ಸೂರ್ಯಕುಮಾರ್ ಯಾದವ್-ಹ್ಯಾರಿಸ್ ರೌಫ್ 
ಕ್ರಿಕೆಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2025ರ ಮೂರು ಪಂದ್ಯಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶಿಕ್ಷೆಯನ್ನು ಅಧಿಕೃತವಾಗಿ ಘೋಷಿಸಿದೆ. ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾದವು.

ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2025ರ ಮೂರು ಪಂದ್ಯಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶಿಕ್ಷೆಯನ್ನು ಅಧಿಕೃತವಾಗಿ ಘೋಷಿಸಿದೆ. ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾದವು. ಸೆಪ್ಟೆಂಬರ್ 14ರಂದು ಗುಂಪು ಹಂತದಲ್ಲಿ ಅವರು ಮೊದಲು, ನಂತರ ಸೆಪ್ಟೆಂಬರ್ 18 ರಂದು ಸೂಪರ್ ಫೋರ್ ಹಂತದಲ್ಲಿ ಮತ್ತು ಅಂತಿಮವಾಗಿ ಸೆಪ್ಟೆಂಬರ್ 28 ರಂದು ಫೈನಲ್‌ನಲ್ಲಿ ಸೆಣೆಸಿದ್ದವು.

ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರ ಪಂದ್ಯ ಶುಲ್ಕದ 30 ಪ್ರತಿಶತ ದಂಡ ವಿಧಿಸಲಾಯಿತು. ಸೆಪ್ಟೆಂಬರ್ 14ರ ಪಂದ್ಯಕ್ಕಾಗಿ ಅವರ ಖಾತೆಗೆ ಎರಡು ಡಿಮೆರಿಟ್ ಅಂಕಗಳನ್ನು ಸೇರಿಸಲಾಗಿದೆ. ಏಷ್ಯಾ ಕಪ್ 2025ರ ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧದ ಗೆಲುವಿನ ನಂತರ ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ಯಾದವ್ ಗೌರವ ಸಲ್ಲಿಸಿದ್ದರು. ಯಾದವ್ ಈ ಗೆಲುವನ್ನು ಭಾರತೀಯ ಸೇನೆಗೆ ಅರ್ಪಿಸಿದರು. ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳ ಕುಟುಂಬಗಳೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದರು. ಈ ಘಟನೆಯ ನಂತರ, ಪಾಕಿಸ್ತಾನವು ಭಾರತೀಯ ನಾಯಕನ ವಿರುದ್ಧ ಅಧಿಕೃತ ದೂರು ದಾಖಲಿಸಿತು.

ಐಸಿಸಿ ಹೇಳಿಕೆಯಲ್ಲಿ ಸೂರ್ಯಕುಮಾರ್ ಯಾದವ್ (ಭಾರತ) ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.21 ಅನ್ನು ಉಲ್ಲಂಘಿಸಿದ್ದಕ್ಕಾಗಿ ತಪ್ಪಿತಸ್ಥರೆಂದು ಕಂಡುಬಂದಿದೆ. ಇದು ಪಂದ್ಯಕ್ಕೆ ಅಪಖ್ಯಾತಿ ತರುವ ನಡವಳಿಕೆಗೆ ಸಂಬಂಧಿಸಿದೆ. ಅವರಿಗೆ ಪಂದ್ಯ ಶುಲ್ಕದ 30 ಪ್ರತಿಶತ ದಂಡ ಮತ್ತು ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ಕಠಿಣ ಶಿಕ್ಷೆ ನೀಡಲಾಗಿದೆ. ಇದೇ ವೇಳೆ ತಂಡದ ಸಹ ಆಟಗಾರ ಸಾಹಿಬ್ಜಾದಾ ಫರ್ಹಾನ್ ಅವರಿಗೆ ಎಚ್ಚರಿಕೆ ನೀಡಲಾಯಿತು. ಸೆಪ್ಟೆಂಬರ್ 14 ಮತ್ತು 28 ರಂದು ನಡೆದ ಪಂದ್ಯಗಳಿಗೆ ರೌಫ್ ಅವರನ್ನು ನಿಷೇಧಿಸಲಾಯಿತು. ಅವರಿಗೆ ಪಂದ್ಯ ಶುಲ್ಕದ 30 ಪ್ರತಿಶತ ದಂಡ ಮತ್ತು ಪ್ರತಿ ಪಂದ್ಯಕ್ಕೆ ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಯಿತು. ಇದರಿಂದಾಗಿ 24 ತಿಂಗಳೊಳಗೆ ಅವರ ಒಟ್ಟು ಡಿಮೆರಿಟ್ ಅಂಕಗಳು ನಾಲ್ಕು. ಪರಿಣಾಮವಾಗಿ, ಐಸಿಸಿ ಅವರನ್ನು ಎರಡು ಪಂದ್ಯಗಳಿಗೆ ನಿಷೇಧಿಸಿತು.

ಹ್ಯಾರಿಸ್ ಭಾರತೀಯ ಅಭಿಮಾನಿಗಳ ಕಡೆಗೆ ವಿವಾದಾತ್ಮಕ '6-0' ಸನ್ನೆ ಮಾಡಿದ್ದರು. ಅವರು ಗಾಳಿಯಿಂದ ಬೀಳುವ ವಿಮಾನವನ್ನು ಸಹ ಅನುಕರಿಸಿದರು. ಈ ಸನ್ನೆಗೆ ಸಂಬಂಧಿಸಿದಂತೆ ಬಿಸಿಸಿಐ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗೆ ದೂರು ನೀಡಿದ್ದು, ಪಂದ್ಯದ ರೆಫರಿ ರಿಚಿ ರಿಚರ್ಡ್ಸನ್ ಅಧ್ಯಕ್ಷತೆಯಲ್ಲಿ ನಡೆದ ಅಧಿಕೃತ ವಿಚಾರಣೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಏಷ್ಯಾ ಕಪ್‌ನಲ್ಲಿ ಗನ್ ಸೆಲೆಬ್ರೇಷನ್ ಮಾಡಿದ ಸಾಹಿಬ್‌ಜಾದಾ ಫರ್ಹಾನ್ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಐಸಿಸಿ, ಫರ್ಹಾನ್‌ಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಿದ್ದು ಅಧಿಕೃತ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಸಾವು

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 28 ಕೋಟಿ ರೂ. ಖರ್ಚು, ಯಾವುದಕ್ಕೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಒಡಿಶಾದ ರೂರ್ಕೆಲಾ ಬಳಿ ಸಣ್ಣ ವಿಮಾನ ಪತನ; ಪೈಲಟ್ ಸೇರಿ ಆರು ಜನರಿಗೆ ಗಂಭೀರ ಗಾಯ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

SCROLL FOR NEXT