ಕೆ.ಎಲ್ ರಾಹುಲ್ 
ಕ್ರಿಕೆಟ್

ರಣಜಿ ಟ್ರೋಫಿ: ಸಂಭಾವ್ಯರ ಪಟ್ಟಿಯಲ್ಲಿ ಕೆ.ಎಲ್ ರಾಹುಲ್, ಪ್ರಸಿದ್ಧ್, ಕರುಣ್ ನಾಯರ್

ಅಕ್ಟೋಬರ್ 15ರಿಂದ ಆರಂಭವಾಗುವ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡವು ಮೊದಲ ಪಂದ್ಯದಲ್ಲಿ ಸೌರಾಷ್ಟ್ರವನ್ನು ಎದುರಿಸಲಿದೆ.

ಬೆಂಗಳೂರು: ಅಕ್ಟೋಬರ್ 15ರಿಂದ ಆರಂಭವಾಗುವ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡವು ಮೊದಲ ಪಂದ್ಯದಲ್ಲಿ ಸೌರಾಷ್ಟ್ರವನ್ನು ಎದುರಿಸಲಿದೆ. ಮೊದಲ ಹಂತ ಅ.15 ರಿಂದ ನ.19ರವರೆಗೆ ನಡೆಯಲಿದೆ.

ಕರ್ನಾಟಕ ಮಂಗಳವಾರ ರಣಜಿ ಟ್ರೋಫಿಗೆ ಟೀಂ ಇಂಡಿಯಾ ಆಟಗಾರರಾದ ಕೆ.ಎಲ್. ರಾಹುಲ್, ಪ್ರಸಿದ್ಧ್ ಕೃಷ್ಣ ಮತ್ತು ಕರುಣ್ ನಾಯರ್ ಅವರನ್ನು ಸಂಭಾವ್ಯರ ಪಟ್ಟಿಯಲ್ಲಿ ಹೆಸರಿಸಿದೆ.

ರಾಹುಲ್ ಮತ್ತು ಪ್ರಸಿದ್ಧ್ ಪ್ರಸ್ತುತ ಲಖನೌದಲ್ಲಿದ್ದು, ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ಎ ಪರ ಆಡುತ್ತಿದ್ದಾರೆ.

ಕರ್ನಾಟಕವು ಎಲೈಟ್ ಗ್ರೂಪ್ ಬಿ ಆಗಿದ್ದು, ಅಕ್ಟೋಬರ್ 15 ರಂದು ರಾಜ್‌ಕೋಟ್‌ನಲ್ಲಿ ಸೌರಾಷ್ಟ್ರ ವಿರುದ್ಧದ ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಮೊದಲ ಹಂತದಲ್ಲಿ ಒಟ್ಟು 16 ಪಂದ್ಯಗಳು ನಡೆಯಲಿವೆ. ಎಲೈಟ್ ಹಂತದಲ್ಲಿ ಕರ್ನಾಟಕವು ಸೌರಾಷ್ಟ್ರ, ಗೋವಾ, ಕೇರಳ, ಮಹಾರಾಷ್ಟ್ರ, ಚಂಡೀಗಢ, ಮಧ್ಯಪ್ರದೇಶ ಮತ್ತು ಪಂಜಾಬ್ ತಂಡಗಳನ್ನು ಎದುರಿಸಲಿದೆ.

ಕರ್ನಾಟಕದ ಮಾಜಿ ಆಟಗಾರ ಯೆರೆ ಗೌಡ್ ಅವರು ಕೋಚ್ ಆಗಿ ಮುಂದುವರಿಯಲಿದ್ದು, ಭಾರತದ ಅಂಡರ್-19 ತಂಡದ ಆಸ್ಟ್ರೇಲಿಯಾ ಪ್ರವಾಸದ ನಂತರ ತಂಡವನ್ನು ಸೇರಲಿದ್ದಾರೆ.

37 ಸದಸ್ಯರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಇತರ ಪ್ರಮುಖ ಹೆಸರುಗಳು

ಭಾರತದ ಬ್ಯಾಟ್ಸ್‌ಮನ್‌ಗಳಾದ ದೇವದತ್ ಪಡಿಕ್ಕಲ್, ಮಾಯಾಂಕ್ ಅಗರ್ವಾಲ್, ಶ್ರೇಯಸ್ ಗೋಪಾಲ್, ಭಾರತದ ವೇಗಿ ವೈಶಾಕ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಆರ್ ಸ್ಮರನ್ ಮತ್ತು ಮುಂಬೈ ಇಂಡಿಯನ್ಸ್‌ನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ಶ್ರೀಜಿತ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT