ಪ್ರಾತಿನಿಧಿಕ ಚಿತ್ರ 
ಕ್ರಿಕೆಟ್

IPL 2025: ಬೆಂಗಳೂರು ಸೇರಿ ಈ ಸ್ಥಳಗಳಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಪುನರಾರಂಭಿಸಲು BCCI ಚಿಂತನೆ

ಐಪಿಎಲ್ 2025ರಲ್ಲಿ ನಾಲ್ಕು ಪ್ಲೇಆಫ್ ಪಂದ್ಯಗಳನ್ನು ಹೊರತುಪಡಿಸಿ ಲೀಗ್ ಹಂತದ 12 ಪಂದ್ಯಗಳು ಉಳಿದಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಲೀಗ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿ ಯಾವಾಗ ಸುಧಾರಿಸಬಹುದು ಮತ್ತು ಐಪಿಎಲ್ 2025ಅನ್ನು ಪುನರಾರಂಭಿಸುವುದು ಯಾವಾಗ ಎಂಬುದರ ಕುರಿತು ಯಾವುದೇ ಖಚಿತ ಮಾಹಿತಿ ಇಲ್ಲದಿದ್ದರೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೇಶದ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿನ ಸ್ಥಳಗಳಲ್ಲಿ ಐಪಿಎಲ್ 2025 ಅನ್ನು ಪುನರಾರಂಭಿಸಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ರಾಷ್ಟ್ರೀಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಸದ್ಯಕ್ಕೆ ಐಪಿಎಲ್ ಅನ್ನು ಸ್ಥಗಿತಗೊಳಿಸಿದ್ದು, ಬ್ಯಾಕಪ್ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಮುಂದಿನ ವಾರ ಲೀಗ್ ಅನ್ನು ಪುನರಾರಂಭಿಸಿದರೆ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

'ಇಂತಹ ವಿಷಯಗಳಿಗೆ ಬಂದಾಗ ಒಂದು ವಾರವು ಬಹಳ ದೀರ್ಘ ಸಮಯವಾಗಿದೆ. ಮಂಡಳಿಯು ತುರ್ತು ಯೋಜನೆಯನ್ನು ರೂಪಿಸುತ್ತಿದೆ. ಆದರೆ, ಮುಂದಿನ ವಾರ ಲೀಗ್ ಪುನರಾರಂಭವಾದರೆ ಕೋಲ್ಕತ್ತಾ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ನಡೆಸಲು ಬಿಸಿಸಿಐ ಪರಿಗಣಿಸುತ್ತಿದೆ. ಗಡಿಯಲ್ಲಿ ಪರಿಸ್ಥಿತಿ ಸುಧಾರಿಸಿದರೆ, ಮಂಡಳಿಯು ಮೂಲ ಸ್ಥಳಗಳನ್ನು ಸಹ ಉಳಿಸಿಕೊಳ್ಳಬಹುದು' ಎಂದು ಮೂಲಗಳು ತಿಳಿಸಿವೆ.

ಐಪಿಎಲ್ 2025ರಲ್ಲಿ ನಾಲ್ಕು ಪ್ಲೇಆಫ್ ಪಂದ್ಯಗಳನ್ನು ಹೊರತುಪಡಿಸಿ ಲೀಗ್ ಹಂತದ 12 ಪಂದ್ಯಗಳು ಉಳಿದಿವೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಡೆಯುತ್ತಿರುವ ಟಾಟಾ ಐಪಿಎಲ್ 2025 ರ ಉಳಿದ ಪಂದ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವಾರ ಸ್ಥಗಿತಗೊಳಿಸಲು ನಿರ್ಧರಿಸಿದೆ. ಸಂಬಂಧಿತ ಅಧಿಕಾರಿಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನದ ನಂತರ ಪಂದ್ಯಾವಳಿಯ ಹೊಸ ವೇಳಾಪಟ್ಟಿ ಮತ್ತು ಸ್ಥಳಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಸಕಾಲದಲ್ಲಿ ಪ್ರಕಟಿಸಲಾಗುವುದು ಎಂದು ಐಪಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT