ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 'ವಿಶ್ವ ದರ್ಜೆಯ' ಆಟಗಾರರು: ಆಸ್ಟ್ರೇಲಿಯಾ ಆಲ್‌ರೌಂಡರ್

ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮೆಲ್ಬೋರ್ನ್: ಆಸ್ಟ್ರೇಲಿಯಾದ ಉದಯೋನ್ಮುಖ ಆಲ್‌ರೌಂಡರ್ ಕೂಪರ್ ಕೊನೊಲಿ, ಮುಂಬರುವ ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರೊಂದಿಗೆ ತವರಿನಲ್ಲಿ ಮುಖಾಮುಖಿಯಾಗುವ ನಿರೀಕ್ಷೆಯನ್ನು ಆನಂದಿಸುತ್ತಿದ್ದಾರೆ. ಭಾರತೀಯ ಜೋಡಿಯನ್ನು 'ವಿಶ್ವ ದರ್ಜೆಯ ಆಟಗಾರರು' ಎಂದು ಕರೆದಿದ್ದಾರೆ.

ಭಾರತವು ಆಸ್ಟ್ರೇಲಿಯಾ ವಿರುದ್ಧ ಮುಂದಿನ ಭಾನುವಾರ ಪರ್ತ್‌ನಲ್ಲಿ ಪ್ರಾರಂಭವಾಗುವ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳನ್ನು ಆಡಲಿದೆ.

ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

'ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಿಶ್ವ ದರ್ಜೆಯ ಕ್ರಿಕೆಟಿಗರಾಗಿದ್ದು, ಅವರ ವಿರುದ್ಧ ಆಡುವುದು ರೋಮಾಂಚನಕಾರಿಯಾಗಿರುತ್ತದೆ. ಈ ಮೊದಲು ಅವರ ವಿರುದ್ಧ ಆಡಿದ್ದೇನೆ ಮತ್ತು ಅವರ 'ಪ್ರಭಾವ'ವನ್ನು ಅನುಭವಿಸಿದ್ದೇನೆ. ಅವರನ್ನು ನೋಡಿದಾಗ, ನನಗೆ ಅಂತಹ ಅನುಭವವಾಗಿರುತ್ತದೆ' ಎಂದು ಕೊನೊಲಿ 'ದಿ ವೆಸ್ಟ್ ಆಸ್ಟ್ರೇಲಿಯಾ'ಕ್ಕೆ ತಿಳಿಸಿದ್ದಾರೆ.

'ಅವರು ಈ ಪಂದ್ಯಕ್ಕೆ ಮರಳುತ್ತಿರುವುದು ರೋಮಾಂಚಕಾರಿಯಾಗಿದೆ. ಆ ಇಬ್ಬರು ಆಟಗಾರರ ಆಟವನ್ನು ವೀಕ್ಷಿಸಲು ಇಲ್ಲಿ ಬಹಳಷ್ಟು ಅಭಿಮಾನಿಗಳು ಕಾಯುತ್ತಿದ್ದಾರೆ ಮತ್ತು ನಾವು ಉತ್ತಮ ಕ್ರಿಕೆಟ್ ಆಡಲು ಉತ್ಸುಕರಾಗಿದ್ದೇವೆ. ಅವರು ಸಾಕಷ್ಟು ಬಲಿಷ್ಠ ತಂಡವನ್ನು ತರುತ್ತಿದ್ದಾರೆ. ಆದರೆ, ನಾವು ಸರಣಿಯನ್ನು ಗೆಲ್ಲಬಹುದು ಎಂದು ಆಶಿಸುತ್ತೇವೆ' ಎಂದರು.

'ಅದು ಒಂದು ಗೌರವ, ನಾನು ವಿರಾಟ್ ಅವರನ್ನು ಸ್ಪಷ್ಟವಾಗಿ ಗೌರವಿಸುತ್ತೇನೆ. ಅವರು ಒಳ್ಳೆಯ ಆಟಗಾರ. ನಾನು ಅವರೊಂದಿಗೆ ಹೆಚ್ಚು ಸಂವಹನ ನಡೆಸಿಲ್ಲ, ಆದರೆ ಅವರೊಂದಿಗೆ ಕೊನೆಯ ಬಾರಿಗೆ ಮೈದಾನ ಹಂಚಿಕೊಳ್ಳುವುದು ಒಂದು ಗೌರವ' ಎಂದು ಹೇಳಿದರು.

22 ವರ್ಷದ ಕೊನೊಲಿ ಆಸ್ಟ್ರೇಲಿಯಾದ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಮತ್ತು ಇತ್ತೀಚೆಗೆ ಲಕ್ನೋದಲ್ಲಿ ಎರಡು ಪ್ರಥಮ ದರ್ಜೆ ಪಂದ್ಯಗಳಲ್ಲಿ ಮತ್ತು ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಕಾನ್ಪುರದಲ್ಲಿ ಮೂರು ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಎ ಪರ ಆಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

SCROLL FOR NEXT