ರಜತ್ ಪಾಟಿದಾರ್ 
ಕ್ರಿಕೆಟ್

RCB ನಾಯಕ ರಜತ್ ಪಾಟಿದಾರ್ ಗೆ ಖುಲಾಯಿಸಿದ ಅದೃಷ್ಟ; ಮತ್ತೆ ನಾಯಕತ್ವ!

2025-26ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಗೆ ಮಧ್ಯಪ್ರದೇಶ ತಂಡದ ನಾಯಕನನ್ನಾಗಿ ಆರ್‌ಸಿಬಿ ತಂಡದ ಯಶಸ್ವಿ ನಾಯಕ, 32 ವರ್ಷದ ಬಲಗೈ ಬ್ಯಾಟರ್ ರಜತ್ ಪಾಟೀದಾರ್‌ ಅವರನ್ನು ನೇಮಕ ಮಾಡಲಾಗಿದೆ.

ಭೋಪಾಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಚೊಚ್ಚಲ ಐಪಿಎಲ್ ಟ್ರೋಫಿ ತಂದು ಕೊಟ್ಟಿದ್ದ ನಾಯಕ ರಜತ್ ಪಾಟಿದಾರ್ (Rajat Patidar)ಗೆ ಅದೃಷ್ಟ ಖುಲಾಯಿಸಿದ್ದು, ಮತ್ತೆ ನಾಯಕತ್ವ ಒಲಿದು ಬಂದಿದೆ.

ಹೌದು.. 2025-26ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಗೆ ಮಧ್ಯಪ್ರದೇಶ ತಂಡದ ನಾಯಕನನ್ನಾಗಿ ಆರ್‌ಸಿಬಿ ತಂಡದ ಯಶಸ್ವಿ ನಾಯಕ, 32 ವರ್ಷದ ಬಲಗೈ ಬ್ಯಾಟರ್ ರಜತ್ ಪಾಟೀದಾರ್‌ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​(ಎಂಪಿಸಿಎ) ಅಧಿಕಾರಿಯೊಬ್ಬರು ಶುಕ್ರವಾರ ರಾತ್ರಿ ಮಾಹಿತಿ ನೀಡಿದ್ದು, ರಜತ್ ಪಾಟಿದಾರ್ ನೇತೃತ್ವದ 15 ಸದಸ್ಯರ ಮಧ್ಯ ಪ್ರದೇಶ ತಂಡವನ್ನು ಘೋಷಣೆ ಮಾಡಲಾಗಿದೆ.

2025-26ನೇ ಸಾಲಿನ ರಣಜಿ ಟ್ರೋಫಿ ಅಕ್ಟೋಬರ್ 15 ರಿಂದ ಫೆಬ್ರವರಿ 28 ರವರೆಗೆ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತವು ಅಕ್ಟೋಬರ್ 15 ರಿಂದ ನವೆಂಬರ್ 19 ರವರೆಗೆ ನಡೆಯಲಿದ್ದು, ಎರಡನೇ ಸುತ್ತಿನ ಪಂದ್ಯಗಳು ಜನವರಿ 22 ರಿಂದ ಫೆಬ್ರವರಿ 1 ರವರೆಗೆ ನಡೆಯಲಿವೆ. ನಾಕೌಟ್ ಪಂದ್ಯಗಳು ಫೆಬ್ರವರಿ 6 ರಿಂದ 28 ರವರೆಗೆ ನಡೆಯಲಿವೆ.

ತಂಡ ಇಂತಿದೆ:

ರಜತ್ ಪಾಟೀದಾರ್‌ (ನಾಯಕ), ಯಶ್ ದುಬೆ, ಹರ್ಷ್ ಗಾವ್ಳಿ, ಶುಭಂ ಶರ್ಮಾ, ಹಿಮಾಂಶು ಮಂತ್ರಿ, ಹರ್‌ಪ್ರೀತ್ ಸಿಂಗ್, ವೆಂಕಟೇಶ್ ಅಯ್ಯರ್, ಸಾಗರ್ ಸೋಲಂಕಿ, ಕುಮಾರ್ ಕಾರ್ತಿಕೇಯ, ಸರಾಂಶ್ ಜೈನ್, ಅಧೀರ್ ಪ್ರತಾಪ್, ಆರ್ಯನ್ ಪಾಂಡೆ, ಅರ್ಷದ್ ಖಾನ್, ಅನುಭವ್ ಅಗರ್ವಾಲ್ ಮತ್ತು ಕುಲದೀಪ್ ಸೇನ್ ಇದ್ದಾರೆ.

ರಜತ್ ಪಾಟೀದಾರ್‌ 2025ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಚಾಂಪಿಯನ್ ಮಾಡಿದ್ದರು.

ಅದಾದ ಬಳಿಕ ಅವರ ಅದೃಷ್ಟ ಬದಲಾಗಿದ್ದು, ಸದ್ಯ ನಡೆಯುತ್ತಿರುವ ಇರಾನಿ ಕಪ್‌ಗೆ ರೆಸ್ಟ್ ಆಫ್ ಇಂಡಿಯಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ನಡುವೆ ಅವರಿಗೆ ಮಧ್ಯಪ್ರದೇಶ ರಣಜಿ ತಂಡದ ನಾಯಕ ಸ್ಥಾನವೂ ಒಲಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

Bengaluru: ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!

KRS ಪಕ್ಷದ ಕಾರ್ಯಕರ್ತರು V/S ಪೊಲೀಸರ ಸಂಘರ್ಷ: 'ಕೇಸ್' ದಾಖಲು! ಅಸಲಿ ಕಾರಣವೇನು?

SCROLL FOR NEXT