ರಜತ್ ಪಾಟಿದಾರ್ 
ಕ್ರಿಕೆಟ್

IPL 2025: ಫೈನಲ್ ಗೆ RCB; 'ರಾಯಲ್' ಅಭಿಮಾನಿಗಳಿಗೆ ರಜತ್ ಪಾಟಿದಾರ್ ನೀಡಿದ ಸಂದೇಶ ಏನು?

"ನಾನು ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಚಿನ್ನಸ್ವಾಮಿ ಮಾತ್ರವಲ್ಲ, ನಾವು ಎಲ್ಲಿಗೆ ಹೋದರೂ ನಮ್ಮ ತವರಿನಲ್ಲಿದಂತೆ ಭಾಸವಾಗುತ್ತದೆ.

ಬೆಂಗಳೂರು: ಚಂಡೀಗಢದ ಮುಲ್ಲನಪುರದಲ್ಲಿ ನಿನ್ನೆ ನಡೆದ ಐಪಿಎಲ್ 2025 ಕ್ವಾಲಿಫೈಯರ್-1 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಫೈನಲ್ ಗೆ ಲಗ್ಗೆ ಇಡುವಲ್ಲಿ ಬೆಂಬಲಿಸಿದ ಆರ್ ಸಿಬಿ ಅಭಿಮಾನಿಗಳಿಗೆ ರಜತ್ ಪಾಟಿದಾರ್ ಸಂದೇಶ ನೀಡಿದ್ದಾರೆ.

ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಮಾತನಾಡಿದ RCB ನಾಯಕ, ಹೋದಲ್ಲೆಲ್ಲಾ ತಂಡವನ್ನು ಬೆಂಬಲಿಸುತ್ತಿರುವುದಕ್ಕೆ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ಅಭಿಮಾನಿಗಳನ್ನು ತಂಡವೂ ಪ್ರೀತಿಸುತ್ತಿದೆ. ಇನ್ನೊಂದು ಪಂದ್ಯವಷ್ಟೇ ಎಲ್ಲರೂ ಒಟ್ಟಿಗೆ ಸಂಭ್ರಮಾಚರಣೆ ಮಾಡೋಣ ಎಂದರು.

"ನಾನು ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಚಿನ್ನಸ್ವಾಮಿ ಮಾತ್ರವಲ್ಲ, ನಾವು ಎಲ್ಲಿಗೆ ಹೋದರೂ ನಮ್ಮ ತವರಿನಲ್ಲಿದಂತೆ ಭಾಸವಾಗುತ್ತದೆ. ನಾವೆಲ್ಲರೂ ನಿಮ್ಮನ್ನು ಪ್ರೀತಿಸುತ್ತೇವೆ. ಇನ್ನು ಒಂದೇ ಒಂದು ಪಂದ್ಯ ಮಾತ್ರ. ಎಲ್ಲರೂ ಒಟ್ಟಿಗೆ ಆಚರಿಸೋಣ" ಎಂದು ಪಾಟಿದಾರ್ ಹೇಳಿದರು.

ಬೌಲಿಂಗ್ ಪ್ಲಾನ್ ನಿಖರವಾಗಿತ್ತು. ಸುಯಶ್ ಬೌಲಿಂಗ್ ಅದ್ಭುತವಾಗಿತ್ತು. ಅದೇ ರೀತಿ ಪಿಲ್ ಸಾಲ್ಟ್ ಬಗ್ಗೆಯೂ ಕೊಂಡಾಡಿದ ಪಾಟಿದಾರ್, ನಾನು ಅವರ ದೊಡ್ಡ ಅಭಿಮಾನಿ. ಬಹುತೇಕ ಪಂದ್ಯದಲ್ಲಿ ಇದೇ ರೀತಿ ಅವರು ಆಡಿದ್ದಾರೆ ಎಂದು ತಿಳಿಸಿದರು.

ಆರ್ ಸಿಬಿ ಇದೀಗ ಜೂನ್ 3 ರಂದು ಅಹಮದಾಬಾದಿನಲ್ಲಿ ನಡೆಯಲಿರುವ ಫೈನಲ್ ಪಂದ್ಯದತ್ತ ಕಾತುರದಿಂದ ಕಾಯುತ್ತಿದ್ದು, ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿಹಿಡಿಯುವ ವಿಶ್ವಾಸದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್