ಯೂಸುಫ್ ಪಠಾಣ್ 
ಕ್ರಿಕೆಟ್

Yusuf Pathan ಭೂಗಳ್ಳ; ಸೆಲೆಬ್ರಿಟಿ ಆದರೇನು ಕ್ರಮಕೈಗೊಳ್ಳಿ: ಗುಜರಾತ್ ಹೈಕೋರ್ಟ್‌ ಮಹತ್ವದ ತೀರ್ಪು

ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಯೂಸುಫ್ ಪಠಾಣ್ (Yusuf Pathan) ನನ್ನು ಗುಜರಾತ್‌ನ ವಡೋದರಾದಲ್ಲಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ.

ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಯೂಸುಫ್ ಪಠಾಣ್ (Yusuf Pathan) ನನ್ನು ಗುಜರಾತ್‌ನ ವಡೋದರಾದಲ್ಲಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ವಿಚಾರಣೆಯ ಸಮಯದಲ್ಲಿ ಸೆಲೆಬ್ರಿಟಿಗಳು ಹೆಚ್ಚಿನ ಹೊಣೆಗಾರಿಕೆಯನ್ನು ಹೊಂದಿರುತ್ತಾರೆ. ಹೀಗಾಗಿ ಅವರಿಗೆ ರಿಯಾಯಿತಿಗಳನ್ನು ನೀಡುವುದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಹಾಗೆ ಮಾಡುವುದರಿಂದ ಸಂವಿಧಾನದ 226ನೇ ವಿಧಿಯ ಅಡಿಯಲ್ಲಿ ಅತಿಕ್ರಮಣವನ್ನು ಕ್ರಮಬದ್ಧಗೊಳಿಸಿದಂತೆ ಆಗುತ್ತದೆ ಎಂದು ಕೋರ್ಟ್ ಹೇಳಿದೆ.

ನ್ಯಾಯಾಲಯದ ತೀರ್ಪಿನ ನಂತರ, ಯೂಸುಫ್ ಪಠಾಣ್ ಆಕ್ರಮಿಸಿಕೊಂಡಿರುವ ನಿವೇಶನವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ನಿಗಮವು ಪ್ರಾರಂಭಿಸಿದೆ ಎಂದು ವಡೋದರಾ ಪುರಸಭೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಾಸ್ತವವಾಗಿ, ವಡೋದರಾ ಪುರಸಭೆಯು ಕಳೆದ ವರ್ಷ ಈ ನಿವೇಶನವನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿತ್ತು. ಇದರ ವಿರುದ್ಧ ಪಠಾಣ್ ಅರ್ಜಿ ಸಲ್ಲಿಸಿದ್ದರು.

ಮಾಹಿತಿಯ ಪ್ರಕಾರ, ಪಠಾಣ್ ತಮ್ಮ ಮನೆಯ ಸಮೀಪವಿರುವ ನಗರಸಭೆಯ 978 ಚದರ ಮೀಟರ್ ವಿಸ್ತೀರ್ಣದ ನಿವೇಶನವನ್ನು 2012ರಲ್ಲಿ ಸ್ವಾಧೀನಪಡಿಸಿಕೊಂಡು ಬಳಸಲು ಪ್ರಾರಂಭಿಸಿದ್ದರು. 2014ರಲ್ಲಿ ಹರಾಜು ಇಲ್ಲದೆ ನಿವೇಶನವನ್ನು ಮಾರಾಟ ಮಾಡುವ ನಗರಸಭೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿತ್ತು. ಇದರ ಹೊರತಾಗಿಯೂ ಪಠಾಣ್ ಕುಟುಂಬವು ನಿವೇಶನವನ್ನು ಬಳಸುವುದನ್ನು ಮುಂದುವರೆಸಿತು. ಹೀಗಾಗಿ 2024ರ ಜೂನ್ ನಲ್ಲಿ ಕೌನ್ಸಿಲರ್ ದೂರಿನ ನಂತರ ನಗರಸಭೆಯು ಪಠಾಣ್‌ಗೆ ನೋಟಿಸ್ ನೀಡಿ ನಿವೇಶನವನ್ನು ಖಾಲಿ ಮಾಡುವಂತೆ ಕೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಠಾಣ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಯೂಸುಫ್ ಪಠಾಣ್ ಗುಜರಾತ್ ಹೈಕೋರ್ಟ್ ಅನ್ನು ಸಂಪರ್ಕಿಸಿ, ಮಾರುಕಟ್ಟೆ ಬೆಲೆಯನ್ನು ಪಾವತಿಸುವ ಮೂಲಕ ಭೂಮಿಯನ್ನು ಖರೀದಿಸುವ ಬಯಕೆಯನ್ನು ವ್ಯಕ್ತಪಡಿಸಿದರು. ಆದರೆ ವಿಎಂಸಿ ಅರ್ಜಿಯನ್ನು ವಿರೋಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT