ಅಲೆಕ್ಸ್ ಕ್ಯಾರಿ ಅವರ ಅದ್ಭುತ ಕ್ಯಾಚ್ ಹಿಡಿದ ವೇಳೆ ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಾಯವಾಗಿತ್ತು. Photo| IANS
ಕ್ರಿಕೆಟ್

ಟೀಂ ಇಂಡಿಯಾ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಸಿಡ್ನಿ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ!

ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡಲು ಬ್ಯಾಕ್‌ವರ್ಡ್ ಪಾಯಿಂಟ್‌ನಿಂದ ಹಿಂದಕ್ಕೆ ಓಡುತ್ತಾ ಅದ್ಭುತ ಕ್ಯಾಚ್ ಹಿಡಿದ ವೇಳೆ ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಾಯವಾಗಿತ್ತು.

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದ ವೇಳೆ ಪಕ್ಕೆಲುಬಿನ ಗಾಯದಿಂದ ಬಳಲುತ್ತಿದ್ದ ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಆಂತರಿಕ ರಕ್ತಸ್ರಾವದಿಂದ ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡಲು ಬ್ಯಾಕ್‌ವರ್ಡ್ ಪಾಯಿಂಟ್‌ನಿಂದ ಹಿಂದಕ್ಕೆ ಓಡುತ್ತಾ ಅದ್ಭುತ ಕ್ಯಾಚ್ ಹಿಡಿದ ವೇಳೆ ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಾಯವಾಗಿತ್ತು. ಶನಿವಾರ ಡ್ರೆಸ್ಸಿಂಗ್ ರೂಂಗೆ ಹಿಂತಿರುಗಿದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

'ಕಳೆದ ಎರಡು ದಿನಗಳಿಂದ ಶ್ರೇಯಸ್ ಐಸಿಯುನಲ್ಲಿದ್ದಾರೆ. ವರದಿಗಳಲ್ಲಿ ಅವರಿಗೆ ಆಂತರಿಕ ರಕ್ತಸ್ರಾವ ಪತ್ತೆಯಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಬೇಕಾಯಿತು. ರಕ್ತಸ್ರಾವದಿಂದಾಗಿ ಸೋಂಕು ಹರಡುವುದನ್ನು ನಿಲ್ಲಿಸುವ ಅಗತ್ಯವಿರುವುದರಿಂದ, ಎರಡರಿಂದ ಏಳು ದಿನಗಳವರೆಗೆ ಅವರನ್ನು ತೀವ್ರ ನಿಗಾ ಘಟಕದಲ್ಲಿಡಲಾಗುತ್ತದೆ' ಎಂದು ಈ ಬೆಳವಣಿಗೆ ಬಗ್ಗೆ ತಿಳಿದಿರುವ ಮೂಲಗಳು ಪಿಟಿಐಗೆ ತಿಳಿಸಿವೆ.

'ತಂಡದ ವೈದ್ಯರು ಮತ್ತು ಫಿಜಿಯೋಗಳು ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳಲಿಲ್ಲ ಮತ್ತು ಡ್ರೆಸ್ಸಿಂಗ್ ರೂಂಗೆ ಹಿಂತಿರುಗಿದ ನಂತರ ಅವರ ಪ್ಯಾರಾಮೀಟರ್ಸ್ ಏರಿಳಿತದಿಂದಾಗಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರು. ಈಗ ಪರಿಸ್ಥಿತಿ ಸ್ಥಿರವಾಗಿದೆ. ಆದರೆ, ಅದು ಮಾರಕವಾಗಬಹುದಿತ್ತು. ಅವರು ಕಠಿಣ ವ್ಯಕ್ತಿ ಮತ್ತು ಶೀಘ್ರದಲ್ಲೇ ಗುಣಮುಖರಾಗಬೇಕು' ಎಂದು ಮೂಲಗಳು ತಿಳಿಸಿವೆ.

ಆರಂಭದಲ್ಲಿ, ಶ್ರೇಯಸ್ ಅಯ್ಯರ್ ಅವರು ಸುಮಾರು ಮೂರು ವಾರಗಳ ಕಾಲ ಆಟದಿಂದ ಹೊರಗುಳಿಯುವ ನಿರೀಕ್ಷೆಯಿತ್ತು. ಆದರೆ, ಈಗ ಅವರ ಚೇತರಿಕೆಯ ಅವಧಿ ಹೆಚ್ಚಾಗಬಹುದು ಎನ್ನಲಾಗಿದೆ.

'ಆಂತರಿಕ ರಕ್ತಸ್ರಾವವಾಗಿದ್ದರಿಂದ, ಅವರು ಚೇತರಿಸಿಕೊಳ್ಳಲು ಖಂಡಿತವಾಗಿಯೂ ಹೆಚ್ಚಿನ ಸಮಯ ಬೇಕಾಗುತ್ತದೆ ಮತ್ತು ಈ ಹಂತದಲ್ಲಿ, ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಬಗ್ಗೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸುವುದು ಕಷ್ಟ' ಎಂದು ಮೂಲಗಳು ತಿಳಿಸಿವೆ.

31 ವರ್ಷದ ಅಯ್ಯರ್ ಭಾರತಕ್ಕೆ ಮರಳಲು ಫಿಟ್ ಆಗಿದ್ದಾರೆಂದು ಘೋಷಿಸುವ ಮೊದಲು ಕನಿಷ್ಠ ಒಂದು ವಾರ ಸಿಡ್ನಿ ಆಸ್ಪತ್ರೆಯಲ್ಲಿಯೇ ಉಳಿಯುವ ನಿರೀಕ್ಷೆಯಿದೆ. ಅಯ್ಯರ್ ಭಾರತದ T20 ತಂಡದ ಭಾಗವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!