ಆರ್ ಸಿಬಿ ಆಟಗಾರರು 
ಕ್ರಿಕೆಟ್

IPL 2025: ಕ್ವಾಲಿಫೈಯರ್-1; RCB ಬೌಲಿಂಗ್ ಚಮತ್ಕಾರ, 101 ರನ್ ಗೆ ಪಂಜಾಬ್ ಆಲೌಟ್; ಸುನೀಲ್ ಗವಾಸ್ಕರ್ ಹೇಳಿದ್ದೇನು?

ಆರ್ ಸಿಬಿ ಬೌಲರ್ ಗಳಾದ ಸೂಯಶ್ ಶರ್ಮಾ ಮೂರು ವಿಕೆಟ್ ಕಬಳಿಸಿದರೆ, ಯಶ್ ದಯಾಳ್ ಹಾಗೂ ಜೋಶ್ ಹ್ಯಾಜಲ್ ವುಡ್ ತಲಾ ವಿಕೆಟ್ ಪಡೆದರು.

ಮುಲ್ಲನಪುರ: ಚಂಡೀಗಢದ ಮುಲ್ಲನಪುರದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2025 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿಬಿಯ ಬೌಲಿಂಗ್ ಚಮತ್ಕಾರಕ್ಕೆ ಪಂಜಾಬ್ ಕಿಂಗ್ಸ್ ಕೇವಲ 101 ರನ್ ಗಳಿಗೆ ಆಲೌಟ್ ಆಗಿದೆ.

ಹೌದು. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆರ್ ಸಿಬಿಯ ನಾಯಕ ರಜತ್ ಪಾಟಿದಾರ್ ಭರವಸೆಯನ್ನು ಬೌಲರ್ ಗಳು ಹುಸಿಗೊಳಿಸಲಿಲ್ಲ. ಕೇವಲ 14.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ತಲೆಗೆಲೆಗಳಂತೆ ಬೀಳಿಸಿದರು.

ಶರ್ಮಾಗೆ ಮೂರು ವಿಕೆಟ್:

ಆರ್ ಸಿಬಿ ಬೌಲರ್ ಗಳಾದ ಸೂಯಶ್ ಶರ್ಮಾ ಮೂರು ವಿಕೆಟ್ ಕಬಳಿಸಿದರೆ, ಯಶ್ ದಯಾಳ್ ಹಾಗೂ ಜೋಶ್ ಹ್ಯಾಜಲ್ ವುಡ್ ತಲಾ ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್ ಹಾಗೂ ಶೆಫರ್ಡ್ ತಲಾ ಒಂದೊಂದು ವಿಕೆಟ್ ಕಬಳಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡವನ್ನು ಕೇವಲ 101 ರನ್ ಗಳಿಗೆ ಕಟ್ಟು ಹಾಕುವಲ್ಲಿ ಯಶಸ್ವಿಯಾದರು.

ಪಂಜಾಬ್ ಕಿಂಗ್ಸ್ ಪರ ಆರಂಭಿಕ ಆಟಗಾರರಾದ ಪ್ರಿಯಾಂಶ್ ಆರ್ಯ ಕೇವಲ 7 ರನ್ ಗಳಿಗೆ ಯಶ್ ದಯಾಳ್ ಬೌಲಿಂಗ್ ನಲ್ಲಿ ಔಟ್ ಆದರೆ, ಪ್ರಭುಶಿಮ್ರಾನ್ ಸಿಂಗ್ 18 ರನ್ ಗಳಿಸಿ ಭುವನೇಶ್ವರ್ ಕುಮಾರ್ ಬೌಲಿಂಗ್ ನಲ್ಲಿ ಫೆವಿಲಿಯನ್ ಗೆ ಹೆಜ್ಜೆ ಹಾಕಿದರು. ತದನಂತರ ಜೋಶ್ ಇಂಗ್ಲೀಷ್ 4, ನಾಯಕ ಶ್ರೇಯಸ್ ಅಯ್ಯರ್ ಕೇವಲ 2 ರನ್ ಗಳಿಗೆ ಹ್ಯಾಜಲ್ ವುಡ್ ಬೌಲಿಂಗ್ ನಲ್ಲಿ ಔಟ್ ಆದರು.

ಉಳಿದಂತೆ ನೆಹಲ್ ವಧೇರಾ 8, ಮಾರ್ಕಸ್ ಸ್ಟೋನಿಸ್ 26, ಶಶಾಂಕ್ ಸಿಂಗ್ 3, ಮುಶೀರ್ ಖಾನ್ ಶೂನ್ಯಕ್ಕೆ ಒಟಾದರು. ಅಜಾಮತ್ತುಲ್ಲಾ 18, ಹರ್ಪೀತ್ ಬ್ರಾರ್ ಕೇವಲ 4 ರನ್ ಗಳಿಗೆ ಫೆವಿಲಿಯನ್ ಗೆ ಹೆಜ್ಜೆ ಹಾಕಿದರು. ಇದರಿಂದಾಗಿ ಪಂಜಾಬ್ ಕಿಂಗ್ಸ್ 14. 1 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 101 ರನ್ ಗಳಿಸಲಷ್ಟೇ ಶಕ್ತವಾಯಿತು.

ಸುನೀಲ್ ಗವಾಸ್ಕರ್ ಕಿಡಿ:

ಕ್ವಾಲಿಫೈಯರ್ ಹಂತದವರೆಗೂ ಬಂದು ಕೇವಲ 101 ರನ್ ಗಳಿಸಿರುವ ಪಂಜಾಬ್ ಕಿಂಗ್ಸ್ ವಿರುದ್ಧ ಮಾಜಿ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ. ನಿರ್ಣಾಯಕವಾದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಬೇಗನೆ ಔಟ್ ಆಗಿದ್ದಕ್ಕೆ ಸುನೀಲ್ ಗವಾಸ್ಕರ್ ಗರಂ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಅವರ ಶಾಟ್ ಆಯ್ಕೆಯನ್ನು ಪ್ರಶ್ನಿಸಿದ್ದಾರೆ. ಅವರು ಶಾಟ್ ಹೊಡೆಯಲು ಹೊಗಬಾರದಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT