ಸಾಂದರ್ಭಿಕ ಚಿತ್ರ 
ಕ್ರಿಕೆಟ್

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

ಈ ಬಾರಿ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಹೆಚ್ಚಿನ ಬೇಡಿಕೆಯ ಆಟಗಾರ್ತಿಯಾಗಲಿದ್ದಾರೆ ಎಂದು ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಮುಂಬೈ: ಇದೇ 27 ರಂದು ನವದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ (WPL) ಹರಾಜು ಪ್ರಕ್ರಿಯೆಯಲ್ಲಿ ಯಾರಿಗೆ ಡಿಮ್ಯಾಂಡ್ ಹೆಚ್ಚಾಗಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಒಟ್ಟು 277 ಆಟಗಾರ್ತಿಯರಲ್ಲಿ 194 ಭಾರತೀಯರು ಮತ್ತು 83 ವಿದೇಶಿ ಕ್ರಿಕೆಟಿಗರು ಹರಾಜಿನಲ್ಲಿ ಪಾಲ್ಗೊಳ್ಳಲಿದ್ದು, ಈ ಬಾರಿ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಹೆಚ್ಚಿನ ಬೇಡಿಕೆಯ ಆಟಗಾರ್ತಿಯಾಗಲಿದ್ದಾರೆ ಎಂದು ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

WPL 2026 ಹರಾಜಿನಲ್ಲಿ ಗರಿಷ್ಠ 73 ಸ್ಲಾಟ್ ಗಳು ಲಭ್ಯವಿದೆ. ಪ್ರತಿ ತಂಡವು 18 ಆಟಗಾರರನ್ನು ಹೊಂದಬಹುದು, ಅದರಲ್ಲಿ ಆರು ಮಂದಿ ವಿದೇಶಿ ಆಟಗಾರರಾಗಿರಬಹುದು. ಜಿಯೋಹಾಟ್‌ಸ್ಟಾರ್‌ನ ವಿಶೇಷ ಕಾರ್ಯಕ್ರಮ ಮೋಸ್ಟ್ ವಾಂಟೆಡ್ ಆಟಗಾರರ ಕುರಿತು ಚರ್ಚೆಯಲ್ಲಿ ಮಾತನಾಡಿದ ವೇದ ಕೃಷ್ಣಮೂರ್ತಿ, ಭಾರತೀಯ ಆಲ್ ರೌಂಡರ್ ಆಟಗಾರ್ತಿ ದೀಪ್ತಿ ಶರ್ಮಾ ಅವರ ಕೌಶಲ್ಯವನ್ನು ಗುಣಗಾನ ಮಾಡಿದರು. ಅಲ್ಲದೇ ಅವರು ಯಾಕೆ ಮೋಸ್ಟ್ ವಾಂಟೆಡ್ ಆಟಗಾರ್ತಿಯಾಗ್ತಾರೆ ಎಂಬುದಕ್ಕೆ ವಿವರಣೆ ನೀಡಿದರು.

ದೀಪ್ತಿ ಶರ್ಮಾ ಈ ಹಿಂದಿನ ಆವೃತ್ತಿಗಳಲ್ಲಿ ಮ್ಯಾಚ್ ವಿನ್ನರ್ ಎಂಬುದನ್ನು ತೋರಿಸಿದ್ದಾರೆ. ಬ್ಯಾಟಿಂಗ್ ಮತ್ತು ಬಾಲ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಮಹಿಳಾ ODI ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೆಗಾ ಹರಾಜಿನಲ್ಲಿ ಖಂಡಿತವಾಗಿಯೂ ಅವರ ಬೇಡಿಕೆ ಹೆಚ್ಚಾಗಲಿದೆ. ಪ್ರತಿ ಫ್ರಾಂಚೈಸಿಯೂ ಅವರನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವೇದಾ ಹೇಳಿದರು.

ಮೆಗಾ-ಹರಾಜಿನಲ್ಲಿ ಗುಜರಾತ್, ದೀಪ್ತಿಯನ್ನು ಖರೀದಿಸಬೇಕು ಎಂದು ಜಿಯೋಸ್ಟಾರ್ ತಜ್ಞೆ ಅಂಜುಮ್ ಚೋಪ್ರಾ ಹೇಳಿದರು.

ಗುಜರಾತ್ ಜೊತೆಗೆ, ಡೆಲ್ಲಿ ಕ್ಯಾಪಿಟಲ್ಸ್ ಕೂಡ ಶರ್ಮಾ ಅವರನ್ನು ಖರೀದಿಸಲು ಎದುರು ನೋಡುತ್ತಿದೆ. ಏಕೆಂದರೆ ಇದು ಅವರ ಬ್ಯಾಟಿಂಗ್ ಮತ್ತು ಬೌಲಿಂಗ್ ಅನ್ನು ಬಲಪಡಿಸುತ್ತದೆ. ತದನಂತರ ಮೂರನೇ ತಂಡವಾಗಿ ಯುಪಿ ವಾರಿಯರ್ಸ್ ಕೂಡಾ ದೀಪ್ತಿ ಖರೀದಿಸಲು ಆಸಕ್ತಿ ಹೊಂದಿದೆ ಎಂದು ಅಂಜುಮ್ ಹೇಳಿದರು.

ಭಾರತೀಯ ಬ್ಯಾಟರ್ ಹರ್ಲೀನ್ ಡಿಯೋಲ್ ಅವರನ್ನು ಬಿಡುಗಡೆ ಮಾಡುವ ಗುಜರಾತ್ ನಿರ್ಧಾರದ ಬಗ್ಗೆ ಚೋಪ್ರಾ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT