ವಿಕೆಟ್ ಪಡೆದು ಸಂಭ್ರಮಿಸಿದ ಜಸ್ಪ್ರೀತ್ ಬುಮ್ರಾ. 
ಕ್ರಿಕೆಟ್

South Africa vs India Team, 1st Test: ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ; ಆರಂಭದಲ್ಲೇ ಮೂರು ವಿಕೆಟ್ ಪತನ!

ಭಾರತ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಆಡಲು ನಿರ್ಧರಿಸಿದ್ದು, ಸಾಯಿ ಸುದರ್ಶನ್ ಬದಲಿಗೆ ಧ್ರುವ್ ಜುರೇಲ್ ಅವರನ್ನು ಮತ್ತು ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XIನಲ್ಲಿ ಸೇರಿಸಿಕೊಳ್ಳಲಾಗಿದೆ.

ಕೋಲ್ಕತ್ತಾ: ಇಲ್ಲಿನ ಈಡನ್ಸ್ ಗಾರ್ಡನ್‌ನಲ್ಲಿ ಶುಕ್ರವಾರ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಜುಲೈನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್ ವೇಳೆ ಪಂತ್ ಅವರ ಕಾಲಿಗೆ ಗಾಯವಾಗಿತ್ತು. ಪಂತ್ ಇದೀಗ ಫಿಟ್ ಆಗಿದ್ದು, ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಭಾರತ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಆಡಲು ನಿರ್ಧರಿಸಿದ್ದು, ಸಾಯಿ ಸುದರ್ಶನ್ ಬದಲಿಗೆ ಧ್ರುವ್ ಜುರೇಲ್ ಅವರನ್ನು ಮತ್ತು ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XIನಲ್ಲಿ ಸೇರಿಸಿಕೊಳ್ಳಲಾಗಿದೆ.

ದಕ್ಷಿಣ ಆಫ್ರಿಕಾ ಪರ, ಗಾಯದಿಂದಾಗಿ ಪ್ರೀಮಿಯರ್ ವೇಗಿ ಕಗಿಸೊ ರಬಾಡ ತಂಡದಿಂದ ಹೊರಗುಳಿದಿದ್ದು, ಕಾರ್ಬಿನ್ ಬಾಷ್ ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ಐಡೆನ್ ಮಾರ್ಕ್ರಮ್, ರಿಯಾನ್ ರಿಕಲ್ಟನ್ ಮತ್ತು ನಾಯಕ ತೆಂಬಾ ಬವುಮಾ ವಿಕೆಟ್ ಒಪ್ಪಿಸಿದ್ದಾರೆ. ಭಾರತದ ಪರ ಬುಮ್ರಾ ಎರಡು ವಿಕೆಟ್ ಪಡೆದರೆ, ಕುಲದೀಪ್ ಯಾದವ್ ಒಂದು ವಿಕೆಟ್ ಕಬಳಿಸಿದ್ದಾರೆ. 20 ಓವರ್‌ಗಳ ಬಳಿಕ ದಕ್ಷಿಣ ಆಫ್ರಿಕಾ ತಂಡ 3 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿತ್ತು.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಮ್, ರಿಯಾನ್ ರಿಕಲ್ಟನ್, ವಿಯಾನ್ ಮುಲ್ಡರ್, ತೆಂಬಾ ಬವುಮಾ (ನಾಯಕ), ಟೋನಿ ಡಿ ಜೋರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್(ವಿಕೆಟ್ ಕೀಪರ್), ಸೈಮನ್ ಹಾರ್ಮರ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT