ಗುಜರಾತ್ ವಿರುದ್ಧ ಚೆನ್ನೈ ಭರ್ಜರಿ ಜಯ 
ಕ್ರಿಕೆಟ್

IPL 2025: GT ವಿರುದ್ಧ CSK ಭರ್ಜರಿ ಜಯ, ಗೆಲುವಿನೊಂದಿಗೆ MS Dhoni ಪಡೆಯ ಜರ್ನಿ ಅಂತ್ಯ; RCB ಮಹತ್ವದ ಲಾಭ!

ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 83 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಗೆಲುವು ಸಾಧಿಸಿದೆ.

ಅಹ್ಮದಾಬಾದ್: ಹಾಲಿ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಮೂಲಕ ಕುಖ್ಯಾತಿಗೆ ಗುರಿಯಾಗಿದ್ದ 6 ಬಾರಿ ಚಾಂಪಿಯನ್ ಚೆನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯ ತನ್ನ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿದೆ.

ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 83 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಗೆಲುವು ಸಾಧಿಸಿದೆ.

ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 230 ರನ್ ಪೇರಿಸಿತು. ಚೆನ್ನೈ ಪರ ಆಯುಷ್ ಮಾತ್ರೆ 34 ರನ್, ಡೆವಾನ್ ಕಾನ್ವೆ 52 ರನ್, ಉರ್ವಿ ಪಟೇಲ್ 37, ಶಿವಂ ದುಬೆ 17, ಡೆವಾಲ್ಡ್ ಬ್ರೆವಿಸ್ 57 ರನ್ ಗಳಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ಆ ಮೂಲಕ ಗುಜರಾತ್ ಗೆ ಗೆಲ್ಲಲು 231 ರನ್ ಗಳ ಬೃಹತ್ ಗುರಿ ನೀಡಿತು.

ಈ ಮೊತ್ತವನ್ನು ಬೆನ್ನು ಹತ್ತಿದ ಗುಜರಾತ್ ತಂಡ 18.3 ಓವರ್ ನಲ್ಲಿ 147 ರನ್ ಗಳಿಗೇ ಆಲೌಟ್ ಆಯಿತು. ಆ ಮೂಲಕ 83 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಗುಜರಾತ್ ಪರ ಆರಂಭಿಕ ಆಟಗಾರ ಸಾಯಿ ಸುದರ್ಶನ್ 41 ರನ್ ಗಳಿಸಿ ಹೋರಾಟ ನೀಡಿದರಾದರೂ ಗುಜರಾತ್ ನ ಉಳಿದ ಆಟಗಾರರಿಂದ ಉತ್ತಮ ಸಾಥ್ ದೊರೆಯಲಿಲ್ಲ. ಉಳಿದಂತೆ ಚೆನ್ನೈ ಪರ ನೂರ್ ಅಹ್ಮದ್ ಮತ್ತು ಅನ್ಶುಲ್ ಕಂಬೋಜ್ ತಲಾ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 2 ವಿಕೆಟ್ ಕಬಳಿಸಿದರು. ಉಳಿದಂತೆ ಖಲೀಲ್ ಅಹ್ಮದ್ ಮತ್ತು ಪತಿರಾಣಾ ತಲಾ 1 ವಿಕೆಟ್ ಪಡೆದರು.

RCB ಮಹತ್ವದ ಲಾಭ

ಇನ್ನು ಈ ಪಂದ್ಯದಲ್ಲಿ ಚೆನ್ನೈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಆರ್ ಸಿಬಿ ತಂಡಕ್ಕೆ ಮಹತ್ವದ ಲಾಭವಾಗಿದೆ. ಈ ಪಂದ್ಯದಲ್ಲಿ ಗುಜರಾತ್ ತಂಡವನ್ನು ಸೋಲಿಸಿದ್ದು ಮಾತ್ರವಲ್ಲದೇ ಆ ತಂಡದ ಪ್ರಬಲ ನೆಟ್ ರನ್ ರೇಟ್ ಕೂಡ ಇಳಿಕೆ ಮಾಡುವಲ್ಲಿ ಚೆನ್ನೈ ಸಫಲವಾಗಿದೆ. ಇಂದಿನ 83 ರನ್ ಗಳ ಬೃಹತ್ ಸೋಲಿನೊಂದಿಗೆ ಗುಜರಾತ್ ತಂಡದ ನೆಟ್ ರನ್ ರೇಟ್ 0.60ಗೆ ಕುಸಿದಿದೆ. ಇದು ಆರ್ ಸಿಬಿ ಅಂಕಪಟ್ಟಿಯಲ್ಲಿ ಟಾಪ್ 2 ಒಳಗೆ ಬರಲು ನೆರವಾಗುತ್ತದೆ.

ಪ್ರಸ್ತುತ 17 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿರುವ ಆರ್ ಸಿಬಿ ಮುಂದಿನ ಎಲ್ ಎಸ್ ಜಿ ವಿರುದ್ಧದ ಪಂದ್ಯ ಗೆದ್ದರೆ 19 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರುವ ಸಾಧ್ಯತೆ ಇದೆ. ಆದರೆ ಈ ಸ್ಥಿತಿಗೆ ಪಂಜಾಬ್ ತಡೆಯಾಗಿದೆಯಾದರೂ ಮುಂಬೈ ತಂಡ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಬೇಕು. ಆಗ ಆರ್ ಸಿಬಿ ಅಗ್ರಸ್ಥಾನಕ್ಕೇರುತ್ತದೆ. ಮುಂಬೈ 18 ಅಂಕಗಳೊಂದಿಗೆ ಮತ್ತು +1.292 ನೆಟ್ ರನ್ ರೇಟ್ ನೊಂದಿಗೆ 2ನೇ ಸ್ಥಾನಕ್ಕೆ ಬರುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT