ಗೌತಮ್ ಗಂಭೀರ್ ಗೆ ಮುಜುಗರ ತಂದ ಪ್ರೇಕ್ಷಕರು 
ಕ್ರಿಕೆಟ್

"Gautam Gambhir Hay Hay": ತವರು ಮೈದಾನದಲ್ಲೇ ಟೀಂ ಇಂಡಿಯಾ ಪ್ರಧಾನ ಕೋಚ್ ಗೆ ತೀವ್ರ ಮುಖಭಂಗ, ಪ್ರೇಕ್ಷಕರಿಂದ ಧಿಕ್ಕಾರ! Video

2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ವಿರುದ್ಧ 408 ರನ್ ಗಲ ಹೀನಾಯ ಸೋಲುಕಂಡಿತು.

ಗುವಾಹತಿ: ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ಭಗದ್ರಕೋಟೆಯಾಗಿದ್ದ ತವರಿನಲ್ಲೇ ಭಾರತ ಹೀನಾಯ ಪ್ರದರ್ಶನ ತೋರಿ ದಕ್ಷಿಣ ಆಫ್ರಿಕಾ ವಿರುದ್ಧವೂ ಮುಖಭಂಗ ಎದುರಿಸಿದ್ದು, ಇದಕ್ಕೆ ಕೋಚ್ ಗೌತಮ್ ಗಂಭೀರ್ ಅವರೇ ಕಾರಣ ಎಂದು ಪ್ರೇಕ್ಷಕರು ಧಿಕ್ಕಾರ ಕೂಗಿದ ಘಟನೆ ನಡೆದಿದೆ.

ಗುವಾಹತಿಯ ಬರ್ಸಾಪಾರಾ ಕ್ರೀಡಾಂಗಣದಲ್ಲಿ ಇಂದು ಅಂತ್ಯವಾದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ವಿರುದ್ಧ 408 ರನ್ ಗಲ ಹೀನಾಯ ಸೋಲುಕಂಡಿತು. ಈ ಮೂಲಕ ಭಾರತ ತವರಿನಲ್ಲೇ ಅತೀ ದೊಡ್ಡ ಹೀನಾಯ ಸೋಲು ಕಂಡಿತು. ಭಾರತದ ವಿರುದ್ಧ ತಂಡವೊಂದು ಭಾರತದಲ್ಲಿ ಗಳಿಸಿದ ಅತ್ಯಂತ ದೊಡ್ಡ ಗೆಲುವು ಇದಾಗಿದೆ.

ಗುವಾಹತಿಯ ಬರ್ಸಾಪಾರಾ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ 2ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 548 ರನ್ ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ ಕೇವಲ 140 ರನ್ ಗಳಿಗೇ ಆಲೌಟ್ ಆಗುವ ಮೂಲಕ ಬರೊಬ್ಬರಿ 408 ರನ್ ಗಳ ಅಂತರದ ಹೀನಾಯ ಸೋಲು ಕಂಡಿದೆ.

ಈ ಮೂಲಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕು ಎಂಬ ದಕ್ಷಿಣ ಆಫ್ರಿಕಾ ಕನಸು ಕೊನೆಗೂ ನನಸಾಗಿದ್ದು, ಬರೊಬ್ಬರಿ 26 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಹಿಂದೆ ಅಂದರೆ 1999ರಲ್ಲಿ ಕೊನೆಯ ಬಾರಿಗೆ ಭಾರತದಲ್ಲಿ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ಗೆದ್ದಿತ್ತು.

ಗೌತಮ್ ಗಂಭೀರ್ ವಿರುದ್ಧ ಧಿಕ್ಕಾರ ಕೂಗಿದ ಪ್ರೇಕ್ಷಕರು

ಇನ್ನು ಇಂದಿನ ಪಂದ್ಯ ಮುಕ್ತಾಯವಾಗುತ್ತಲೇ ಆಟಗಾರರ ಹಸ್ತಲಾಘವ ಪ್ರಕ್ರಿಯೆ ವೇಳೆ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಕೂಡ ಮೈದಾನಕ್ಕೆ ಆಗಮಿಸಿದ್ದರು. ಈ ವೇಳೆ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಗೌತಮ್ ಗಂಭೀರ್ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು.

Gautam Gambhir Hay Hay.. ಗೌತಮ್ ಗಂಭೀರ್ ಧಿಕ್ಕಾರ ಎಂದು ಕೂಗುತ್ತಿದ್ದರು. ಅಲ್ಲದೆ ಟೆಸ್ಟ್ ಕ್ರಿಕೆಟ್ ನ ಭಾರತದ ಭದ್ರಕೋಟೆ ಛಿದ್ರವಾಗಲು ನೀವೇ ಕಾರಣ ಎಂದು ಕಿಡಿಕಾರಿದರು.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು

India vs South Africa: ತವರಿನಲ್ಲಿ ಮತ್ತೊಮ್ಮೆ ಭಾರತಕ್ಕೆ ವೈಟ್‌ವಾಶ್ ಮುಖಭಂಗ: ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

ಟೆಸ್ಟ್ ಸರಣಿ ಸೋಲಿನ ನಂತರ ಕೋಚ್ ರಾಜೀನಾಮೆಗೆ ಹೆಚ್ಚಿದ ಒತ್ತಡ; BCCI ನಿರ್ಧಾರಕ್ಕೆ ಬಿಟ್ಟದ್ದು ಎಂದ ಗಂಭೀರ್

ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆಂದರೆ ಮದುವೆ ಮುರಿದು ಬಿದ್ದಿದೆ ಎಂದರ್ಥವಲ್ಲ: ಸುಪ್ರೀಂ ಕೋರ್ಟ್

ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದ ಹೀನಾಯ ಸೋಲು: ಟೀಂ ಇಂಡಿಯಾ ಕಳಪೆ ದಾಖಲೆಗಳ ಸುರಿಮಳೆ

SCROLL FOR NEXT