ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 
ಕ್ರಿಕೆಟ್

ಬದಲಿ ಆಟಗಾರರ ಆಯ್ಕೆ ಮಾಡಿದ KKR, RCB; ಲುಂಗಿ ಎಂಗಿಡಿ ಔಟ್; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾರಕ ವೇಗಿ ಸೇರ್ಪಡೆ!

ಪ್ಲೇಆಫ್‌ ರೇಸ್‌ನಿಂದ ಈಗಾಗಲೇ ಹೊರಗುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಈ ಆವೃತ್ತಿಯ ಉಳಿದ ಪಂದ್ಯಗಳಿಗೆ ರೋವ್‌ಮನ್ ಪೊವೆಲ್ ಬದಲಿಗೆ ಶುಕ್ಲಾ ಅವರನ್ನು ತಂಡಕ್ಕೆ ಕರೆತಂದಿದೆ.

ನವದೆಹಲಿ: ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಈಣ) ತಂಡಗಳು ತಮ್ಮ ಗಾಯಗೊಂಡ ಆಟಗಾರರ ಬದಲಿಗೆ ಶಿವಂ ಶುಕ್ಲಾ ಮತ್ತು ಬ್ಲೆಸ್ಸಿಂಗ್ ಮುಜರಬಾನಿ ಅವರನ್ನು ಆಯ್ಕೆ ಮಾಡಿವೆ ಎಂದು ಐಪಿಎಲ್ ಹೇಳಿಕೆ ಸೋಮವಾರ ತಿಳಿಸಿದೆ.

ಪ್ಲೇಆಫ್‌ ರೇಸ್‌ನಿಂದ ಈಗಾಗಲೇ ಹೊರಗುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಈ ಆವೃತ್ತಿಯ ಉಳಿದ ಪಂದ್ಯಗಳಿಗೆ ರೋವ್‌ಮನ್ ಪೊವೆಲ್ ಬದಲಿಗೆ ಶುಕ್ಲಾ ಅವರನ್ನು ತಂಡಕ್ಕೆ ಕರೆತಂದಿದೆ.

ವೆಸ್ಟ್ ಇಂಡೀಸ್ ಆಲ್‌ರೌಂಡರ್‌ ಪೊವೆಲ್ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಟೂರ್ನಿಯಿಂದ ಹೊರಗುಳಿದಿದ್ದಾರೆ.

ಲೆಗ್ ಸ್ಪಿನ್ನರ್ ಶುಕ್ಲಾ ದೇಶೀಯ ಕ್ರಿಕೆಟ್‌ನಲ್ಲಿ ಮಧ್ಯಪ್ರದೇಶ ಪರ ಆಡುತ್ತಾರೆ ಮತ್ತು ಮೂಲ ಬೆಲೆ 30 ಲಕ್ಷ ರೂ.ಗೆ ಕೆಕೆಆರ್ ಸೇರಲಿದ್ದಾರೆ.

ಆರ್‌ಸಿಬಿ, ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಲುಂಗಿ ಎನ್‌ಗಿಡಿ ಬದಲಿಗೆ ಮುಜರಬಾನಿಯನ್ನು ಆಯ್ಕೆ ಮಾಡಿದೆ. ಎಂಗಿಡಿ ಅವರು ಫ್ರಾಂಚೈಸಿಯನ್ನು ತೊರೆದು ದಕ್ಷಿಣ ಆಫ್ರಿಕಾ ತಂಡವನ್ನು ಸೇರಲಿದ್ದಾರೆ.

ಈ ಬದಲಿ ಆಟಗಾರರಿಗೆ ತಂಡಗಳಲ್ಲಿ ಆಡಲು ಮೇ 26 ರಿಂದ ಅಧಿಕೃತವಾಗಿ ಅವಕಾಶ ಸಿಗಲಿದೆ.

ಜಿಂಬಾಬ್ವೆಯ ವೇಗಿ ಮುಜರಬಾನಿ ಇದುವರೆಗೆ 70 ಟಿ20 ಪಂದ್ಯಗಳನ್ನು ಆಡಿದ್ದಾರೆ ಮತ್ತು 78 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದಲ್ಲದೆ, ಅವರು ಜಿಂಬಾಬ್ವೆಯನ್ನು 12 ಟೆಸ್ಟ್ ಮತ್ತು 55 ಏಕದಿನ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಅವರು 75 ಲಕ್ಷ ರೂ.ಗೆ ಆರ್‌ಸಿಬಿ ಸೇರಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT