ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ 
ಕ್ರಿಕೆಟ್

ಅರ್ಧಕ್ಕೆ ನಿಂತ ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ; ಕೌನ್ ಬನೇಗಾ ಕರೋಡ್‌ಪತಿ ಸಂಚಿಕೆಗೆ ಗೈರು!

ಈ ಸಂಚಿಕೆಯಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಜೊತೆಗೆ ಹರ್ಲೀನ್ ಕೌರ್ ಡಿಯೋಲ್, ರಿಚಾ ಘೋಷ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಸ್ನೇಹ ರಾಣಾ ಮತ್ತು ಮುಖ್ಯ ತರಬೇತುದಾರ ಅಮೋಲ್ ಮುಜುಂದಾರ್ ಭಾಗವಹಿಸಲಿದ್ದಾರೆ.

ಕಳೆದೊಂದು ವಾರದಿಂದ ಕೆಲವು ವಿಚಾರಗಳಿಗಾಗಿ ಸುದ್ದಿಯಲ್ಲಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಇದೀಗ ಮತ್ತೊಮ್ಮೆ ವದಂತಿಗಳಿಗೆ ಆಹಾರವಾಗುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಪಲಾಶ್ ಮುಚ್ಚಲ್ ಅವರೊಂದಿಗೆ ಸ್ಮೃತಿ ಮದುವೆಯಾಗಿರಬೇಕಿತ್ತು. ಈ ತಿಂಗಳ ಆರಂಭದಲ್ಲಿ ವಿಶ್ವಕಪ್ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಹಲವು ಆಟಗಾರ್ತಿಯರು ಅಮಿತಾಬ್ ಬಚ್ಚನ್ ನಡೆಸಿಕೊಡುವ ಮುಂಬರುವ ಕೌನ್ ಬನೇಗಾ ಕರೋಡ್‌ಪತಿ 17 ರ ಸಂಚಿಕೆಯ ಭಾಗವಾಗಲಿದ್ದಾರೆ.

ಈ ಸಂಚಿಕೆಯಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಜೊತೆಗೆ ಹರ್ಲೀನ್ ಕೌರ್ ಡಿಯೋಲ್, ರಿಚಾ ಘೋಷ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಸ್ನೇಹ ರಾಣಾ ಮತ್ತು ಮುಖ್ಯ ತರಬೇತುದಾರ ಅಮೋಲ್ ಮುಜುಂದಾರ್ ಭಾಗವಹಿಸಲಿದ್ದಾರೆ. ಆದಾಗ್ಯೂ, ಅನೇಕ ವೀಕ್ಷಕರು ನೋಡಲು ಬಯಸುತ್ತಿದ್ದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಗೈರಾಗಿದ್ದಾರೆ.

ಸ್ಮೃತಿ ಮಂಧಾನಾ ಕ್ರಿಕೆಟ್‌ಗೆ ಮಾತ್ರವಲ್ಲದೆ ಅವರ ವೈಯಕ್ತಿಕ ಜೀವನದ ವಿಚಾರದಿಂದಲೂ ಈ ತಿಂಗಳು ಸುದ್ದಿಯಲ್ಲಿದ್ದಾರೆ. ನವೆಂಬರ್ 23 ರಂದು ಗಾಯಕ, ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರನ್ನು ವಿವಾಹವಾಗಬೇಕಿತ್ತು. ಆದರೆ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಬೇಕಾಗಿದ್ದರಿಂದ ಕೆಲವೇ ಗಂಟೆಗಳ ಮೊದಲು ವಿವಾಹವನ್ನು ರದ್ದುಗೊಳಿಸಲಾಯಿತು.

ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಸ್ಮೃತಿ ಮಂಧಾನಾ ಅವರು ತಮ್ಮ ನಿಶ್ಚಿತಾರ್ಥ ಮತ್ತು ಮದುವೆಗೆ ಸಂಬಂಧಿಸಿದ ಎಲ್ಲ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಿಂದ ಅಳಿಸಿದ್ದಾರೆ. ಅದರಲ್ಲಿ ಪ್ರಪೋಸಲ್ ವಿಡಿಯೋ ಕೂಡ ಸೇರಿದೆ. ಟೀಂ ಇಂಡಿಯಾದ ಸಹ ಆಟಗಾರ್ತಿಯರಾದ ಜೆಮಿಮಾ ರೊಡ್ರಿಗಸ್ ಮತ್ತು ಶ್ರೇಯಾಂಕಾ ಪಾಟೀಲ್ ಸೇರಿದಂತೆ ಅವರ ಆಪ್ತರು ಮದುವೆಗೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ತಮ್ಮ ಖಾತೆಗಳಿಂದ ತೆಗೆದುಹಾಕಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಸ್ಮೃತಿ ಅವರ ಅಭಿಮಾನಿಗಳು ಏನಾಯಿತು ಎಂದು ಕುತೂಹಲದಿಂದ ಎದುರು ನೋಡುತ್ತಿದ್ದು, ಸ್ಮೃತಿ ಅಥವಾ ಅವರ ಕುಟುಂಬವು ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ಬುಧವಾರ, ಸ್ಮೃತಿ ಅವರ ತಂದೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ, ಕುಟುಂಬ 'ಮುಂದೂಡಲ್ಪಟ್ಟ' ಮದುವೆಯ ಬಗ್ಗೆ ಇಲ್ಲಿಯವರೆಗೆ ಯಾವುದೇ ನವೀಕರಣವನ್ನು ಹಂಚಿಕೊಳ್ಳದಿರುವುದು ಮತ್ತಷ್ಟು ಊಹಾಪೋಹಗಳಿಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಕೇರಳಿಗರದ್ದು ಇದೆಂಥ ಮನಸ್ಥಿತಿ: ನಟಿ ಮಾಳವಿಕಾಗೆ ಗೋಮಾಂಸ ಇಷ್ಟನಾ? ತಿಂತೀರಾ ಅಂತ ಕೇಳಿದ ಪತ್ರಕರ್ತ; ನೆಟ್ಟಿಗರ ಆಕ್ರೋಶ, Video!

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

‘ಆಕೆಯ ಹಿಂದಿನ ಚಟುವಟಿಕೆಗಳು ಹೇಗಿದ್ದವು?’: ಕಂಗನಾಗೆ ಬಾಬಾ ರಾಮ್​ದೇವ್ ತೀವ್ರ ತರಾಟೆ; ಸಂಸದೆ ವಿರುದ್ಧ ಕ್ರಮ ಕೈಗೊಳ್ಳುವಂತೆ BJPಗೆ ಆಗ್ರಹ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ