ರಜತ್ ಪಾಟಿದಾರ್, ಪ್ಯಾಟ್ ಕಮ್ಮಿನ್ಸ್ 
ಕ್ರಿಕೆಟ್

RCB vs SRH ಪಂದ್ಯ: ನಿಧಾನಗತಿಯ ಓವರ್, ಪ್ಯಾಟ್ ಕಮ್ಮಿನ್ಸ್, ರಜತ್ ಪಾಟಿದಾರ್ ಗೆ ಭಾರಿ ದಂಡ!

ಪಾಟಿದಾರ್ ನಿನ್ನೆಯ ಪಂದ್ಯದಲ್ಲಿ ನಾಯಕತ್ವ ವಹಿಸಿರಲಿಲ್ಲ. ಇಂಫ್ಯಾಕ್ಟ್ ಪ್ಲೇಯರ್ ಆಗಿದ್ದರು. ಆದಾಗ್ಯೂ, ತಂಡದ ನಿಯೋಜಿತ ಕ್ಯಾಪ್ಟನ್ ಆಗಿರುವುದರಿಂದ ಅವರಿಗೆ ರೂ. 24 ಲಕ್ಷ ದಂಡ ವಿಧಿಸಲಾಗಿದೆ.

ನವದೆಹಲಿ: ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ 2025 ಪಂದ್ಯದಲ್ಲಿ ನಿಧಾನಗತಿ ಓವರ್ ಕಾರಣದಿಂದ ಪ್ಯಾಟ್ ಕಮ್ಮಿನ್ಸ್, ರಜತ್ ಪಾಟಿದಾರ್ ಗೆ ಭಾರಿ ದಂಡ ವಿಧಿಸಲಾಗಿದೆ.

ಪಾಟಿದಾರ್ ನಿನ್ನೆಯ ಪಂದ್ಯದಲ್ಲಿ ನಾಯಕತ್ವ ವಹಿಸಿರಲಿಲ್ಲ. ಇಂಫ್ಯಾಕ್ಟ್ ಪ್ಲೇಯರ್ ಆಗಿದ್ದರು. ಆದಾಗ್ಯೂ, ತಂಡದ ನಿಯೋಜಿತ ಕ್ಯಾಪ್ಟನ್ ಆಗಿರುವುದರಿಂದ ಅವರಿಗೆ ರೂ. 24 ಲಕ್ಷ ದಂಡ ವಿಧಿಸಲಾಗಿದೆ. ಈ ಬಾರಿ ಇದು ಎರಡನೇ ಬಾರಿಗೆ ಆರ್ ಸಿಬಿಗೆ ದಂಡ ಬಿದ್ದಿದೆ. ಈ ಹಿಂದೆ ಏಪ್ರಿಲ್ 7 ರಂದು ನಿಯಮ ಉಲ್ಲಂಘನೆಗಾಗಿ ದಂಡ ವಿಧಿಸಲಾಗಿತ್ತು.

ಐಪಿಎಲ್ ನಿಯಮಗಳ ಪ್ರಕಾರ, ಪಂದ್ಯದ ನಾಯಕರಾಗಿಲ್ಲದಿದ್ದರೂ ನಿಯೋಜಿತ ಕ್ಯಾಪ್ಟನ್ ದಂಡ ಭರಿಸಬೇಕಾಗುತ್ತದೆ. ಈ ಹಿಂದೆ ರಾಜಸ್ಥಾನ ರಾಯಲ್ಸ್ ನ ರಿಯಾನ್ ಪರಾಗ್ ಬದಲಿಗೆ ಸಂಜು ಸ್ಯಾಮ್ಸನ್ ಗೆ ದಂಡ ವಿಧಿಸಲಾಗಿತ್ತು.

ಈ ಮಧ್ಯೆ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಗೆ ರೂ. 15 ಲಕ್ಷ ದಂಡ ವಿಧಿಸಲಾಗಿದೆ. ಇದು ಸನ್ ರೈಸರ್ಸ್ ಹೈದರಾಬಾದ್ ನ ಮೊದಲ ಅಪರಾಧವಾಗಿದೆ. ಹೆಚ್ಚುವರಿಯಾಗಿ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಎರಡೂ ತಂಡಗಳ ಇತರ ಆಟಗಾರರಿಗೆ ಪ್ರತ್ಯೇಕವಾಗಿ ರೂ. 6 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ ಶೇ. 25 ರಷ್ಟು ದಂಡ ವಿಧಿಸಲಾಗಿದೆ ಎಂದು IPL ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿ ಆರ್ ಸಿಬಿಗೆ ಗೆಲ್ಲಲು 232 ರನ್ ಗಳ ಬೃಹತ್ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಆರ್ ಸಿಬಿ 189 ರನ್ ಗಳಿಗೆ ಆಲೌಟ್ ಆಗುವ ಮೂಲಕ 42 ರನ್ ಗಳಿಂದ ಸೋಲು ಕಂಡಿದೆ. ಇದು ಆರ್ ಸಿಬಿಗೆ ಈ ಬಾರಿಯ ನಾಲ್ಕನೇ ಸೋಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT