ರಿಷಬ್ ಪಂತ್ 
ಕ್ರಿಕೆಟ್

1st test: ಭಾರತದ ಸೋಲಿಗೆ ಆ 'ಇಬ್ಬರೇ ಕಾರಣ'; ಉಪ ನಾಯಕ ರಿಷಬ್ ಪಂತ್ ಹೇಳಿಕೆ

ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ.

ಕೋಲ್ಕತಾ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿನ ಭಾರತದ ಸೋಲಿಗೆ ಆ ಇಬ್ಬರು ಆಟಗಾರರೇ ಕಾರಣ ಎಂದು ಭಾರತ ಕ್ರಿಕೆಟ್ ತಂಡದ ಉಪ ನಾಯಕ ರಿಷಬ್ ಪಂತ್ ಹೇಳಿದ್ದಾರೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಪಂದ್ಯದ ಸೋಲಿನ ಬಳಿಕ ಮಾತನಾಡಿದ ತಂಡದ ಉಪನಾಯಕ ರಿಷಬ್ ಪಂತ್ , 'ದಕ್ಷಿಣ ಆಫ್ರಿಕಾ ನೀಡಿದ ಸುಲಭ ಗುರಿಯನ್ನು ನಾವು ಚೇಸ್ ಮಾಡಬೇಕಿತ್ತು. ಆದರೆ ನಾವು ಒತ್ತಡಕ್ಕೊಳಗಾದೆವು. ಇದರ ಸಂಪೂರ್ಣ ಲಾಭ ಪಡೆದ ಆಫ್ರಿಕಾ ಬೌಲರ್​​ಗಳಿಗೆ ಪಿಚ್ ಕೂಡ ಸಹಕಾರಿಯಾಯಿತು.

ಈ ಪಿಚ್​​​ನಲ್ಲಿ 120 ರನ್​ಗಳಿಸುವುದು ಕಷ್ಟಕರವಾಗಬಹುದು ಎಂದು ಗೊತ್ತಿತ್ತು. ಇದಾಗ್ಯೂ ನಾವು ಒತ್ತಡವನ್ನು ನಿಭಾಯಿಸಲು ವಿಫಲವಾದೆವು. ಈ ಸೋಲಿನ ಹೊರತಾಗಿಯೂ ಮುಂದಿನ ಪಂದ್ಯದಲ್ಲಿ ನಾವು ಕಂಬ್ಯಾಕ್ ಮಾಡುತ್ತೇವೆ' ಎಂದರು.

ಆ ಇಬ್ಬರೇ ಸೋಲಿಗೆ ಕಾರಣ

ಇದೇ ವೇಳೆ ಭಾರತ ತಂಡದ ಸೋಲಿಗೆ ಆ ಇಬ್ಬರೇ ಕಾರಣ ಎಂದು ರಿಷಬ್ ಪಂತ್ ಹೇಳಿದ್ದು, 'ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಗೆಲ್ಲಲು ಮುಖ್ಯ ಕಾರಣ ಟೆಂಬಾ ಬವುಮಾ ಹಾಗೂ ಕಾರ್ಬಿಕ್ ಬಾಷ್. ಏಕೆಂದರೆ ಈ ಇಬ್ಬರು 8ನೇ ವಿಕೆಟ್​ಗೆ 44 ರನ್​ಗಳ ಜೊತೆಯಾಟವಾಡಿದ್ದರು. ಈ ಪಾಲುದಾರಿಕೆಯ ಪಂದ್ಯದ ಫಲಿತಾಂಶವನ್ನೇ ಬದಲಿಸುವಂತೆ ಮಾಡಿತು' ಎಂದು ಹೇಳಿದರು.

ಅಂತೆಯೇ ಈ ಸೋಲು ನೋವುಂಟು ಮಾಡಿದೆ. ಇದಾಗ್ಯೂ ಗುವಾಹಟಿಯಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ನಾವು ಕಂಬ್ಯಾಕ್ ಮಾಡುತ್ತೇವೆ ಎಂದು ರಿಷಬ್ ಪಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ!

ಹೂಕೋಸು ಫೋಟೋ ಹಾಕಿ ಬಿಹಾರದ NDA ಗೆಲುವು ಸಂಭ್ರಮಿಸಿದ ಅಸ್ಸಾಂ ಬಿಜೆಪಿ ಸಚಿವ!: ಮುಸ್ಲಿಮ್ ನರಮೇಧ ನೆನಪಿಸಿದ್ದಕ್ಕೆ ಕಾಂಗ್ರೆಸ್ ಕೆಂಡ!

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!

SCROLL FOR NEXT