ಅಭಿಶೇಕ್ ಶರ್ಮಾ 
ಕ್ರಿಕೆಟ್

Asia Cup 2025: 'ಅದು ನನಗೆ ಇಷ್ಟವಾಗಲಿಲ್ಲ.. ಹೀಗಾಗಿ ಬ್ಯಾಟ್ ನಿಂದ ಉತ್ತರ ಕೊಟ್ಟೆ'; Abhishek Sharma

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

ದುಬೈ: ಮೈದಾನದಲ್ಲಿ ಭಾರತೀಯ ಅಭಿಮಾನಿಗಳ ಕೆಣಕಿದ್ದ ಪಾಕಿಸ್ತಾನಿ ಆಟಗಾರರಿಗೆ ತಮ್ಮ ಬ್ಯಾಟ್ ನಿಂದಲೇ ಉತ್ತರ ನೀಡಿರುವುದಾಗಿ ಭಾರತದ ತಂಡದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಹೇಳಿದ್ದಾರೆ.

ಭಾನುವಾರ ರಾತ್ರಿ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

ಭಾರತದ ಪರ 39 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ 74 ರನ್ ಸಿಡಿಸಿ ಅಬ್ರಾರ್ ಅಹ್ಮದ್ ಬೌಲಿಂಗ್ ನಲ್ಲಿ ಔಟಾದರು. ಅಷ್ಟುಹೊತ್ತಿಗಾಗಲೇ ಭಾರತದ ಗೆಲುವಿನ ಹೊಸ್ತಿಲಲ್ಲಿತ್ತು.

ಉಳಿದ ಆಟಗಾರರು ಪಂದ್ಯದ ಗೆಲುವಿನ ಔಪಚಾರಿಕತೆ ಮುಕ್ತಾಯ ಮಾಡಿದರು. ಇನ್ನು ಈ ಪಂದ್ಯದ ಪ್ರಶಸ್ತಿ ಪ್ರದಾನ ವೇಳೆ ಪಾಕಿಸ್ತಾನ ಆಟಗಾರರ ವಿರುದ್ಧ ಅಭಿಷೇಕ್ ಶರ್ಮಾ ತಮ್ಮ ಅಸಮಾಧಾನ ಹೊರಹಾಕಿದರು. ಪಂದ್ಯದಲ್ಲಿನ ಉತ್ತಮ ಪ್ರದರ್ಶನಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ.

ಈ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಭಿಷಕ್ ಶರ್ಮಾ, 'ಇಂದು ತುಂಬಾ ಸರಳವಾಗಿತ್ತು, ಅವರು ಯಾವುದೇ ಕಾರಣವಿಲ್ಲದೆ ನಮ್ಮ ಬಳಿಗೆ ಬರುತ್ತಿದ್ದ ರೀತಿ, ನನಗೆ ಅದು ಇಷ್ಟವಾಗಲಿಲ್ಲ. ಅದಕ್ಕಾಗಿಯೇ ನಾನು ಅವರ ಹಿಂದೆ ಹೋದೆ. ನನ್ನ ಬ್ಯಾಟ್ ನಿಂದ ಉತ್ತರ ನೀಡಿದೆ ಎಂದು ಹೇಳಿದ್ದಾರೆ.

ಅಂತೆಯೇ ತಮ್ಮ ಮತ್ತು ಶುಭ್ ಮನ್ ಗಿಲ್ ಒಡನಾಟದ ಕುರಿತು ಮಾತನಾಡಿದ ಅಭಿಷೇಕ್ ಶರ್ಮಾ, 'ನಾವು ಶಾಲಾ ದಿನಗಳಿಂದಲೂ ಆಡುತ್ತಿದ್ದೇವೆ, ನಾವು ಪರಸ್ಪರರ ಸಹವಾಸವನ್ನು ಆನಂದಿಸುತ್ತೇವೆ, ನಾವು ಅದನ್ನು ಮಾಡುತ್ತೇವೆ ಎಂದು ಭಾವಿಸಿದ್ದೇವೆ ಮತ್ತು ಇಂದು ಆ ದಿನವಾಗಿತ್ತು. ಗಿಲ್ ಹೇಗೆ ಹಿಂದಿರುಗಿಸುತ್ತಿದ್ದರು, ನನಗೆ ಅದು ನಿಜವಾಗಿಯೂ ಇಷ್ಟವಾಯಿತು.

ಯಾರಾದರೂ ಈ ರೀತಿ ಆಡುವುದನ್ನು ನೀವು ನೋಡಿದರೆ, ತಂಡವು ಖಂಡಿತಾ ನನ್ನನ್ನು ಬೆಂಬಲಿಸುತ್ತದೆ ಮತ್ತು ಅವರು ನನಗೆ ಬೆಂಬಲ ನೀಡುತ್ತಾರೆ. ನಾನು ತೋರಿಸುವ ಉದ್ದೇಶ ಅದು ಮತ್ತು ನಾನು ನಿಜವಾಗಿಯೂ ಕಠಿಣ ಅಭ್ಯಾಸ ಮಾಡುತ್ತಿದ್ದೇನೆ ಮತ್ತು ಇದು ನನ್ನ ದಿನವಾಗಿದ್ದರೆ, ನಾನು ನನ್ನ ತಂಡಕ್ಕಾಗಿ ಅದನ್ನು ಗೆಲ್ಲುತ್ತೇನೆ ಎಂದು ಅಭಿಷೇಕ್ ಶರ್ಮಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರಗೂರು: ಮಾನವ, ದನಗಳ ಕೊಂದಿದ್ದ ಹುಲಿ ಕೊನೆಗೂ ಸೆರೆ, ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?

'ಯುದ್ಧ ಭುಗಿಲೆದ್ದರೆ ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ನಮಗಿದೆ': ಆಫ್ಘಾನಿಸ್ತಾನ, ಪಾಕಿಸ್ತಾನ ಜೊತೆ ಶಾಂತಿ ಮಾತುಕತೆ ಮತ್ತೆ ವಿಫಲ

'vote chori': ರಾಜ್ಯದ 1.12 ಕೋಟಿ ಜನರಿಂದ 'ಕೈ' ಸಹಿ ಸಂಗ್ರಹ, ನ.10ಕ್ಕೆ ಹೈಕಮಾಂಡ್'ಗೆ ಸಲ್ಲಿಕೆ

ಜಾರ್ಜಿಯಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನ ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ಗಳ ಬಂಧನ, ಗಡೀಪಾರಿಗೆ ಸಿದ್ಧತೆ

ವಿಶ್ವಕಪ್ ಗೆಲುವು ಬೆನ್ನಲ್ಲೇ ಭಾರತ ತಂಡದ ಆಟಗಾರ್ತಿಯರ 'ಬ್ರಾಂಡ್ ವಾಲ್ಯೂ' ಭಾರಿ ಏರಿಕೆ! ಯಾರಿಗೆ ಎಷ್ಟು ಗೊತ್ತಾ?

SCROLL FOR NEXT