ಕ್ರಿಕೆಟ್

IPL 2025: RCB ಗೆ 6 ವಿಕೆಟ್ ಗೆಲುವು; ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಬೆಂಗಳೂರು; ಲಖನೌ ಗೆ ತವರಿನಲ್ಲಿ ಮುಖಭಂಗ

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡದ ವಿರುದ್ಧ ಲಖನೌ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಗಳ ಉತ್ತಮ ಮೊತ್ತದ ಸ್ಕೋರ್ ದಾಖಲಿಸಿತು.

ಲಖನೌ ನಲ್ಲಿ ನಡೆದ ಐಪಿಎಲ್ 2025 ರ 70 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಲಖನೌ ತಂಡ ಭಾರಿ ಮುಖಭಂಗ ಎದುರಿಸಿದೆ. ಆತಿಥೇಯ ತಂಡದ ವಿರುದ್ಧ ಆರ್ ಸಿಬಿ 6 ವಿಕೆಟ್ ಗಳ ಅಂತರದಿಂದ ಗೆಲುವನ್ನು ತನ್ನದಾಗಿಸಿಕೊಂಡಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡದ ವಿರುದ್ಧ ಲಖನೌ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಗಳ ಉತ್ತಮ ಮೊತ್ತದ ಸ್ಕೋರ್ ದಾಖಲಿಸಿತು. ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಕೇವಲ 37 ಎಸೆತಗಳಲ್ಲಿ 67 ರನ್ ಗಳಿಸಿದರೆ, ರಿಷಭ್ ಪಂತ್ 61 ಎಸೆತಗಳಲ್ಲಿ 118 ರನ್ ಗಳಿಸಿ ತಂಡ ಬೃಹತ್ ಮೊತ್ತ ದಾಖಲಿಸಲು ನೆರವಾದರು.

227 ರನ್ ಗಳ ಟಾರ್ಗೆಟ್ ಚೇಸಿಂಗ್ ನಲ್ಲಿ ಆರ್ ಸಿಬಿಗೆ ಸಾಲ್ಟ್ (19 ಎಸೆತಗಳಲ್ಲಿ 30 ರನ್) ಮತ್ತು ವಿರಾಟ್ ಕೊಹ್ಲಿ (30 ಎಸೆತಗಳಲ್ಲಿ 54 ರನ್) ಗಳಿಸಿ ಉತ್ತಮ ಜೊತೆಯಾಟ ನೀಡಿದರು. ಪಾಟೀದಾರ್ 7 ಎಸೆತಗಳಲ್ಲಿ 14 ರನ್ ಹಾಗೂ ಲಿವಿಂಗ್ಸ್ಟೋನ್ 1 ಎಸೆತ ಎದುರಿಸಿ ಶೂನ್ಯ ರನ್ ಗಳಿಸಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.

ಆದರೆ ಮಯಾಂಕ್ ಅಗರ್ವಾಲ್ (23 ಎಸೆತಗಳಲ್ಲಿ 41 ರನ್) ಹಾಗೂ ಜಿತೇಶ್ ಶರ್ಮಾ (33 ಎಸೆತಗಳಲ್ಲಿ 85 ರನ್) ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಗೆಲುವಿನ ಮೂಲಕ ಆರ್ ಸಿಬಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT