯಿಸಿದ 8 ಕ್ಷಿಪಣಿಗಳನ್ನು ಭಾರತೀಯ ವಾಯು ರಕ್ಷಣಾ ಘಟಕಗಳು ತಡೆದಿವೆ ಎಂದು ಮೂಲಗಳು ತಿಳಿಸಿವೆ.

IPL ಪಂದ್ಯ ಸ್ಥಗಿತ: ಪಾಕಿಸ್ತಾನ ದಾಳಿ ನಡುವೆ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಡೇಡಿಯಂನಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ VS ಡೆಲ್ಲಿ ಕ್ಯಾಪಿಟಲ್ಸ್ ನಡುವಿನ IPL ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.

ಮೊದಲು ಬ್ಯಾಟಿಂಗ್ ಮಾಡುತ್ತಿದ್ದ ಪಂಜಾಬ್ ಕಿಂಗ್ಸ್ 10.1 ಓವರ್‌ಗಳ ಲ್ಲಿ 122 ರನ್‌ಗಳನ್ನು ಹಾಕಿತು ಆಗ ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಯಿತು. ಆದರೆ, ಭದ್ರತಾ ಕಾರಣಗಳಿಗಾಗಿ ಅಭಿಮಾನಿಗಳನ್ನು ಕ್ರೀಡಾಂಗಣದಿಂದ ಹೊರಹೋಗುವಂತೆ ಸೂಚಿಸಲಾಯಿತು. ಇದರಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಭದ್ರತಾ ಕಾಳಜಿಗಳಿಂದಾಗಿ, ಹಿಮಾಚಲ ಪ್ರದೇಶದಲ್ಲಿ ಬ್ಲಾಕ್ ಔಟ್ ಘೋಷಿಸಲಾಗಿದ್ದು, ಇದರಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ESPN Cricinfo ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT