ಶಮಾ ಮೊಹಮ್ಮದ್ 
ಕ್ರಿಕೆಟ್

ಮುಸ್ಲಿಂ ಎಂಬ ಕಾರಣಕ್ಕೆ ಸರ್ಫರಾಜ್ ಖಾನ್ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲವೇ?: ಗೌತಮ್ ಗಂಭೀರ್ ವಿರುದ್ಧ ಕಾಂಗ್ರೆಸ್‌ನ ಶಮಾ ಮೊಹಮ್ಮದ್

ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಎ ವಿರುದ್ಧದ ನಾಲ್ಕು ದಿನಗಳ ಎರಡು ಪಂದ್ಯಗಳಿಗೆ ಭಾರತ ಎ ತಂಡಗಳನ್ನು ಬಿಸಿಸಿಐ ಘೋಷಿಸಿದ ಒಂದು ದಿನದ ಶಮಾ ಅವರ ಈ ಹೇಳಿಕೆಗಳು ಬಂದಿವೆ.

ನವದೆಹಲಿ: ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ಟೀಕಿಸಿದ ನಂತರ, ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಬುಧವಾರ ಮತ್ತೆ ವಿವಾದಕ್ಕೆ ಕಾರಣರಾಗಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇತ್ತೀಚೆಗೆ ಘೋಷಿಸಿದ ಭಾರತ ಮತ್ತು ಭಾರತ ಎ ತಂಡಗಳಿಂದ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರನ್ನು ಕೈಬಿಟ್ಟಿದ್ದಕ್ಕೆ ಕಿಡಿಕಾರಿದ್ದಾರೆ.

'ಸರ್ಫರಾಜ್ ಖಾನ್ ಅವರನ್ನು ಹೊರಗಿಡಲು ಅವರ ಧಾರ್ಮಿಕ ಗುರುತೇ ಕಾರಣವೇ?' ಎಂದು ಶಮಾ ಮೊಹಮ್ಮದ್ ಪ್ರಶ್ನಿಸಿದ್ದಾರೆ.

'ಸರ್ಫರಾಜ್ ಖಾನ್ ಅವರನ್ನು ಅವರ ಉಪನಾಮದ ಕಾರಣದಿಂದಾಗಿ ಆಯ್ಕೆ ಮಾಡಲಾಗಿಲ್ಲವೇ! #justasking. ಆ ವಿಷಯದಲ್ಲಿ ಗೌತಮ್ ಗಂಭೀರ್ ಅವರ ನಿಲುವು ನಮಗೆ ತಿಳಿದಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಎ ವಿರುದ್ಧದ ನಾಲ್ಕು ದಿನಗಳ ಎರಡು ಪಂದ್ಯಗಳಿಗೆ ಭಾರತ ಎ ತಂಡಗಳನ್ನು ಬಿಸಿಸಿಐ ಘೋಷಿಸಿದ ಒಂದು ದಿನದ ಶಮಾ ಅವರ ಈ ಹೇಳಿಕೆಗಳು ಬಂದಿವೆ.

ಬೆಂಗಳೂರಿನಲ್ಲಿ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್ ಪಂದ್ಯದ ಸಮಯದಲ್ಲಿ ಸರ್ಫರಾಜ್ ಖಾನ್.

ಮೊದಲ ಪಂದ್ಯ ಅಕ್ಟೋಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿದ್ದು, ಎರಡನೇ ಪಂದ್ಯ ನವೆಂಬರ್ 6 ರಿಂದ 9 ರವರೆಗೆ ನಡೆಯಲಿದೆ. ಸರ್ಫರಾಜ್ ಖಾನ್ ಅವರ ಸ್ಥಿರ ದೇಶೀಯ ಪ್ರದರ್ಶನದ ಹೊರತಾಗಿಯೂ, ಮತ್ತೊಮ್ಮೆ ಎರಡೂ ತಂಡಗಳಿಗೆ ಆಯ್ಕೆ ವೇಳೆ ಕಡೆಗಣಿಸಲಾಗಿದೆ. ಇದು ಅಭಿಮಾನಿಗಳು ಮತ್ತು ಕ್ರಿಕೆಟ್ ವಿಶ್ಲೇಷಕರಲ್ಲಿ ಚರ್ಚೆಗೆ ಕಾರಣವಾಗಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಹಲವು ವರ್ಷಗಳ ಕಾಲ ಶ್ರಮಿಸಿದ ನಂತರ, 27 ವರ್ಷದ ಸರ್ಫರಾಜ್ ಅವರು ಕಳೆದ ವರ್ಷ ಫೆಬ್ರುವರಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಅಂದಿನಿಂದ, ಅವರು ಆರು ಟೆಸ್ಟ್‌ ಪಂದ್ಯಗಳಳ್ಲಿ 37.10 ಸರಾಸರಿಯಲ್ಲಿ 371 ರನ್ ಗಳಿಸಿದ್ದಾರೆ. 74.94 ಆರೋಗ್ಯಕರ ಸ್ಟ್ರೈಕ್ ರೇಟ್‌ನಲ್ಲಿ 11 ಇನಿಂಗ್ಸ್‌ನಲ್ಲಿ ಒಂದು ಶತಕ ಮತ್ತು ಮೂರು ಅರ್ಧಶತಕ ಗಳಿಸಿದ್ದಾರೆ. 150 ಅವರ ಅತ್ಯುತ್ತಮ ರನ್ ಆಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ವಾಂಖೆಡೆಯಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಭಾರತ ಪರ ಕೊನೆಯ ಬಾರಿಗೆ ಆಡಿದ್ದರು.

ಸರ್ಫರಾಜ್ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ 65.19 ಸರಾಸರಿ ಹೊಂದಿದ್ದಾರೆ. 56 ಪಂದ್ಯಗಳಲ್ಲಿ 16 ಶತಕ ಮತ್ತು 15 ಅರ್ಧಶತಕ ಸೇರಿದಂತೆ 2,467 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 70.99 ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ ನಿಲ್ಲಿಸಲಿದೆ ': ಟ್ರಂಪ್ ಪುನರುಚ್ಛಾರ

ತಂದೆ ರಾಜಕೀಯ ಜೀವನ ಮುಗಿಯಿತು; ಯತೀಂದ್ರ ಹೇಳಿಕೆಯಿಂದ ಸಂಚಲನ, ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್‌ಮೇಟ್ ನೀಡಲು ಸಿದ್ದು ಟೀಮ್ ಮುಂದು..!

ಕ್ಷಮೆ ಕೇಳಿದ್ರಾ..? ಅಥವಾ ನಿವೃತ್ತಿ ಸುಳಿವು ಕೊಟ್ರಾ?.. 2ನೇ ಶೂನ್ಯ ಸಾಧನೆ ಬಳಿಕ ವಿರಾಟ್ ಕೊಹ್ಲಿ Gesture ವೈರಲ್

ಬಿಹಾರ ಚುನಾವಣೆ: INDIA ಬಣದಿಂದ CM ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಹೆಸರು ಘೋಷಿಸುವ ಸಾಧ್ಯತೆ!

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಜಾವೆಲಿನ್ ಥ್ರೋ ಸ್ಟಾರ್ ನೀರಜ್ ಚೋಪ್ರಾ

SCROLL FOR NEXT