ವಿರಾಟ್ ಕೊಹ್ಲಿ 
ಕ್ರಿಕೆಟ್

'The leader, is back': ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ನಾಯಕ ಶುಭಮನ್ ಗಿಲ್‌ಗೆ ವಿರಾಟ್ ಕೊಹ್ಲಿ ಮಾರ್ಗದರ್ಶನ

ಭಾರತದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ಗೆ ಮರಳುವುದು ಅತ್ಯಂತ ನಿರಾಶಾದಾಯಕ ರೀತಿಯಲ್ಲಿ ಕೊನೆಗೊಂಡಿತು. ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು.

ಏಳು ತಿಂಗಳಿಗೂ ಹೆಚ್ಚು ಕಾಲದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಮರಳಿದ್ದು, ಲಕ್ಷಾಂತರ ಅಭಿಮಾನಿಗಳ ಆಸೆ ಈಡೇರಿದೆ. ಭಾನುವಾರ ಭಾರತದ ಜೆರ್ಸಿಯಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಂಡಿದ್ದು ಸ್ವಾಗತಾರ್ಹ ದೃಶ್ಯವಾಗಿತ್ತು. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಸ್ಟಾರ್ ಬ್ಯಾಟರ್‌ನ ಪ್ರತಿ ಕ್ಷಣವನ್ನು ಸವಿದರು. ಭಾರತದ ಫೀಲ್ಡಿಂಗ್ ಸಮಯದಲ್ಲಿ ಕೊಹ್ಲಿ ಬೌಲರ್‌ಗಳು ಮತ್ತು ನಾಯಕ ಶುಭಮನ್ ಗಿಲ್ ಅವರಿಗೆ ಮಾರ್ಗದರ್ಶನ ನೀಡುತ್ತಿದ್ದು ಕಂಡುಬಂತು.

ಭಾರತದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ಗೆ ಮರಳುವುದು ಅತ್ಯಂತ ನಿರಾಶಾದಾಯಕ ರೀತಿಯಲ್ಲಿ ಕೊನೆಗೊಂಡಿತು. ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಎಂಟು ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು. ಅವರು ಔಟಾದಾಗ, ಭಾರತ ಏಳು ಓವರ್‌ಗಳ ನಂತರ 2 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆಸ್ಟ್ರೇಲಿಯಾದ ಸ್ಪಿನ್-ಬೌಲಿಂಗ್ ಆಲ್‌ರೌಂಡರ್ ಕೂಪರ್ ಕೊನೊಲಿ ಅವರು ಕ್ಯಾಚ್ ಹಿಡಿದು ಕೊಹ್ಲಿಯನ್ನು ಪೆವಿಲಿಯನ್ ಕಡೆಗೆ ಕಳುಹಿಸಿದರು.

ಮಾರ್ಚ್ 9 ರಂದು ದುಬೈನಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದ ನಂತರ ಕೊಹ್ಲಿ ಮೊದಲ ಬಾರಿಗೆ ಏಕದಿನ ಪಂದ್ಯಕ್ಕೆ ಮರಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ, ಅವರು ಜೂನ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಸ್ಪರ್ಧಿಸಿದ್ದರು ಮತ್ತು ಅದಾದ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಜೂನ್‌ನಲ್ಲಿ ಐಪಿಎಲ್ ಮುಗಿದ ಬಳಿಕ ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಸಿದ್ದರು. ಜೇಮ್ಸ್ ಆಂಡರ್ಸನ್ ನಂತರ ಎಲ್ಲ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿಯನ್ನು ಎರಡು ಬಾರಿ ಶೂನ್ಯಕ್ಕೆ ಔಟ್ ಮಾಡಿದ ಎರಡನೇ ಬೌಲರ್ ಮಿಚೆಲ್ ಸ್ಟಾರ್ಕ್ ಆಗಿದ್ದಾರೆ.

ಕೊಹ್ಲಿಗಿಂತ ಮೊದಲು, ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ರೋಹಿತ್ ಶರ್ಮಾ ಅವರು ನಿರಾಶಾದಾಯಕ ಪ್ರದರ್ಶನ ನೀಡಿದರು. ಕೇವಲ ಎಂಟು ರನ್ ಗಳಿಸಿ ಜಾಶ್ ಹೇಜಲ್‌ವುಡ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಭಾರತದ ಪರ ಇದು ರೋಹಿತ್ ಅವರ 500ನೇ ಅಂತರರಾಷ್ಟ್ರೀಯ ಪಂದ್ಯವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT