ಕರ್ನಾಟಕದ ಮಯಾಂಕ್ ಅಗರ್ವಾಲ್ 
ಕ್ರಿಕೆಟ್

Ranji Trophy 2025-26: ಮಿಂಚಿದ ಕನ್ನಡಿಗರು, ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭಾರಿ ಮುನ್ನಡೆ

ನಾಸಿಕ್ ನ ಗಾಲ್ಫ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿದ್ದು, ಆ ಮೂಲಕ 267 ರನ್ ಮುನ್ನಡೆ ಸಾಧಿಸಿದೆ.

ನಾಸಿಕ್: ರಣಜಿ ಟ್ರೋಫಿ 2025-26ರ ಟೂರ್ನಿಯಲ್ಲಿ ಕರ್ನಾಟಕ ತಂಡದ ಪ್ರಾಬಲ್ಯ ಮುಂದುವರೆದಿದ್ದು, ಮಹಾರಾಷ್ಟ್ರ ವಿರುದ್ಧ ಭಾರಿ ಮುನ್ನಡೆ ಸಾಧಿಸಿದೆ.

ನಾಸಿಕ್ ನ ಗಾಲ್ಫ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿದ್ದು, ಆ ಮೂಲಕ 267 ರನ್ ಮುನ್ನಡೆ ಸಾಧಿಸಿದೆ.

ಕರ್ನಾಟಕ ಪರ 2ನೇ ಇನ್ನಿಂಗ್ಸ್ ನಲ್ಲಿ ಮಯಾಂಕ್ ಅಗರ್ವಾಲ್ ಶತಕ ಸಿಡಿಸಿದ್ದು, ಅಭಿನವ್ ಮನೋಹರ್ ಅಜೇಯ 62 ರನ್ ಗಳಿಸಿದ್ದಾರೆ. 4ನೇ ದಿನದಾಟದ ಭೋಜನ ವಿರಾಮದ ವೇಳೆಗೆ 254 ರನ್ ಕಲೆಹಾಕಿದೆ.

ಮಯಾಂಕ್ ಅದ್ಭುತ ಬ್ಯಾಟಿಂಗ್

ಇನ್ನು ಈ ಪಂದ್ಯದಲ್ಲಿ ಕನ್ನಡಿಗ ಮಯಾಂಗ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿದ್ದು, 249 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 8 ಬೌಂಡರಿ ಸಹಿತ 103 ರನ್ ಕಲೆಹಾಕಿ ಸಿದ್ದೇಶ್ ವೀರ್ ಬೌಲಿಂಗ್ ನಲ್ಲಿ ಔಟಾದರು. ಇದಕ್ಕೂ ಮೊದಲು ಮೊದಲ ಇನ್ನಿಂಗ್ಸ್ ನಲ್ಲೂ ಮಯಾಂಕ್ ಅಗರ್ವಾಲ್ ಭರ್ಜರಿ ಬ್ಯಾಟಿಂಗ್ ನಡೆಸಿದ್ದರು.

ಮೊದಲ ಇನ್ನಿಂಗ್ಸ್ ನಲ್ಲಿ 181 ಎಸೆತ ಎದುರಿಸಿ 2 ಸಿಕ್ಸರ್ ಮತ್ತು 7 ಬೌಂಡರಿ ಸಹಿತ 80 ರನ್ ಕಲೆಹಾಕಿದ್ದರು. ಮಯಾಂಕ್ ಮಾತ್ರವಲ್ಲದೇ ಮೊದಲ ಇನ್ನಿಂಗ್ಸ್ ನಲ್ಲಿ ಶ್ರೇಯಸ್ ಗೋಪಾಲ್ ಕೂಡ ಉತ್ತಮ ಇನ್ನಿಂಗ್ಸ್ ಕಟ್ಟಿದ್ದರು. 162 ಎಸೆತಗಳನ್ನು ಎದುರಿಸಿದ್ದ ಶ್ರೇಯಸ್ ಗೋಪಾಲ್ 9 ಬೌಂಡರಿ ಸಹಿತ 71 ರನ್ ಕಲೆ ಹಾಕಿದ್ದರು.

ಅಂಕಪಟ್ಟಿಯಲ್ಲೂ ಅಗ್ರಸ್ಥಾನ

ಇನ್ನು ಕರ್ನಾಟಕ ತಂಡ ತನ್ನ ಅದ್ಭುತ ಪ್ರದರ್ಶನದ ಮೂಲಕ ಗ್ರೂಪ್ ಬಿವಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ತಾನಾಡಿರುವ 3 ಪಂದ್ಯಗಳ ಪೈಕಿ 1 ರಲ್ಲಿ ಗೆದ್ದಿರುವ ಕರ್ನಾಟಕ ಒಟ್ಟು 11 ಅಂಕ ಹಾಗೂ +1.595 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಬಂಧಿತ ವೈದ್ಯೆಗೆ 'ಜೈಶ್ ಇ ಮಹಮದ್' ಉಗ್ರ ಸಂಘಟನೆಯ ಮಹಿಳಾ ಘಟಕ ಸ್ಥಾಪನೆ 'ಟಾಸ್ಕ್': ವರದಿ

ದೆಹಲಿ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರ ಬಂಧನ; NIA ತನಿಖೆ

ಮತಾಂಧತೆಯ ಸ್ಫೋಟ: ಕುಟುಂಬದ ಏಕೈಕ ಆಧಾರಗಳು ಬಲಿ; ಕಣ್ಣೀರ ಕಡಲಲ್ಲಿ ದಿಕ್ಕು ಕಾಣದಂತಾದ ಪೋಷಕರು, ಪತ್ನಿ, ಮಕ್ಕಳು!

ದೆಹಲಿ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ: ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ ಬಾಂಬ್ ಬ್ಲಾಸ್ಟ್, ಕನಿಷ್ಠ 12 ಮಂದಿ ಸಾವು

Delhi blast: 'ಅತ್ಯಂತ ಅಸಮರ್ಥ ಗೃಹ ಸಚಿವ' ಯಾರಾದರೂ ಇದ್ದರೆ ಅದು ಅಮಿತ್ ಶಾ; ಪ್ರಿಯಾಂಕಾ ಖರ್ಗೆ ಕಿಡಿ- Video

SCROLL FOR NEXT