ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮೆಹೆಂದಿ ಕಾರ್ಯಕ್ರಮದಲ್ಲಿ ಪಲಾಕ್ ಮುಚ್ಚಲ್. 
ಕ್ರಿಕೆಟ್

ಅರ್ಧಕ್ಕೆ ನಿಂತ ಸ್ಮೃತಿ ಮಂಧಾನ ವಿವಾಹ; ಹೇಳಿಕೆ ಬಿಡುಗಡೆ ಮಾಡಿದ ಪಲಾಶ್ ಮುಚ್ಚಲ್ ಸೋದರಿ!

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸೂಪರ್‌ಸ್ಟಾರ್ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತದಂತಹ ಲಕ್ಷಣಗಳು ಕಾಣಿಸಿಕೊಂಡ ಕಾರಣ ಭಾನುವಾರ ಅವರ ವಿವಾಹ ಸಮಾರಂಭವನ್ನು ಮುಂದೂಡಬೇಕಾಯಿತು.

ಭಾರತೀಯ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಭಾನುವಾರ ಅನಾರೋಗ್ಯಕ್ಕೆ ಒಳಗಾದ ಕಾರಣ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರೊಂದಿಗಿನ ವಿವಾಹವನ್ನು ಮುಂದೂಡಲಾಗಿದ್ದು, ಆ ಸುತ್ತ ಎದ್ದಿರುವ ವದಂತಿಗಳಿಗೆ ವರನ ಸಹೋದರಿ ಪಲಾಕ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

'ಸ್ಮೃತಿ ಅವರ ತಂದೆಯ ಅನಾರೋಗ್ಯದ ಕಾರಣ, ಸ್ಮೃತಿ ಮತ್ತು ಪಲಾಶ್ ಅವರ ವಿವಾಹವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಈ ಸೂಕ್ಷ್ಮ ಸಮಯದಲ್ಲಿ ನೀವೆಲ್ಲರೂ ನಮ್ಮ ಕುಟುಂಬಗಳ ಗೌಪ್ಯತೆಯನ್ನು ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ' ಎಂದು ಅವರು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸೂಪರ್‌ಸ್ಟಾರ್ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತದಂತಹ ಲಕ್ಷಣಗಳು ಕಾಣಿಸಿಕೊಂಡ ಕಾರಣ ಭಾನುವಾರ ಅವರ ವಿವಾಹ ಸಮಾರಂಭವನ್ನು ಮುಂದೂಡಬೇಕಾಯಿತು. ಈ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಆಂಬ್ಯುಲೆನ್ಸ್ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಮೃತಿ ತನ್ನ ತಂದೆಯ ಅನುಪಸ್ಥಿತಿಯಲ್ಲಿ ಸಮಾರಂಭವನ್ನು ಮುಂದುವರಿಯಲು ನಿರಾಕರಿಸಿದರು. ಸ್ಮೃತಿ ಅವರ ಭಾವಿ ಪತಿ ಪಲಾಶ್ ಮುಚ್ಚಲ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು.

ವೈರಲ್ ಸೋಂಕು ಮತ್ತು ಹೆಚ್ಚಿದ ಅಸಿಡಿಟಿಯಿಂದಾಗಿ ಪಲಾಶ್ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗಬೇಕಾಯಿತು. ಆದಾಗ್ಯೂ, ಸಮಸ್ಯೆ ಗಂಭೀರವಾಗಿರಲಿಲ್ಲ. ಚಿಕಿತ್ಸೆ ಪಡೆದ ನಂತರ, ಪಲಾಶ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು NDTVಗೆ ದೃಢಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!