ಸೂರ್ಯ ಕುಮಾರ್ ಯಾದವ್ ಹಾಗೂ ಪಾಕ್ ನಾಯಕ ಸಲ್ಮಾನ್ ಅಘಾ  
ಕ್ರಿಕೆಟ್

Asia CUP 2025: ಭಾರತ ಗೆಲುತ್ತಿದ್ದಂತೆಯೇ post Match presentation ತೊರೆದ ಪಾಕ್ ನಾಯಕ; ಇದೇ ಕಾರಣ!

ಪಂದ್ಯದ ಕೊನೆಯಲ್ಲಿ ಭಾರತೀಯ ಆಟಗಾರರಿಗೆ ಹ್ಯಾಂಡ್ ಶೇಕ್ ಮಾಡಲು ಉತ್ಸಾಹದಿಂದ ಕಾಯುತ್ತಿದ್ದೇವು. ಆದರೆ ಅದು ಆಗಲಿಲ್ಲ. ಹೀಗಾಗಿ ಸಲ್ಮಾನ್ ಅಘಾ post Match presentation ತೊರೆದಿದ್ದಾರೆ.

ದುಬೈ: ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಭಾರತದ ವಿರುದ್ದದ ಪಂದ್ಯ ಮುಗಿದ ನಂತರ post Match presentation ಕಾರ್ಯಕ್ರಮದಲ್ಲಿ ಪಾಕಿಸ್ತಾನ ನಾಯಕ ಸಲ್ಮಾನ್ ಅಘಾ ಕಾಣಿಸಿಕೊಳ್ಳಲಿಲ್ಲ. ಇದು ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಪಾಕಿಸ್ತಾನದ ಮುಖ್ಯ ಕೋಚ್ ಮೈಕ್ ಹೆಸ್ಸನ್ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ. ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಭಾರತ ತಂಡ ಪಾಕಿಸ್ತಾನದ ಆಟಗಾರರೊಂದಿಗೆ ಹಸ್ತಲಾಘವ ಮಾಡದಿರುವುದಕ್ಕೆ ಈ ನಿರ್ಧಾರ ಮಾಡಿರುವುದಾಗಿ ಹೆಸ್ಸನ್ ಹೇಳಿದ್ದಾರೆ.

ಪಂದ್ಯದ ಕೊನೆಯಲ್ಲಿ ಭಾರತೀಯ ಆಟಗಾರರಿಗೆ ಹ್ಯಾಂಡ್ ಶೇಕ್ ಮಾಡಲು ಉತ್ಸಾಹದಿಂದ ಕಾಯುತ್ತಿದ್ದೇವು. ಆದರೆ ಅದು ಆಗಲಿಲ್ಲ. ಹೀಗಾಗಿ ಸಲ್ಮಾನ್ ಅಘಾ post Match presentation ತೊರೆದಿದ್ದಾರೆ ಎಂದು ಹೆಸ್ಸೆನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಏಪ್ರಿಲ್‌ನಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯ ಬಹಿಷ್ಕರಿಸಬೇಕು ಎಂಬ ಬೇಡಿಕೆಯೂ ಹೆಚ್ಚಾಗಿತ್ತು.

ಪಂದ್ಯ ಆರಂಭಕ್ಕೂ ಮುನ್ನಾ ಟಾಸ್ ಸಂದರ್ಭದಲ್ಲಿ ಸಲ್ನಾನ್ ಅಘಾ ಹಾಗೂ ಸೂರ್ಯ ಕುಮಾರ್ ಯಾದವ್ ಹ್ಯಾಂಡ್ ಶೇಕ್ ಮಾಡಲಿಲ್ಲ. ಮುಖವನ್ನು ಕೂಡಾ ನೋಡಲಿಲ್ಲ. ಪಂದ್ಯ ಮುಗಿಯುತ್ತಿದ್ದಂತೆಯೇ ಭಾರತೀಯ ಆಟಗಾರರು ಪಾಕಿಸ್ತಾನ ಆಟಗಾರರಿಗೆ ಹಸ್ತಲಾಘವ ಮಾಡಲಿಲ್ಲ. ಇದಕ್ಕೆ ನಿರಾಸೆ ವ್ಯಕ್ತಪಡಿಸಿದ ಹೆಸ್ಸೆನ್, ಕೊನೆಯಲ್ಲಿ ನಾವು ಹ್ಯಾಂಡ್ ಶೇಕ್ ಮಾಡಲು ಹೋದೆವು, ಆದರೆ ಅವರು ಡ್ರೆಸ್ಸಿಂಗ್ ರೂಮ್ ಗೆ ಹೋದರು ಎಂದು"ಹೆಸ್ಸನ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!