ರಜತ್ ಪಾಟಿದಾರ್ 
ಕ್ರಿಕೆಟ್

IPL 2025: ಫೈನಲ್ ಗೆ RCB; 'ರಾಯಲ್' ಅಭಿಮಾನಿಗಳಿಗೆ ರಜತ್ ಪಾಟಿದಾರ್ ನೀಡಿದ ಸಂದೇಶ ಏನು?

"ನಾನು ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಚಿನ್ನಸ್ವಾಮಿ ಮಾತ್ರವಲ್ಲ, ನಾವು ಎಲ್ಲಿಗೆ ಹೋದರೂ ನಮ್ಮ ತವರಿನಲ್ಲಿದಂತೆ ಭಾಸವಾಗುತ್ತದೆ.

ಬೆಂಗಳೂರು: ಚಂಡೀಗಢದ ಮುಲ್ಲನಪುರದಲ್ಲಿ ನಿನ್ನೆ ನಡೆದ ಐಪಿಎಲ್ 2025 ಕ್ವಾಲಿಫೈಯರ್-1 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಫೈನಲ್ ಗೆ ಲಗ್ಗೆ ಇಡುವಲ್ಲಿ ಬೆಂಬಲಿಸಿದ ಆರ್ ಸಿಬಿ ಅಭಿಮಾನಿಗಳಿಗೆ ರಜತ್ ಪಾಟಿದಾರ್ ಸಂದೇಶ ನೀಡಿದ್ದಾರೆ.

ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಮಾತನಾಡಿದ RCB ನಾಯಕ, ಹೋದಲ್ಲೆಲ್ಲಾ ತಂಡವನ್ನು ಬೆಂಬಲಿಸುತ್ತಿರುವುದಕ್ಕೆ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ಅಭಿಮಾನಿಗಳನ್ನು ತಂಡವೂ ಪ್ರೀತಿಸುತ್ತಿದೆ. ಇನ್ನೊಂದು ಪಂದ್ಯವಷ್ಟೇ ಎಲ್ಲರೂ ಒಟ್ಟಿಗೆ ಸಂಭ್ರಮಾಚರಣೆ ಮಾಡೋಣ ಎಂದರು.

"ನಾನು ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಚಿನ್ನಸ್ವಾಮಿ ಮಾತ್ರವಲ್ಲ, ನಾವು ಎಲ್ಲಿಗೆ ಹೋದರೂ ನಮ್ಮ ತವರಿನಲ್ಲಿದಂತೆ ಭಾಸವಾಗುತ್ತದೆ. ನಾವೆಲ್ಲರೂ ನಿಮ್ಮನ್ನು ಪ್ರೀತಿಸುತ್ತೇವೆ. ಇನ್ನು ಒಂದೇ ಒಂದು ಪಂದ್ಯ ಮಾತ್ರ. ಎಲ್ಲರೂ ಒಟ್ಟಿಗೆ ಆಚರಿಸೋಣ" ಎಂದು ಪಾಟಿದಾರ್ ಹೇಳಿದರು.

ಬೌಲಿಂಗ್ ಪ್ಲಾನ್ ನಿಖರವಾಗಿತ್ತು. ಸುಯಶ್ ಬೌಲಿಂಗ್ ಅದ್ಭುತವಾಗಿತ್ತು. ಅದೇ ರೀತಿ ಪಿಲ್ ಸಾಲ್ಟ್ ಬಗ್ಗೆಯೂ ಕೊಂಡಾಡಿದ ಪಾಟಿದಾರ್, ನಾನು ಅವರ ದೊಡ್ಡ ಅಭಿಮಾನಿ. ಬಹುತೇಕ ಪಂದ್ಯದಲ್ಲಿ ಇದೇ ರೀತಿ ಅವರು ಆಡಿದ್ದಾರೆ ಎಂದು ತಿಳಿಸಿದರು.

ಆರ್ ಸಿಬಿ ಇದೀಗ ಜೂನ್ 3 ರಂದು ಅಹಮದಾಬಾದಿನಲ್ಲಿ ನಡೆಯಲಿರುವ ಫೈನಲ್ ಪಂದ್ಯದತ್ತ ಕಾತುರದಿಂದ ಕಾಯುತ್ತಿದ್ದು, ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿಹಿಡಿಯುವ ವಿಶ್ವಾಸದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT