ಶ್ರೇಯಸ್ ಅಯ್ಯರ್ - ರಜತ್ ಪಾಟೀದಾರ್ 
ಕ್ರಿಕೆಟ್

IPL 2025: ಮಳೆಯಿಂದ ಕ್ವಾಲಿಫೈಯರ್ 1 ರದ್ದಾದರೆ ಮುಂದೇನು? ಹೀಗಿದೆ ಲೆಕ್ಕಾಚಾರ

ಮುಲ್ಲನ್‌ಪುರದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಕ್ವಾಲಿಫೈಯರ್ 1ಕ್ಕೆ ಯಾವುದೇ ಮೀಸಲು ದಿನಾಂಕವಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿಯ ಕ್ವಾಲಿಫೈಯರ್ 1ಕ್ಕೆ ವೇದಿಕೆ ಸಜ್ಜಾಗಿದ್ದು, ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಗುರುವಾರ ಮುಲ್ಲನ್ಪುರದಲ್ಲಿ ಸೆಣಸಲಿವೆ. ಸೋಮವಾರ ಮುಂಬೈ ಇಂಡಿಯನ್ಸ್ (ಎಂಐ) ತಂಡವನ್ನು ಸೋಲಿಸುವ ಮೂಲಕ ಪಿಬಿಕೆಎಸ್ ಟೇಬಲ್ ಟಾಪರ್ ಆಯಿತು. ಮಂಗಳವಾರ ನಡೆದ ಐಪಿಎಲ್ 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಅದ್ಭುತ ಜಯ ಸಾಧಿಸಿದ ನಂತರ ಆರ್‌ಸಿಬಿ ಎರಡನೇ ಸ್ಥಾನಕ್ಕೇರಿತು. ಎರಡೂ ತಂಡಗಳು 14 ಪಂದ್ಯಗಳಿಂದ 19 ಅಂಕಗಳನ್ನು ಪಡೆದಿದ್ದು, ಉತ್ತಮ ನೆಟ್ ರನ್ ರೇಟ್‌ನಿಂದಾಗಿ ಪಿಬಿಕೆಎಸ್ ತಂಡ ಅಗ್ರಸ್ಥಾನದಲ್ಲಿದೆ.

ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಕ್ವಾಲಿಫೈಯರ್ 1ಕ್ಕೆ ಯಾವುದೇ ಮೀಸಲು ದಿನಾಂಕವಿಲ್ಲ. ಹೀಗಾಗಿ ಮುಲ್ಲನ್‌ಪುರದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ ಏನಾಗಬಹುದು ಎಂಬುದರ ಕುರಿತು ತಿಳಿಯೋಣ...

ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ, ಅಂಕಪಟ್ಟಿಯಲ್ಲಿ ಟಾಪರ್ ಆಗಿರುವ ಪಂಜಾಬ್ ಕಿಂಗ್ಸ್ ತಂಡವು ಫೈನಲ್‌ಗೆ ನಿರಾಯಾಸವಾಗಿ ಮುನ್ನಡೆಯುತ್ತದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ ಎಲಿಮಿನೇಟರ್‌ನಲ್ಲಿ ಗೆಲ್ಲುವ ತಂಡದೊಂದಿಗೆ ಸೆಣಸಬೇಕಿದೆ.

ಆರ್‌ಸಿಬಿ ಫೈನಲ್‌ನಲ್ಲಿ ಸ್ಥಾನ ಪಡೆಯಲು ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಎಲಿಮಿನೇಟರ್‌ನಲ್ಲಿ ಗೆಲ್ಲುವ ತಂಡದ ವಿರುದ್ಧ ಆಡಬೇಕಿದೆ.

ಅಂಕ ಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿರುವ ತಂಡಗಳು ಕ್ವಾಲಿಫೈಯರ್‌ನಲ್ಲಿ ಸೋತರು ಅಥವಾ ಮಳೆ ಅಡ್ಡಿಪಡಿಸಿದರೂ ಫೈನಲ್ ತಲುಪಲು ಮತ್ತೊಂದು ಅವಕಾಶ ಇರುತ್ತದೆ. ರಿಕಿ ಪಾಂಟಿಂಗ್ ಮತ್ತು ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಪಂಜಾಬ್ ಕಿಂಗ್ಸ್ 2014ರ ನಂತರ ಇದೇ ಮೊದಲ ಬಾರಿಗೆ ಪ್ಲೇ-ಆಫ್‌ಗೆ ಪ್ರವೇಶ ಪಡೆದಿದೆ.

ಮತ್ತೊಂದೆಡೆ, ಆರ್‌ಸಿಬಿ ಈ ಬಾರಿ ತಮ್ಮ ಪ್ರಶಸ್ತಿ ಬರವನ್ನು ಕೊನೆಗೊಳಿಸುವ ಆಶಯವನ್ನು ಹೊಂದಿದೆ. ಎರಡೂ ತಂಡಗಳೂ ಕೂಡ ಈವರೆಗೆ ಐಪಿಎಲ್ ಪ್ರಶಸ್ತಿ ಗೆದ್ದಿಲ್ಲ. ಹೀಗಾಗಿ, ಉಭಯ ತಂಡಗಳಿಗೆ ಟ್ರೋಫಿ ಗೆಲ್ಲುವ ಮಹದಾಸೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ