ಕರ್ನಾಟಕ ರಣಜಿ ತಂಡ 
ಕ್ರಿಕೆಟ್

Ranji Trophy 2025: ಕರ್ನಾಟಕ ತಂಡ ಪ್ರಕಟ; ಕನ್ನಡಿಗ Mayank Agarwal ಗೆ ಮತ್ತೆ ಸಾರಥ್ಯ!

ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ 15 ಸದಸ್ಯರ ಕರ್ನಾಟಕ ತಂಡ ಪ್ರಕಟಿಸಲಾಗಿದೆ.

ಬೆಂಗಳೂರು: ಮುಂಬರುವ ರಣಜಿ ಟ್ರೋಫಿ ಟೂರ್ನಿಗೆ ಕರ್ನಾಟಕ ತಂಡ ಪ್ರಕಟವಾಗಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ತಂಡ ಪ್ರಕಟಿಸಲಾಗಿದೆ.

ಈ ಹಿಂದೆಯೂ ಕೂಡ ಮಯಾಂಕ್ ಅಗರ್ವಾಲ್ ಕರ್ನಾಟಕ ತಂಡದ ಸಾರಥ್ಯ ವಹಿಸಿದ್ದರು. ಇದೀಗ ಮತ್ತೆ ಅವರದ್ದೇ ನೇತೃತ್ವದಲ್ಲಿ ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ 15 ಸದಸ್ಯರ ಕರ್ನಾಟಕ ತಂಡ ಪ್ರಕಟಿಸಲಾಗಿದೆ. ತಂಡದಲ್ಲಿ ನಿರೀಕ್ಷೆಯಂತೆಯೇ ಹಿರಿಯ ಆಟಗಾರ ಕರುಣ್ ನಾಯರ್ ಗೆ ಸ್ಥಾನ ನೀಡಲಾಗಿದೆ.

ಉಳಿದಂತೆ ಸ್ಮರಣ್, ಶ್ರೇಯಸ್ ಗೋಪಾಲ್, ವೈಶಾಖ್ ವಿಜಯ್ ಕುಮಾರ್, ವಿದ್ವತ್ ಕಾವೇರಪ್ಪ, ಅಭಿಲಾಶ್ ಶೆಟ್ಟಿ, ವೆಂಕಟೇಶ್ ಎಂ, ನಿಕಿನ್ ಜೋಸ್, ಅಭಿನವ್ ಮನೋಹರ್, ಅನೀಶ್ ಕೆವಿ, ಮೊಹ್ಸಿನ್ ಖಾನ್, ಸ್ಥಾನ ಗಿಟ್ಟಿಸಿದ್ದಾರೆ. ವಿಕೆಟ್ ಕೀಪರ್ ಗಳಾಗಿ ಶ್ರೀಜಿತ್ ಮತ್ತು ಕೃತಿಕಾ ಕೃಷ್ಣ ಸ್ಥಾನ ಪಡೆದಿದ್ದಾರೆ. ಉದಯೋನ್ಮುಖ ಸ್ಪಿನ್ನರ್ ಶಿಖರ್ ಶೆಟ್ಟಿಗೆ ಅವಕಾಶ ನೀಡಿರುವುದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!