ವಿರಾಟ್ ಕೊಹ್ಲಿ ದಿಢೀರ್ ನಿವೃತ್ತಿ 
ಕ್ರಿಕೆಟ್

"ನಿರ್ಧಾರ ಸುಲಭವಲ್ಲ, ಆದರೆ ಇದೇ ಸರಿಯಾದ ಸಮಯ ಎನಿಸುತ್ತದೆ": ಟೆಸ್ಟ್ ಕ್ರಿಕೆಟ್ ಗೆ Virat Kohli ನಿವೃತ್ತಿ!

'ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲು ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಕರೆದೊಯ್ಯುವ ಪ್ರಯಾಣವನ್ನು ನಾನು ಎಂದಿಗೂ ಊಹಿಸಿರಲಿಲ್ಲ.

ಮುಂಬೈ: ಪ್ರಮುಖ ಬೆಳವಣಿಗೆಯಲ್ಲಿ ಭಾರತ ಕ್ರಿಕೆಟ್ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ (Virat Kohli) ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಹೌದು.. ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ನಲ್ಲಿ 'ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲು ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಕರೆದೊಯ್ಯುವ ಪ್ರಯಾಣವನ್ನು ನಾನು ಎಂದಿಗೂ ಊಹಿಸಿರಲಿಲ್ಲ.

ಅದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ. ವೈಟ್ ಜೆರ್ಸಿಯಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು ಆದರೆ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ ಎಂದಿದ್ದಾರೆ.

ಅಂತೆಯೇ ನಾನು ಈ ಸ್ವರೂಪದಿಂದ ದೂರ ಸರಿಯುವ ನಿರ್ಧಾರ ಕೈಗೊಂಡಿದ್ದು ಅದು ಸುಲಭವಾಗಿರಲಿಲ್ಲ. ಆದರೆ ಅದು ಸರಿ ಎಂದು ಅನಿಸುತ್ತದೆ. ನಾನು ಅದಕ್ಕೆ ನನ್ನಲ್ಲಿದ್ದ ಎಲ್ಲವನ್ನೂ ನೀಡಿದ್ದೇನೆ ಮತ್ತು ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದನ್ನು ಅದು ನನಗೆ ಹಿಂತಿರುಗಿಸಿದೆ.

ಈ ಆಟಕ್ಕಾಗಿ, ನಾನು ಮೈದಾನವನ್ನು ಹಂಚಿಕೊಂಡ ಜನರಿಗಾಗಿ ಮತ್ತು ದಾರಿಯುದ್ದಕ್ಕೂ ನನ್ನನ್ನು ನೋಡುವಂತೆ ಮಾಡಿದ ಪ್ರತಿಯೊಬ್ಬ ವ್ಯಕ್ತಿಗಾಗಿ ನಾನು ಕೃತಜ್ಞತೆಯಿಂದ ತುಂಬಿದ ಹೃದಯದಿಂದ ಹೊರಡುತ್ತಿದ್ದೇನೆ. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡಲು ಬಯಸುತ್ತೇನೆ ಎಂದು ಕೊಹ್ಲಿ ಪೋಸ್ಟ್ ಮಾಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ಅವರು ಇತ್ತೀಚೆಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅವರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಆದರೆ ಕೊಹ್ಲಿ ತಮ್ಮ ನಿರ್ಧಾರದಿಂದ ಹಿಂದೆಸರಿದಿಲ್ಲ.

ಅಂದಹಾಗೆ 2011ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಈ ವರೆಗೂ 123 ಪಂದ್ಯಗಳನ್ನಾಡಿದ್ದು, 210 ಇನ್ನಿಂಗ್ಸ್ ಗಳಲ್ಲಿ 46.9 ಸರಾಸರಿಯಲ್ಲಿ 9230 ರನ್ ಗಳಿಸಿದ್ದಾರೆ. ಅಂತೆಯೇ ಅಜೇಯ 254 ರನ್ ಅವರ ವೈಯುಕ್ತಿಕ ಗರಿಷ್ಛ ಸ್ಕೋರ್ ಆಗಿದ್ದು, ಅಂತೆಯೇ 30 ಶತಕ ಮತ್ತು 31 ಅರ್ಧಶತಕಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT