ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

Asia Cup 2025: ಪಾಕಿಸ್ತಾನ ನಮಗೆ 'ಎದುರಾಳಿಯೇ' ಅಲ್ಲ! ಗಾಯದ ಮೇಲೆ ಉಪ್ಪು ಸುರಿದ ಸೂರ್ಯ ಕುಮಾರ್ ಯಾದವ್; Video

"ಸರ್, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳನ್ನು ಎದುರಾಳಿಗಳು ಎನ್ನುವುದನ್ನು ನಾವು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ದುಬೈ: ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನವನ್ನು 6 ವಿಕೆಟ್ ಅಂತರದಿಂದ ಬಗ್ಗುಬಡಿದ್ದ ನಂತರ ಮಾತನಾಡಿದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್, ಗಾಯದ ಮೇಲೆ ಉಪ್ಪು ಸುರಿದರು.

ಉಭಯ ರಾಷ್ಟ್ರಗಳ ನಡುವಿನ ಸ್ಪರ್ಧೆಯನ್ನು ಸಾಂಪ್ರಾದಾಯಿಕ ಎದುರಾಳಿಗಳು ಎಂದು ಕರೆಯುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಭಾರತ ಮತ್ತು ಪಾಕಿಸ್ತಾನವು T20I ಗಳಲ್ಲಿ 15 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಹಾಲಿ ವಿಶ್ವ ಚಾಂಪಿಯನ್‌ ಭಾರತ 12 ಬಾರಿ ಗೆದ್ದಿದೆ.

ಉಭಯ ರಾಷ್ಟ್ರಗಳ ನಡುವಿನ ಗುಣಮಟ್ಟದಲ್ಲಿ ಸಾಕಷ್ಟು ವ್ಯತ್ಯಾಸವಿದೆಯೇ ಎಂದು ಪಾಕಿಸ್ತಾನದ ಹಿರಿಯ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ನಗುತ್ತಲೇ ಪ್ರತಿಕ್ರಿಯಿಸಿದ ಸೂರ್ಯಕುಮಾರ್, "ಸರ್, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳನ್ನು ಎದುರಾಳಿಗಳು ಎನ್ನುವುದನ್ನು ನಾವು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ನಾನು ಗುಣಮಟ್ಟವನ್ನು ಉಲ್ಲೇಖಿಸಿದ್ದು, ಪೈಪೋಟಿಯಲ್ಲ" ಎಂದು ಪತ್ರಕರ್ತ ಹೇಳಿದಾಗ ಸೂರ್ಯ ಕುಮಾರ್ ಯಾದವ್ ವ್ಯಂಗ್ಯವಾಗಿ ನಕ್ಕರು. "ಸರ್, ಎದುರಾಳಿ, ಗುಣಮಟ್ಟ ಎಲ್ಲವೂ ಒಂದೇ. ಈಗ ಎದುರಾಳಿ ಅಂದ್ರೆ ಏನು ಅರ್ಥ? ಎರಡು ತಂಡಗಳು 15 ಪಂದ್ಯಗಳನ್ನು ಆಡಿ 8-7 ಗೆದಿದ್ದರೆ ಅದು ಎದುರಾಳಿ. ಇಲ್ಲಿ ಅದು 13-1 (12-3) ಅಥವಾ ಇನ್ನಾವುದೇ ರೀತಿಯಲ್ಲಿ ಗೆದ್ದಿಲ್ಲವಲ್ಲ ಎಂದು ನಗುತ್ತಲೇ ಸೂರ್ಯ ಕುಮಾರ್ ಯಾದವ್ ಹೇಳಿದರು.

ಅಭಿಷೇಕ್ ಮತ್ತು ಶುಭಮನ್ ಗಿಲ್ 9.5 ಓವರ್‌ಗಳಲ್ಲಿ ಆರಂಭಿಕವಾಗಿ 105 ರನ್ ಗಳಿಸಿದ್ದರಿಂದ ಭಾರತ ಉತ್ತಮ ಕ್ರಿಕೆಟ್ ಆಡಿತು. ಪಾಕಿಸ್ತಾನಕ್ಕಿಂತ ನಾವು ಅತ್ಯುತ್ತಮರು ಅನಿಸುತ್ತದೆ. ಬೌಲಿಂಗ್ ನಲ್ಲೂ ನಾವು ಚೆನ್ನಾಗಿ ಮಾಡಿದ್ದೇವೆ ಎಂದ ಸೂರ್ಯ ಕುಮಾರ್ ಯಾದವ್, ಅಭಿಷೇಖ್ ಶರ್ಮಾ ಅವರ ಪ್ರತಿಭೆಯನ್ನು ಹಾಡಿ ಹೊಗಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT