ಕೆಎಲ್ ರಾಹುಲ್ 
ಕ್ರಿಕೆಟ್

ಎರಡನೇ ಟೆಸ್ಟ್‌ ಪಂದ್ಯದ ವೇಳೆಗೆ ಭಾರತ ಎ ತಂಡ ಸೇರಿಕೊಳ್ಳುವುದಾಗಿ BCCI ಗೆ ಕೆಎಲ್ ರಾಹುಲ್ ಸಂದೇಶ

ಮೇ 30ರಂದು ಕ್ಯಾಂಟರ್ಬರಿಯಲ್ಲಿ ಆರಂಭವಾಗುವ ಮೊದಲ ಟೆಸ್ಟ್ ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ.

ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಐಪಿಎಲ್ 2025ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ ತಮ್ಮ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ಅನ್ನು ಪ್ಲೇಆಫ್‌ಗೆ ಕರೆದೊಯ್ಯಲು ಸಾಧ್ಯವಾಗಲಿಲ್ಲ. ಜೂನ್ 20ರಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಇದೀಗ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ನಾಲ್ಕು ದಿನಗಳ ಟೆಸ್ಟ್ ನಲ್ಲಿ ಭಾರತ ಎ ತಂಡದಲ್ಲಿ ಆಡಲು ನಿರ್ಧರಿಸಿದ್ದು, ಎರಡನೇ ಟೆಸ್ಟ್‌ನಲ್ಲಿ ಆಡಲು ಬಯಸುವುದಾಗಿ ರಾಹುಲ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಮೇ 30ರಂದು ಕ್ಯಾಂಟರ್ಬರಿಯಲ್ಲಿ ಆರಂಭವಾಗುವ ಮೊದಲ ಪಂದ್ಯಕ್ಕೆ ಸಮಯಕ್ಕೆ ಸರಿಯಾಗಿ ತಂಡಕ್ಕೆ ಸೇರಲು ಸಾಧ್ಯವಾಗದಿದ್ದರೂ, ಎರಡನೇ ಪಂದ್ಯಕ್ಕೆ ತಂಡದಲ್ಲಿ ಸೇರಿಕೊಳ್ಳುವುದಾಗಿ ಬಿಸಿಸಿಐ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರಿಗೆ ತಿಳಿಸಲಾಗಿದೆ ಎನ್ನಲಾಗಿದೆ.

'ರಾಹುಲ್ ಸೋಮವಾರ ಇಂಗ್ಲೆಂಡ್‌ಗೆ ತೆರಳಲಿದ್ದು, ಭಾರತ ಎ ತಂಡದೊಂದಿಗೆ ಎರಡನೇ ಟೆಸ್ಟ್ ಆಡಲಿದ್ದಾರೆ. ಅವರು ಸರಣಿಯಲ್ಲಿ ಐದು ಟೆಸ್ಟ್ ಪಂದ್ಯಗಳನ್ನು ಆಡಲಿರುವ ಹಿರಿಯ ಪುರುಷರ ತಂಡದ ಭಾಗವಾಗಿರುವುದರಿಂದ, ಈ ಪಂದ್ಯಗಳಿಂದ ಅವರಿಗೆ ಆಟದ ಸಮಯ ಮತ್ತು ಅಭ್ಯಾಸ ಸಿಗುತ್ತದೆ' ಎಂದು ಮೂಲವೊಂದನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇಂಗ್ಲೆಂಡ್ ಲಯನ್ಸ್ ಮತ್ತು ಭಾರತ ಎ ನಡುವಿನ ಎರಡನೇ ಟೆಸ್ಟ್ ಜೂನ್ 06 ರಂದು ಪ್ರಾರಂಭವಾಗುತ್ತದೆ. ನಂತರ ಭಾರತ ತಂಡವು ಜೂನ್ 13ರಂದು ಬೆಕೆನ್‌ಹ್ಯಾಮ್‌ನಲ್ಲಿ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಭಾಗಿಯಾಗಲಿದೆ. 5 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಜೂನ್ 20 ರಂದು ಲೀಡ್ಸ್‌ನಲ್ಲಿ ಪ್ರಾರಂಭವಾಗುತ್ತದೆ.

ಇತ್ತೀಚೆಗೆ ಸ್ಕೈ ಸ್ಪೋರ್ಟ್ಸ್‌ಗೆ ನೀಡಿದ ಸಂದರ್ಶನದಲ್ಲಿ ರಾಹುಲ್, 'ನನಗೆ ರೆಡ್ ಬಾಲ್ ಕ್ರಿಕೆಟ್ ತುಂಬಾ ಇಷ್ಟ. ನನ್ನಿಂದ ಅಥವಾ ಆ ಭಾರತ ತಂಡದ ಭಾಗವಾಗಿರುವ ಯಾರಿಂದಲೂ ನೀವು ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ತಂಡದಲ್ಲಿ ನಾನು ಮಾತನಾಡಿರುವ ಪ್ರತಿಯೊಬ್ಬರೂ ನಾವೆಲ್ಲರೂ ಟೆಸ್ಟ್ ಕ್ರಿಕೆಟ್‌ನ ವಿಷಯದಲ್ಲಿ ಒಂದೇ ಪುಟದಲ್ಲಿದ್ದೇವೆ. ನಮಗೆ ಟೆಸ್ಟ್ ಕ್ರಿಕೆಟ್ ನಂಬರ್ ಒನ್ ಆಗಿದೆ. ನಾವು ಟೆಸ್ಟ್ ಕ್ರಿಕೆಟ್ ಆಡಲು ಇಷ್ಟಪಡುತ್ತೇವೆ ಮತ್ತು ಅದು ನನಗೆ ಬದಲಾಗಿಲ್ಲ' ಎಂದು ರಾಹುಲ್ ಹೇಳಿದ್ದರು.

'ನಾನು ಟೆಸ್ಟ್ ಕ್ರಿಕೆಟ್ ನೋಡುತ್ತಾ ಬೆಳೆದೆ. ನೀವು ಇಂಗ್ಲೆಂಡ್ ಪರ ಆಡುವುದನ್ನು ನೋಡುತ್ತಾ ಬೆಳೆದೆ. ನಾನು ಬೆಳಿಗ್ಗೆ ಐದು ಗಂಟೆಗೆ ಎದ್ದು ನನ್ನ ತಂದೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಕ್ರಿಕೆಟ್ ನೋಡುತ್ತಿದ್ದೆ. ಅವರಿಗೂ ಕ್ರಿಕೆಟ್ ನೋಡುವುದು ತುಂಬಾ ಇಷ್ಟ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT