ಡೆಲ್ಲಿ ಕ್ಯಾಪಿಟಲ್ಸ್ ತಂಡ 
ಕ್ರಿಕೆಟ್

IPL 2025: ಪ್ಲೇಆಫ್ ಸ್ಥಾನ ಕಳೆದುಕೊಂಡ ಡೆಲ್ಲಿ ಕ್ಯಾಪಿಟಲ್ಸ್; ಕೆಟ್ಟ ದಾಖಲೆ ಬರೆದ ಅಕ್ಷರ್ ಪಟೇಲ್ ಪಡೆ

ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿವೆ.

ಮುಂಬೈ ಇಂಡಿಯನ್ಸ್ (MI) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) 59 ರನ್‌ಗಳ ಹೀನಾಯ ಸೋಲು ಕಂಡಿದ್ದು, ಐಪಿಎಲ್ 2025ರ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಅಕ್ಷರ್ ಪಟೇಲ್ ನೇತೃತ್ವದ ಪಡೆ 181 ರನ್‌ಗಳ ಗುರಿಯನ್ನು ಬೆನ್ನಟ್ಟಲು ವಿಫಲವಾದ ಕಾರಣ ಹಾರ್ದಿಕ್ ಪಾಂಡ್ಯ ಪಡೆ ಜಯ ಸಾಧಿಸಿತು. ಈ ಸೋಲಿನ ಪರಿಣಾಮವಾಗಿ, ಡಿಸಿ ಇದೀಗ ಅನಗತ್ಯ ದಾಖಲೆ ಬರೆದಿದೆ.

ಐಪಿಎಲ್ ಇತಿಹಾಸದಲ್ಲಿ ಪಂದ್ಯಾವಳಿಯಲ್ಲಿ ಮೊದಲ ನಾಲ್ಕು ಪಂದ್ಯಗಳನ್ನು ಗೆದ್ದರೂ ಪ್ಲೇಆಫ್‌ಗೆ ಪ್ರವೇಶಿಸದ ಮೊದಲ ತಂಡ ಡೆಲ್ಲಿ ಕ್ಯಾಪಿಟಲ್ಸ್ ಆಯಿತು. ಟೂರ್ನಿಯ ಮಧ್ಯಭಾಗದವರೆಗೂ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಕಾಯ್ದುಕೊಳ್ಳುವ ಮೂಲಕ ಬಲಿಷ್ಠವಾಗಿ ಕಾಣುತ್ತಿದ್ದ ಡೆಲ್ಲಿ ನಂತರ ಮಂಕಾಯಿತು. ಎಲ್‌ಎಸ್‌ಜಿ, ಎಸ್‌ಆರ್‌ಹೆಚ್, ಸಿಎಸ್‌ಕೆ ಮತ್ತು ಆರ್‌ಸಿಬಿಗಳನ್ನು ಸೋಲಿಸುವ ಮೂಲಕ ತಮ್ಮ ಅಭಿಯಾನವನ್ನು ಪ್ರಾರಂಭಿಸಿತ್ತು.

ಮುಂದಿನ ಮೂರು ಪಂದ್ಯಗಳಲ್ಲಿ, ಅವರು MI ವಿರುದ್ಧ ಸೋತರು, RR ವಿರುದ್ಧ ಸೂಪರ್ ಓವರ್ ಥ್ರಿಲ್ಲರ್‌ನಲ್ಲಿ ಗೆದ್ದರು. ಆದರೆ, GT ವಿರುದ್ಧ ಮತ್ತೆ ಸೋತರು. ಬಳಿಕ ಮತ್ತೊಮ್ಮೆ LSG ಅನ್ನು ಸೋಲಿಸಿದರು. ಆದಾಗ್ಯೂ, ಅಂದಿನಿಂದ, ಅವರು ಒಂದೇ ಒಂದು ಪಂದ್ಯವನ್ನು ಗೆಲ್ಲಲು ವಿಫಲರಾದರು. ಉಳಿದ ಎರಡು ಪಂದ್ಯಗಳು ರದ್ದಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಒಂದು PBKS ವಿರುದ್ಧ ಮತ್ತು ಇನ್ನೊಂದು ಮಳೆಯಿಂದಾಗಿ SRH ವಿರುದ್ಧ ರದ್ದಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ 2025ರ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದಿದ್ದು, ಇದೀಗ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿವೆ.

ಮುಂಬೈ ತಂಡವು ಡಿಸಿ ತಂಡಕ್ಕೆ 181 ರನ್‌ಗಳ ಗುರಿಯನ್ನು ನೀಡಿತು. ಆದರೆ, ಜಸ್ಪ್ರೀತ್ ಬುಮ್ರಾ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ ಮೂರು ವಿಕೆಟ್‌ಗಳನ್ನು ಕಬಳಿಸುವುದರೊಂದಿಗೆ ಪ್ರವಾಸಿ ತಂಡವು 121 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ 73 ರನ್ ಗಳಿಸುವುದರೊಂದಿಗೆ ಐದು ವಿಕೆಟ್ ನಷ್ಟಕ್ಕೆ ಮುಂಬೈ 180 ರನ್ ಕಲೆಹಾಕಿತು. ನಮನ್ ಧೀರ್ 8 ಎಸೆತಗಳಲ್ಲಿ 24 ರನ್ ಗಳಿಸಿ ಆಕರ್ಷಕ ಪ್ರದರ್ಶನ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT