ಜಸ್‌ಪ್ರೀತ್ ಬುಮ್ರಾ-ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ ಬೆನ್ನಲ್ಲೇ ಜಸ್‌ಪ್ರೀತ್ ಬುಮ್ರಾ ಶಾಕ್: BCCI 'ಮಂಡೆ' ಬಿಸಿ!

ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಆತಿಥೇಯ ತಂಡದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಆತಿಥೇಯ ತಂಡದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೂ ಮೊದಲೇ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದರು. ರೋಹಿತ್ ನಿವೃತ್ತಿಯಿಂದಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಹೊಸ ಟೆಸ್ಟ್ ನಾಯಕನನ್ನು ಆಯ್ಕೆ ಮಾಡಬೇಕಾಗುತ್ತದೆ.

ಹೊಸ ನಾಯಕನ ಹೆಸರು ಮತ್ತು ತಂಡದ ಆಯ್ಕೆಯ ಬಗ್ಗೆ ಚರ್ಚಿಸಲು ಭಾರತೀಯ ಆಯ್ಕೆದಾರರು ಮುಂದಿನ ವಾರ ಸಭೆ ನಡೆಸಲಿದ್ದಾರೆ. ಸ್ಕೈ ಸ್ಪೋರ್ಟ್ಸ್ ವರದಿಯ ಪ್ರಕಾರ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮುಂದಿನ ಟೆಸ್ಟ್ ನಾಯಕನಾಗಲು ನಿರಾಕರಿಸಿದ್ದಾರೆ. ಅತಿಯಾದ ಆಟದ ಒತ್ತಡದಿಂದಾಗಿ ಬೂಮ್ ಬೂಮ್ ಬುಮ್ರಾ ಸರಣಿಯ ಐದು ಟೆಸ್ಟ್ ಪಂದ್ಯಗಳನ್ನು ಆಡಲು ಬಯಸಿಲ್ಲ

ಸರಣಿಯ ಐದು ಪಂದ್ಯಗಳನ್ನು ಆಡಬಲ್ಲ ಆಟಗಾರನಿಗೆ ಭಾರತೀಯ ಆಯ್ಕೆದಾರರು ಆದ್ಯತೆ ನೀಡಲಿದ್ದಾರೆ. ಶುಭಮನ್ ಗಿಲ್ ಅಥವಾ ರಿಷಭ್ ಪಂತ್ ಅವರನ್ನು ಈಗ ಟೆಸ್ಟ್ ತಂಡದ ನಾಯಕರನ್ನಾಗಿ ಮಾಡಬಹುದು. ಅಲ್ಲದೆ, ಈ ಇಬ್ಬರಲ್ಲಿ ಒಬ್ಬರನ್ನು ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತದ ಟೆಸ್ಟ್ ತಂಡದ ಉಪನಾಯಕನನ್ನಾಗಿ ನೇಮಿಸಬಹುದು. ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ತಂಡವನ್ನು ಮೇ 24 ರೊಳಗೆ ಘೋಷಿಸುವ ನಿರೀಕ್ಷೆಯಿದೆ.

2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಜಸ್ಪ್ರೀತ್ ಬುಮ್ರಾ ಎಲ್ಲಾ 5 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆದರೆ, ಸಿಡ್ನಿಯಲ್ಲಿ ಆಡಿದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಗಾಯಗೊಂಡರು. ಆ ಸಮಯದಲ್ಲಿ, ಬುಮ್ರಾ ಗಾಯಕ್ಕೆ ಅತಿಯಾದ ಕೆಲಸದ ಹೊರೆ ಕಾರಣ ಎಂದು ಹೇಳಲಾಗಿತ್ತು. ಬೆನ್ನುನೋವಿನಿಂದಾಗಿ ಬುಮ್ರಾ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಸಾಧ್ಯವಾಗಲಿಲ್ಲ. ಆದಾಗ್ಯೂ, ಅವರು ಫಿಟ್ ಆದ ನಂತರ ಅದ್ಭುತವಾಗಿ ಮರಳಿದ್ದಾರೆ. ಐಪಿಎಲ್ 2025ರಲ್ಲಿ ಬುಮ್ರಾ ಮುಂಬೈ ಇಂಡಿಯನ್ಸ್ ಪರ 7 ಪಂದ್ಯಗಳನ್ನು ಆಡಿದ್ದಾರೆ ಮತ್ತು 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಮತ್ತೊಂದೆಡೆ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಬಯಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ತಿಳಿಸಿದ್ದಾರೆ. ಇದು ಬಿಸಿಸಿಐ ಸಂಕಷ್ಟಕ್ಕೆ ಸಿಲುಕವಂತೆ ಮಾಡಿದೆ. ಏಕೆಂದರೆ ಭಾರತ ತಂಡಕ್ಕೆ ಇಂಗ್ಲೆಂಡ್‌ನಲ್ಲಿ ಅವರ ಅನುಭವ ಬೇಕಾಗುತ್ತದೆ.

ಭಾರತ-ಇಂಗ್ಲೆಂಡ್ ಸರಣಿ ವೇಳಾಪಟ್ಟಿ (2025)

ಜೂನ್ 20-24: ಮೊದಲ ಟೆಸ್ಟ್, ಹೆಡಿಂಗ್ಲೆ

ಜುಲೈ 2-6: ಎರಡನೇ ಟೆಸ್ಟ್, ಬರ್ಮಿಂಗ್ಹ್ಯಾಮ್

ಜುಲೈ 10-14: ಮೂರನೇ ಟೆಸ್ಟ್, ಲಾರ್ಡ್ಸ್

ಜುಲೈ 23-27: 4ನೇ ಟೆಸ್ಟ್, ಮ್ಯಾಂಚೆಸ್ಟರ್

ಜುಲೈ 31-ಆಗಸ್ಟ್ 4: ಐದನೇ ಟೆಸ್ಟ್, ದಿ ಓವಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!