ಭಾರತ-ಪಾಕಿಸ್ತಾನ ಪಂದ್ಯ online desk
ಕ್ರಿಕೆಟ್

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಬಿಸಿಸಿಐ ಬಹಿಷ್ಕಾರ?: ಏಷ್ಯಾ ಕಪ್ ಟೂರ್ನಿ ಗತಿಯೇನು?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಯಿತು.

ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಮುಂಬರುವ 2025 ರ ಏಷ್ಯಾ ಕಪ್ ಪಂದ್ಯವನ್ನು ಭಾನುವಾರ 'ಬಹಿಷ್ಕರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಜ್ಜಾಗಿದೆ. ದೈನಿಕ್ ಜಾಗರಣ್ ವರದಿಯ ಪ್ರಕಾರ, ಭಾರತ ಅಧಿಕೃತ ಆತಿಥೇಯರಾಗಿದ್ದರೂ ಬಿಸಿಸಿಐ ಈ ಪಂದ್ಯವನ್ನು ಬಹಿಷ್ಕರಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಯಿತು. ಇಲ್ಲಿಯವರೆಗೆ ಯಾವುದೇ ಬಿಸಿಸಿಐ ಅಧಿಕಾರಿ ದುಬೈ ತಲುಪಿಲ್ಲ. ಈ ಮೂಲಕ ದುಬೈನಲ್ಲಿ ನಡೆಯುವ ಪಂದ್ಯಕ್ಕೆ ಬಿಸಿಸಿಐ ಪರೋಕ್ಷ ಬಹಿಷ್ಕಾರ ಹಾಕಲು ಮುಂದಾಗಿದೆ. ಪಂದ್ಯದ ದಿನದಂದು ಒಬ್ಬ ಅಧಿಕಾರಿ ಮಾತ್ರ ಕ್ರೀಡಾಂಗಣದಲ್ಲಿ ಹಾಜರಿರುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ.

ಪಾಕಿಸ್ತಾನ ವಿರುದ್ಧದ ಪಂದ್ಯದ ಬಗ್ಗೆ ಅನೇಕ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಭಾರತದಲ್ಲಿ 'ಬಹಿಷ್ಕಾರ ಅಭಿಯಾನ'ದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಭಯೋತ್ಪಾದಕ ದಾಳಿಯ ನಂತರ ಎರಡೂ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ ಹೊಡೆತ ಬಿದ್ದಿದ್ದು ಕೆಲವು ಅಭಿಮಾನಿಗಳು ಭಾರತ ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಆಡುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದ ಸಮಯದಲ್ಲಿ, ಎಲ್ಲಾ ಉನ್ನತ ಬಿಸಿಸಿಐ ಅಧಿಕಾರಿಗಳು ಮತ್ತು ಹಲವಾರು ರಾಜ್ಯ ಕ್ರಿಕೆಟ್ ಮಂಡಳಿಗಳ ಪ್ರತಿನಿಧಿಗಳು ಸ್ಥಳದಲ್ಲಿ ಹಾಜರಿದ್ದರು.

ಆದರೆ, ಈ ಬಾರಿ, ಬಿಸಿಸಿಐ ಅಧಿಕಾರಿಗಳು ಪ್ರತಿಕ್ರಿಯೆಯ ಭಯದಿಂದ ಅಂತಹ ದೃಶ್ಯಗಳನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ವರದಿಯಾಗಿದೆ.

ರಾಜೀವ್ ಶುಕ್ಲಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸದಸ್ಯರಾಗಿ ಪಂದ್ಯಕ್ಕೆ ಹಾಜರಾಗಬಹುದು ಎಂದು ವರದಿ ಹೇಳಿದೆ ಆದರೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷ ಜಯ್ ಶಾ ಅಥವಾ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹಾಜರಿರುವುದು ಅತ್ಯಂತ ಅಸಂಭವವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಹಾರ್ಮುಜ್ ಜಲಸಂಧಿ 'ರೀ ಓಪನ್' ಮಾಡಲು 22 ರಾಷ್ಟ್ರಗಳು ಇರಾನ್ ಗೆ ಒತ್ತಾಯ! ಸೇನಾ ಕಾರ್ಯಾಚರಣೆ ಶೀಘ್ರ ಸ್ಥಗಿತ ಎಂದ ಅಮೆರಿಕ

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ

ಭಾರತವೇ ಮುಂದಿನ ಸೂಪರ್ ಪವರ್: ದ್ವೇಷದಿಂದ 'ನಮಸ್ತೆ'ಗೆ 9 ದಿನದಲ್ಲೇ ಬದಲಾದ ಭಾರತ ವಿರೋಧಿ ಲಾರಾ ಲೂಮರ್!

ರಾಜ್ಯಸಭೆಯಲ್ಲಿ NDA ಬಲ 141ಕ್ಕೆ ಹೆಚ್ಚಳ: ಅಡ್ಡ ಮತದಾನ ಮಾಡಿದ್ದ 6 BJD ಶಾಸಕರ ಅಮಾನತು!

ಈದ್ ಅಲ್-ಫಿತರ್‌ ದಿನವೇ ಜಿರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ: ಅಲ್-ಅಕ್ಸಾ ಮಸೀದಿ ಬಳಿ ಸ್ಫೋಟ! Video

SCROLL FOR NEXT