ಶುಭಮನ್ ಗಿಲ್  
ಕ್ರಿಕೆಟ್

2nd test, Day 2: ಆರಂಭದಲ್ಲೇ ಭಾರತಕ್ಕೆ ಆಘಾತ; ಭೋಜನ ವಿರಾಮದ ವೇಳೆಗೆ 427/4

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮೊದಲ ಅವಧಿಯಲ್ಲಿ ವೆಸ್ಟ್ ಇಂಡೀಸ್ ಮೇಲುಗೈ ಸಾಧಿಸಿದೆ.

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಆರಂಭದಲ್ಲೇ ಭಾರತ ಆಘಾತ ಎದುರಿಸಿದ್ದು, ಭೋಜನ ವಿರಾಮದ ವೇಳೆಗೆ ಭಾರತ 4 ವಿಕೆಟ್ ನಷ್ಟಕ್ಕೆ 427 ರನ್ ಕಲೆಹಾಕಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮೊದಲ ಅವಧಿಯಲ್ಲಿ ವೆಸ್ಟ್ ಇಂಡೀಸ್ ಮೇಲುಗೈ ಸಾಧಿಸಿದೆ.

ನಿನ್ನೆ ದಿನವಿಡೀ ವಿಕೆಟ್ ಪಡೆಯಲು ಪರದಾಡಿದ್ದ ವಿಂಡೀಸ್ ಪಡೆ ಇಂದು ದಿನದಾಟ ಎರಡನೇ ಓವರ್ ನಲ್ಲಿಯೇ ದ್ವಿಶತಕದತ್ತ ದಾಪುಗಾಲಿರಿಸಿದ್ದ ಯಶಸ್ವಿ ಜೈಸ್ವಾಲ್ ಅನಗತ್ಯ ರನೌಟ್ ಗೆ ಬಲಿಯಾಗಿದ್ದಾರೆ.

‌ನಿನ್ನೆ 173 ರನ್ ಸಿಡಿಸಿ ಅಜೇಯರಾಗಿದ್ದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ಇಂದು ಕೇವಲ 2 ರನ್ ಸೇರಿಸಿ ರನೌಟ್ ಆಗಿ ಹೊರನಡೆದರು. ಬಳಿಕ ಬಂದ ನಿತೀಶ್ ಕುಮಾರ್ ರೆಡ್ಡಿ 43 ರನ್ ಸಿಡಿಸಿ ಕೇವಲ 7 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡು ಔಟ್ ಆದರು.

ಬೃಹತ್ ಮೊತ್ತದತ್ತ ಭಾರತ

ಸದ್ಯ ಮೊದಲ ಸೆಷನ್ ಮುಕ್ತಾಯದ ಹೊತ್ತಿಗೆ ಟೀಂ ಇಂಡಿಯಾ 427 ರನ್‌ ಗಳಿಸಿ ಬೃಹತ್ ಮೊತ್ತ ಕಲೆಹಾಕುವತ್ತ ಹೆಜ್ಜೆ ಇಟ್ಟಿದೆ. ಮೊದಲ ದಿನದಾಟದಲ್ಲಿ 20 ರನ್ ಗಳಿಸಿ ಅಜೇಯರಾಗಿದ್ದ ನಾಯಕ ಶುಭಮನ್ ಗಿಲ್ (75*) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ (7*) ಅಜೇಯರಾಗಿದ್ದು, ಬ್ಯಾಟಿಂಗ್ ಮುಂದುವರೆಸಲಿದ್ದಾರೆ.

ವಿಂಡೀಸ್ ಪರ ಜೋಮೆಲ್ ವಾರಿಕನ್ 3 ವಿಕೆಟ್ ಪಡೆದುಕೊಂಡಿದ್ದಾರೆ.

ದ್ವಿಶತಕ ಮಿಸ್ ಮಾಡಿಕೊಂಡ ಜೈಸ್ವಾಲ್

ನಿನ್ನೆ ಮೊದಲ ದಿನದಾಟದ ಅಂತ್ಯಕ್ಕೆ 173 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್ ಇಂದು ತಮ್ಮ ಖಾತೆಗೆ ಮತ್ತೆರಡು ರನ್ ಗಳನ್ನು ಮಾತ್ರ ಸೇರಿಸಿದರು. ದಿನದಾಟದ 2ನೇ ಓವರ್ ನಲ್ಲಿಯೇ ಜೈಸ್ವಾಲ್ 175 ರನ್ ಗಳಿಸಿದ್ದಾಗ ಚಂದರ್ ಪಾಲ್ ಎಸೆದ ಅದ್ಭುತ ಥ್ರೋನಲ್ಲಿ ರನೌಟ್ ಗೆ ಬಲಿಯಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT