ಮುಕೇಶ್ ಕುಮಾರ್ 
ಕ್ರಿಕೆಟ್

IPL 2025: ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮುಖೇಶ್ ಕುಮಾರ್‌ಗೆ ಭಾರಿ ದಂಡ ವಿಧಿಸಿದ BCCI

'ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿರುವುದಾಗಿ ಮುಖೇಶ್ ಕುಮಾರ್ ಒಪ್ಪಿಕೊಂಡಿದ್ದಾರೆ ಮತ್ತು ಮ್ಯಾಚ್ ರೆಫರಿಯ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ' ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಬೈ: ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಮುಖೇಶ್ ಕುಮಾರ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದಂಡ ವಿಧಿಸಿದೆ.

ಕ್ರಿಕೆಟ್ ಉಪಕರಣಗಳು ಅಥವಾ ಮೈದಾನದ ಫಿಕ್ಚರ್‌ಗಳ ದುರುಪಯೋಗಕ್ಕೆ ಸಂಬಂಧಿಸಿದ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧಕ್ಕಾಗಿ ಮುಖೇಶ್ ಕುಮಾರ್ ಅವರಿಗೆ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

'ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿರುವುದಾಗಿ ಮುಖೇಶ್ ಕುಮಾರ್ ಒಪ್ಪಿಕೊಂಡಿದ್ದಾರೆ ಮತ್ತು ಮ್ಯಾಚ್ ರೆಫರಿಯ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ' ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಸೂರ್ಯಕುಮಾರ್ ಯಾದವ್ ಅವರ ಅಜೇಯ 73 ರನ್‌ಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್‌ಗಳ ಅಂತರದ ಗೆಲುವು ಸಾಧಿಸಿತು. ಈ ಮೂಲಕ ನಾಲ್ಕನೇ ಮತ್ತು ಅಂತಿಮ ಪ್ಲೇ-ಆಫ್ ಸ್ಥಾನವನ್ನು ಮುಂಬೈ ತಂಡ ಖಚಿತಪಡಿಸಿಕೊಂಡಿತು.

ಸೂರ್ಯಕುಮಾರ್ ಅವರ 43 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ಅದ್ಭುತ ಪ್ರದರ್ಶನವು ತಂಡದ ಗೆಲುವಿಗೆ ದಾರಿ ಮಾಡಿಕೊಟ್ಟಿತು. ಐದು ಬಾರಿ ಚಾಂಪಿಯನ್ ಆಗಿರುವ ತಂಡ ಕಳೆದ ವರ್ಷ ಪ್ಲೇ-ಆಫ್‌ಗೆ ಅರ್ಹತೆ ಪಡೆದಿರಲಿಲ್ಲ.

ಮುಂಬೈ ನೀಡಿದ 181 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, 18.2 ಓವರ್‌ಗಳಲ್ಲಿ 121 ರನ್‌ಗಳಿಗೆ ಆಲೌಟ್ ಆಯಿತು. ಅಕ್ಷರ್ ಪಟೇಲ್ ಈ ಪಂದ್ಯದಿಂದ ಹೊರಗುಳಿದಿದ್ದರು. ಈ ಸೋಲಿನಿಂದ ಡೆಲ್ಲಿ ತಂಡ ಇದೀಗ ಪ್ಲೇಆಫ್‌ನಿಂದ ಅಧಿಕೃತವಾಗಿ ಹೊರಬಿದ್ದಿದ್ದು, ಪಂಜಾಬ್ ಕಿಂಗ್ಸ್ ವಿರುದ್ಧ ಇನ್ನೊಂದು ಪಂದ್ಯದಲ್ಲಿ ಸೆಣಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT