ಕ್ರಿಕೆಟ್

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ ಕ್ರಿಕೆಟ್‌ಗೆ ಕೊಹ್ಲಿ ವಿದಾಯ?: BCCI ಗೆ ನಿರ್ಧಾರ ತಿಳಿಸಿದ ವಿರಾಟ್‌

ಜೂನ್‌ 20ರಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಗೆ ತಾನು ಅಲಭ್ಯರಾಗುವುದಾಗಿ ವಿರಾಟ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದಾರೆ. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅವರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಜೂನ್‌ 20ರಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಗೆ ತಾನು ಅಲಭ್ಯರಾಗುವುದಾಗಿ ವಿರಾಟ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಆದರೆ ಬಿಸಿಸಿಐ ಹಿರಿಯ ಅಧಿಕಾರಿಗಳು ವಿರಾಟ್‌ ಕೊಹ್ಲಿಗೆ ತನ್ನ ನಿರ್ಧಾರವನ್ನು ಮರುಪರಿಶೀಲಿಸಲು ತಿಳಿಸಿದ್ದಾರೆ ಎನ್ನಲಾಗಿದೆ. ರೋಹಿತ್‌ ಶರ್ಮಾ ಅವರು ಕೆಲವೇ ದಿನಗಳ ಹಿಂದೆ ಟೆಸ್ಟ್‌ ಮಾದರಿಗೆ ವಿದಾಯ ಹೇಳಿದ್ದರು. ವಿರಾಟ್‌ ಮತ್ತು ರೋಹಿತ್‌ ಶರ್ಮಾ ಅವರು ಈ ಹಿಂದೆ ಒಂದೇ ಸಮಯದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದರು.

ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ತಂಡವನ್ನು ಅಂತಿಮಗೊಳಿಸಲು ಆಯ್ಕೆ ಸಮಿತಿ ಸಭೆ ನಡೆಸಲಿರುವ ಸ್ವಲ್ಪ ದಿನ ಮುಂಚಿತವಾಗಿ ಈ ಮಹತ್ವದ ಬೆಳವಣಿಗೆ ಸಂಭವಿಸಿದೆ. ಇಂಗ್ಲೆಂಡ್‌ ಸರಣಿಯೊಂದಿಗೆ ಭಾರತ ಹೊಸ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ ಆರಂಭಿಸಲಿದೆ. ಟೆಸ್ಟ್ ಪ್ರವಾಸಕ್ಕಾಗಿ ತಂಡವನ್ನು ಮೇ ಕೊನೆಯ ವಾರದ ಮೊದಲು ಆಯ್ಕೆ ಮಾಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಹಿಂದೆ ತಿಳಿಸಿದ್ದರು.

ಕಳೆದ ಡಿಸೆಂಬರ್‌ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಕಳಪೆ ಫಾರ್ಮ್‌ ನಿಂದ ಬಳಲಿದ್ದರು. ಐದು ಪಂದ್ಯಗಳಲ್ಲಿ ಅವರು ಕೇವಲ 186 ರನ್‌ ಮಾತ್ರ ಗಳಿಸಿದ್ದರು. ಮೊದಲ ಟೆಸ್ಟ್‌ ನಲ್ಲಿ ಶತಕ ಗಳಿಸಿದ್ದರೂ ಉಳಿದ ನಾಲ್ಕು ಪಂದ್ಯಗಳಿಂದ ಅವರು ಕೇವಲ 86 ರನ್‌ ಮಾತ್ರ ಮಾಡಿದ್ದರು. 38 ವರ್ಷದ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 30 ಶತಕಗಳೊಂದಿಗೆ 9,230 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT