ಕ್ರೀಡಾಂಗಣದಲ್ಲಿ ಸಶಸ್ತ್ರ ಪಡೆಗಳಿಗೆ 'ಧನ್ಯವಾದಗಳು ಸಂದೇಶದ ಚಿತ್ರ 
ಕ್ರಿಕೆಟ್

IPL 2025: ಫೈನಲ್ ಪಂದ್ಯದಲ್ಲಿ 'ಆಪರೇಷನ್ ಸಿಂಧೂರ್' ಹಿರೋಗಳಿಗೆ ಸನ್ಮಾನ; ಸೇನಾಪಡೆ ಮುಖ್ಯಸ್ಥರಿಗೆ ಆಹ್ವಾನ!

ಆಪರೇಷನ್ ಸಿಂಧೂರ್ ಹಿರೋಗಳನ್ನು ಸನ್ಮಾನಿಸುವುದು ಇದರ ಉದ್ದೇಶವಾಗಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧುಮಲ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ IANS ವರದಿ ಮಾಡಿದೆ.

ನವದೆಹಲಿ: ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜೂನ್ 3 ರಂದು ನಡೆಯಲಿರುವ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಇತ್ತೀಚಿನ ಆಫರೇಷನ್ ಸಿಂಧೂರ್ ಹಿರೋಗಳನ್ನು ಸನ್ಮಾನಿಸಲು ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ.

ಫೈನಲ್ ಪಂದ್ಯದಲ್ಲಿ ಭಾಗವಹಿಸಲು ಭಾರತೀಯ ಸೇನಾಪಡೆಯ ಮೂರು ವಿಭಾಗಗಳ ಮುಖ್ಯಸ್ಥರಿಗೆ ಆಹ್ವಾನ ನೀಡಿದ್ದೇವೆ. ಆಪರೇಷನ್ ಸಿಂಧೂರ್ ಹಿರೋಗಳನ್ನು ಸನ್ಮಾನಿಸುವುದು ಇದರ ಉದ್ದೇಶವಾಗಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧುಮಲ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ IANS ವರದಿ ಮಾಡಿದೆ.

ಹೈಪ್ರೊಫೈಲ್ ಫೈನಲ್ ಪಂದ್ಯಕ್ಕೆ ಮೂರು ಸೇನೆಗಳ ಮುಖ್ಯಸ್ಥರಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಭೂಸೇನೆ ಮುಖ್ಯಸ್ಥರು (COAS) ನೌಕಪಡೆ ಮುಖ್ಯಸ್ಥರು ಮತ್ತು ವಾಯುಪಡೆ ಮುಖ್ಯಸ್ಥರನ್ನು ಬಿಸಿಸಿಐ ಅಧಿಕೃತವಾಗಿ ಆಹ್ವಾನಿಸಿದೆ.

ಪಹಲ್ಗಾಮ್ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾದ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ಒಂದು ವಾರ ಐಪಿಎಲ್ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಡಿಯುದ್ದಕ್ಕೂ ಸೇನಾ ಕಾರ್ಯಾಚರಣೆಯಿಂದ ಐಪಿಎಲ್ ಪಂದ್ಯಗಳು ಸ್ಥಗಿತಗೊಂಡಿದ್ದವು. ಕದನ ವಿರಾಮ ಒಪ್ಪಂದದ ಬಳಿಕ ಐಪಿಎಲ್ ಪುನರಾರಂಭವಾಯಿತು. ಇದರಿಂದಾಗಿ ಮೇ 26 ರಂದು ನಿಗದಿಯಾಗಿದ್ದ ಫೈನಲ್ ಪಂದ್ಯವನ್ನು ಜೂನ್ 3ಕ್ಕೆ ಮುಂದೂಡಲಾಯಿತು. ಉಳಿದ ಪಂದ್ಯಗಳನ್ನು ಆರು ಕ್ರೀಡಾಂಗಣಗಳಲ್ಲಿ ಆಡಿಸಲಾಗುತ್ತಿದೆ.

ಐಪಿಎಲ್ ಪುನರಾರಂಭದ ನಂತರ ಶಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟನ್ನು ತೋರಿಸಲು ಬಿಸಿಸಿಐ ಸತತವಾಗಿ ಪ್ರಯತ್ನಗಳನ್ನು ಮಾಡಿದೆ. ಪ್ರತಿ ಪಂದ್ಯದಲ್ಲೂ, ಮೊದಲ ಬಾಲ್‌ಗೂ ಮುನ್ನ ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ ಮತ್ತು ಸಶಸ್ತ್ರ ಪಡೆಗಳಿಗೆ 'ಧನ್ಯವಾದಗಳು, ಸಂದೇಶಗಳನ್ನು ಸ್ಟೇಡಿಯಂ ಒಳಗಿರುವ ದೈತ್ಯ ಪರದೆಯ ಮೇಲೆ ಪ್ರಮುಖವಾಗಿ ಪ್ರದರ್ಶಿಸಲಾಗುತ್ತದೆ.

ಈ ಬಾರಿ ಪಂಜಾಬ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇ ಆಫ್‌ಗೆ ಅರ್ಹತೆ ಪಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT