ಟಾಮ್ ಕರ್ರಾನ್  
ಕ್ರಿಕೆಟ್

ಭಾರತ-ಪಾಕಿಸ್ತಾನ ಉದ್ವಿಗ್ನತೆ ವೇಳೆ ಮಗುವಿನಂತೆ ಅತ್ತರೇ? ಕೊನೆಗೂ ಮೌನ ಮುರಿದ ಇಂಗ್ಲೆಂಡ್ ವೇಗಿ Tom Curran!

ಮತ್ತೆ ಲೀಗ್ ಆರಂಭವಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಎರಡು ವಿಶೇಷ ದೇಶಗಳ ನಡುವೆ ನಿರಂತರ ಶಾಂತಿಗಾಗಿ ನಾನು ಪ್ರಾರ್ಥಿಸುತ್ತೇನೆ.

ನವದೆಹಲಿ: ಭಾರತ -ಪಾಕಿಸ್ತಾನ ಉದ್ವಿಗ್ನತೆ ಸಂದರ್ಭದಲ್ಲಿ ಇಂಗ್ಲೆಂಡ್ ನ ವೇಗಿ ಟಾಮ್ ಕರ್ರಾನ್ ಮಗುವಿನಂತೆ ಅತ್ತಿದ್ದರು ಎಂದು ಹೇಳಲಾಗಿತ್ತು. ಈ ಕುರಿತು ಕೊನೆಗೂ ಅವರು ಮೌನ ಮುರಿದಿದ್ದಾರೆ. ಬಾಂಗ್ಲಾದೇಶದ ಆಲ್‌ರೌಂಡರ್ ರಿಶಾದ್ ಹೊಸೈನ್ ನೀಡಿದ ಹೇಳಿಕೆಯನ್ನು ಅವರು ತಳ್ಳಿ ಹಾಕಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿರುವ ಕರ್ರಾನ್, ಕಠಿಣ ಸಂದರ್ಭದಲ್ಲಿ ನಾನು ಅತ್ತಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಸದ್ಯ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ (PSL) ಲಾಹೋರ್ ಖಲಂದರ್ಸ್‌ಗಾಗಿ ಆಡುತ್ತಿರುವ ಕರ್ರಾನ್, ಕದನ ವಿರಾಮದ ನಂತರ ಲೀಗ್ ಮತ್ತೆ ಪುನರಾರಂಭ ಆಗಿರುವುದಕ್ಕೆ ಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೆ ಲೀಗ್ ಆರಂಭವಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಎರಡು ವಿಶೇಷ ದೇಶಗಳ ನಡುವೆ ನಿರಂತರ ಶಾಂತಿಗಾಗಿ ನಾನು ಪ್ರಾರ್ಥಿಸುತ್ತೇನೆ. "Btw promise ನಾನು ಅತ್ತಿಲ್ಲ ಎಂದು ನಗುವ ಎಮೋಜಿ ಹಾಕಿದ್ದಾರೆ.

ಈ ಹಿಂದೆ ಟಾಮ್ ಕರ್ರಾನ್ ವಿಮಾನ ನಿಲ್ದಾಣಕ್ಕೆ ಹೋದಾಗ ಮುಚ್ಚಿದ್ದರಿಂದ ಅವರು ಚಿಕ್ಕ ಮಗುವಿನಂತೆ ಅತ್ತಿದ್ದರು. ಅವರನ್ನು ಸಮಾಧಾನಪಡಿಸಲು ಎರಡು ಅಥವಾ ಮೂರು ಜನರು ಬೇಕಾದರು ಎಂದು ರಿಶಾದ್ ಕ್ರಿಕ್‌ಬಜ್‌ಗೆ ತಿಳಿಸಿದರು. ಆದಾಗ್ಯೂ, ತದನಂತರ ರಿಷಾದ್ ತನ್ನ ಹೇಳಿಕೆಗಾಗಿ ಕರ್ರಾನ್ ಮತ್ತು ಮಿಚ್ಚೆಲ್ ಅವರ ಕ್ಷಮೆಯಾಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT