ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 
ಕ್ರಿಕೆಟ್

ಬದಲಿ ಆಟಗಾರರ ಆಯ್ಕೆ ಮಾಡಿದ KKR, RCB; ಲುಂಗಿ ಎಂಗಿಡಿ ಔಟ್; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾರಕ ವೇಗಿ ಸೇರ್ಪಡೆ!

ಪ್ಲೇಆಫ್‌ ರೇಸ್‌ನಿಂದ ಈಗಾಗಲೇ ಹೊರಗುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಈ ಆವೃತ್ತಿಯ ಉಳಿದ ಪಂದ್ಯಗಳಿಗೆ ರೋವ್‌ಮನ್ ಪೊವೆಲ್ ಬದಲಿಗೆ ಶುಕ್ಲಾ ಅವರನ್ನು ತಂಡಕ್ಕೆ ಕರೆತಂದಿದೆ.

ನವದೆಹಲಿ: ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಈಣ) ತಂಡಗಳು ತಮ್ಮ ಗಾಯಗೊಂಡ ಆಟಗಾರರ ಬದಲಿಗೆ ಶಿವಂ ಶುಕ್ಲಾ ಮತ್ತು ಬ್ಲೆಸ್ಸಿಂಗ್ ಮುಜರಬಾನಿ ಅವರನ್ನು ಆಯ್ಕೆ ಮಾಡಿವೆ ಎಂದು ಐಪಿಎಲ್ ಹೇಳಿಕೆ ಸೋಮವಾರ ತಿಳಿಸಿದೆ.

ಪ್ಲೇಆಫ್‌ ರೇಸ್‌ನಿಂದ ಈಗಾಗಲೇ ಹೊರಗುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಈ ಆವೃತ್ತಿಯ ಉಳಿದ ಪಂದ್ಯಗಳಿಗೆ ರೋವ್‌ಮನ್ ಪೊವೆಲ್ ಬದಲಿಗೆ ಶುಕ್ಲಾ ಅವರನ್ನು ತಂಡಕ್ಕೆ ಕರೆತಂದಿದೆ.

ವೆಸ್ಟ್ ಇಂಡೀಸ್ ಆಲ್‌ರೌಂಡರ್‌ ಪೊವೆಲ್ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಟೂರ್ನಿಯಿಂದ ಹೊರಗುಳಿದಿದ್ದಾರೆ.

ಲೆಗ್ ಸ್ಪಿನ್ನರ್ ಶುಕ್ಲಾ ದೇಶೀಯ ಕ್ರಿಕೆಟ್‌ನಲ್ಲಿ ಮಧ್ಯಪ್ರದೇಶ ಪರ ಆಡುತ್ತಾರೆ ಮತ್ತು ಮೂಲ ಬೆಲೆ 30 ಲಕ್ಷ ರೂ.ಗೆ ಕೆಕೆಆರ್ ಸೇರಲಿದ್ದಾರೆ.

ಆರ್‌ಸಿಬಿ, ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಲುಂಗಿ ಎನ್‌ಗಿಡಿ ಬದಲಿಗೆ ಮುಜರಬಾನಿಯನ್ನು ಆಯ್ಕೆ ಮಾಡಿದೆ. ಎಂಗಿಡಿ ಅವರು ಫ್ರಾಂಚೈಸಿಯನ್ನು ತೊರೆದು ದಕ್ಷಿಣ ಆಫ್ರಿಕಾ ತಂಡವನ್ನು ಸೇರಲಿದ್ದಾರೆ.

ಈ ಬದಲಿ ಆಟಗಾರರಿಗೆ ತಂಡಗಳಲ್ಲಿ ಆಡಲು ಮೇ 26 ರಿಂದ ಅಧಿಕೃತವಾಗಿ ಅವಕಾಶ ಸಿಗಲಿದೆ.

ಜಿಂಬಾಬ್ವೆಯ ವೇಗಿ ಮುಜರಬಾನಿ ಇದುವರೆಗೆ 70 ಟಿ20 ಪಂದ್ಯಗಳನ್ನು ಆಡಿದ್ದಾರೆ ಮತ್ತು 78 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದಲ್ಲದೆ, ಅವರು ಜಿಂಬಾಬ್ವೆಯನ್ನು 12 ಟೆಸ್ಟ್ ಮತ್ತು 55 ಏಕದಿನ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಅವರು 75 ಲಕ್ಷ ರೂ.ಗೆ ಆರ್‌ಸಿಬಿ ಸೇರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT