ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಸಿದ್ದರಾಮಯ್ಯ 
ಕ್ರಿಕೆಟ್

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು.

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿದ ಸಿದ್ದರಾಮಯ್ಯ ಆಟಗಾರ್ತಿಯರನ್ನು ಸನ್ಮಾನಿಸಿದರು. ಇದೇ ವೇಳೆ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT