ಆಸ್ಟ್ರೇಲಿಯಾ ಕ್ರಿಕೆಟ್ ತಂಡ 
ಕ್ರಿಕೆಟ್

ಹ್ಯಾಂಡ್‌ಶೇಕ್ ವಿವಾದ: ಪಾಕ್ ಜೊತೆಗಿನ ಟೀಂ ಇಂಡಿಯಾ ನಡೆ ಅಣಕಿಸಿದ ಆಸ್ಟ್ರೇಲಿಯಾದ ಕ್ರಿಕೆಟಿಗರು! ವಿಡಿಯೋ

ಮುಂಬರುವ ಏಕದಿನ ಸರಣಿಗೆ ಮುಂಚಿತವಾಗಿ, ಆಸ್ಟ್ರೇಲಿಯಾದ ಕ್ರಿಕೆಟಿಗರು (ಪುರುಷರು ಮತ್ತು ಮಹಿಳೆಯರು ಇಬ್ಬರೂ) ಭಾರತದ ಹ್ಯಾಂಡ್‌ಶೇಕ್ ನಿರಾಕರಣೆ ನಿರ್ಧಾರವನ್ನು ಗುರಿಯಾಗಿಟ್ಟುಕೊಂಡು ಅಪಹಾಸ್ಯ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಏಷ್ಯಾ ಕಪ್ 2025ರ ಸಂದರ್ಭದಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಎದುರಾಳಿ ತಂಡವಾದ ಪಾಕಿಸ್ತಾನ ಆಟಗಾರರೊಂದಿಗೆ ಹ್ಯಾಂಡ್‌ಶೇಕ್ ನಿರಾಕರಿಸಿದ್ದು ಈಗಾಗಲೇ ಭಾರಿ ವಿವಾದಕ್ಕೆ ಕಾರಣವಾಗಿದೆ. ಗುಂಪು ಹಂತದ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ, ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ನಾಯಕ ಸಲ್ಮಾನ್ ಅಲಿ ಅಘಾ ಅವರೊಂದಿಗೆ ಹಸ್ತಲಾಘವ ಮಾಡಿಕೊಳ್ಳಲಿಲ್ಲ. ತಂಡದ ಉಳಿದವರೂ ಇದನ್ನೇ ಅನುಸರಿಸಿದರು ಮತ್ತು ಮೂರು ಬಾರಿ ಉಭಯ ತಂಡಗಳು ಮುಖಾಮುಖಿಯಾದಾಗಲೂ ಇದನ್ನೇ ಅನುಸರಿಸಲಾಯಿತು.

ಆದಾಗ್ಯೂ, ಮುಂಬರುವ ಭಾರತ ಮತ್ತು ಆಸ್ಟ್ರೇಲಿಯಾ ಏಕದಿನ ಸರಣಿಗೆ ಮುಂಚಿತವಾಗಿ, ಆಸ್ಟ್ರೇಲಿಯಾದ ಕ್ರಿಕೆಟಿಗರು (ಪುರುಷರು ಮತ್ತು ಮಹಿಳೆಯರು ಇಬ್ಬರೂ) ಭಾರತದ ಹ್ಯಾಂಡ್‌ಶೇಕ್ ನಿರಾಕರಣೆ ನಿರ್ಧಾರವನ್ನು ಗುರಿಯಾಗಿಟ್ಟುಕೊಂಡು ಅಪಹಾಸ್ಯ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಯೋ ಸ್ಪೋರ್ಟ್ಸ್ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ ಆ್ಯಂಕರ್ ಒಬ್ಬರು, 'ಭಾರತವು ಬಲಿಷ್ಠ ತಂಡವಾಗಿದ್ದು, ಅದು ಅದರ ಹಾದಿಯಲ್ಲಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ, ನಾವು ಒಂದು ನಿರ್ಣಾಯಕ ದೌರ್ಬಲ್ಯವನ್ನು ಗುರುತಿಸಿದ್ದೇವೆ' ಎಂದು ಹೇಳಿದ್ದಾರೆ.

'ಅವರು (ಭಾರತ) ಸಾಂಪ್ರದಾಯಿಕ ಶುಭಾಶಯಗಳ (ಹ್ಯಾಂಡ್‌ಶೇಕ್) ವಿನಿಮಯವನ್ನು ಇಷ್ಟಪಡುವುದಿಲ್ಲ ಎಂಬುದು ನಮಗೆ ತಿಳಿದಿದೆ. ಆದ್ದರಿಂದ ನಾವು ಚೆಂಡನ್ನು ಬೌಲ್ ಮಾಡುವ ಮೊದಲೇ ನಾವು ಆ ತಂತ್ರವನ್ನು ಬಳಸಿ ಅವರನ್ನು ದೂರವಿಡಬಹುದು' ಎಂದು ಹೇಳಿಕೆ ನೀಡಿದ್ದಾರೆ.

ಆಸ್ಟ್ರೇಲಿಯಾದ ಪುರುಷರ ಮತ್ತು ಮಹಿಳಾ ತಂಡದ ಕ್ರಿಕೆಟಿಗರು ಪ್ರತಿಕ್ರಿಯೆ ನೀಡಿದ್ದು, ಹ್ಯಾಂಡ್‌ಶೇಕ್ ಬದಲಿಗೆ ಭಾರತೀಯ ಆಟಗಾರರೊಂದಿಗೆ ನಾವು ಬೇರೆ ರೀತಿಯಲ್ಲಿ ಶುಭಾಶಯ ವಿನಿಮಯವನ್ನು ಪ್ರಯತ್ನಿಸಬಹುದು ಎಂದಿದ್ದಾರೆ.

ಈಮಧ್ಯೆ, ಆಸ್ಟ್ರೇಲಿಯಾ ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಸಂಪೂರ್ಣ ಫಿಟ್ನೆಸ್ ಅನ್ನು ಮರಳಿ ಪಡೆಯಲು ಹೋರಾಡುತ್ತಿದ್ದಾರೆ.

ಹಲವಾರು ವಾರಗಳ ಕಾಲ ಆಟದಿಂದ ಹೊರಗುಳಿದಿರುವ 32 ವರ್ಷದ ಅವರು, ನವೆಂಬರ್ 21 ರಿಂದ ಪ್ರಾರಂಭವಾಗುವ ಆಶಸ್‌ನ ಮೊದಲ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಮತ್ತು ಆಸ್ಟ್ರೇಲಿಯಾದ ವೈದ್ಯಕೀಯ ಸಿಬ್ಬಂದಿ ಅವರ ಮೇಲೆ ನಿಗಾ ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT