ಭಾರತಕ್ಕೆ ಭರ್ಜರಿ ಜಯ 
ಕ್ರಿಕೆಟ್

Asia Cup 2025: ಬಾಂಗ್ಲಾದೇಶ ಬಗ್ಗು ಬಡಿದ ಭಾರತ, ಫೈನಲ್ ಗೆ ಲಗ್ಗೆ, Srilanka ಟೂರ್ನಿಯಿಂದ ಔಟ್!

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ನೀಡಿದ್ದ 169 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ 19.3 ಓವರ್ ನಲ್ಲಿ 127 ರನ್ ಗಳಿಗೇ ಆಲೌಟ್ ಆಯಿತು. ಆ ಮೂಲಕ 41 ರನ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ಈ ಮಹತ್ವದ ಗೆಲುವಿನೊಂದಿಗೆ ಭಾರತ ತಂಡ ಹಾಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಗೇರಿದೆ. ಅಂತೆಯೇ ಪಾಕಿಸ್ತಾನದ ವಿರುದ್ಧ ಹೀನಾಯವಾಗಿ ಸೋತ ಶ್ರೀಲಂಕಾ ತಂಡ ಟೂರ್ನಿಯಿಂದಲೇ ಹೊರಬಿದ್ದಿದೆ.

ಸೈಫ್ ಹಸನ್ ಏಕಾಂಗಿ ಹೋರಾಟ ವ್ಯರ್ಥ

ಭಾರತ ನೀಡಿದ 169 ರನ್ ಗಳ ಬೆನ್ನು ಹತ್ತಿದ ಬಾಂಗ್ಲಾದೇಶಕ್ಕೆ ಆರಂಭಿಕ ಆಟಗಾರ ಸೈಫ್ ಹಸನ್ ಬೆನ್ನೆಲುಬಾಗಿ ನಿಂತಿದ್ದರು. 51 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 3 ಬೌಂಡರಿಗಳ ನೆರವಿನಿಂದ 69 ರನ್ ಪೇರಿಸಿದ್ದ ಸೈಫ್ ಬಾಂಗ್ಲಾದೇಶ ಇನ್ನಿಂಗ್ಸ್ ನ 18ನೇ ಓವರ್ ನಲ್ಲಿ ಔಟಾದರು.

ಹಸನ್ ಹೊರತು ಪಡಿಸಿದರೆ ಬಾಂಗ್ಲಾದೇಶ ಪರ ಪರ್ವೇಜ್ ಹೊಸೇನ್ ಮಾತ್ರ ಎರಡಂಕಿ ಮೊತ್ತ (21) ಗಳಿಸಿದ್ದರು. ಉಳಿದಂತೆ ಬಾಂಗ್ಲಾದೇಶದ ಯಾವ ಬ್ಯಾಟರ್ ಕೂಡ ಎರಡಂಕಿ ಮೊತ್ತ ದಾಟಲಿಲ್ಲ. ತೌಹಿದ್ ಹೃದೋಯ್ 7 ರನ್ ಗಳಿಸಿದರೆ, ನಾಯಕ ಜೇಕರ್ ಅಲಿ, ಮಹಮದ್ ಸೈಫುದ್ದೀನ್ ಮತ್ತು ನಸುಮ್ ಅಹ್ಮದ್ ತಲಾ 4 ರನ್ ಗಳಿಸಿದರು. ಅಂತೆಯೇ ಹಸನ್ ಸಕಿಬ್, ಶಮೀಮ್ ಹೊಸೇನ್ ಶೂನ್ಯ ಸುತ್ತಿದರು.

ಭಾರತದ ಪರ ಕುಲದೀಪ್ ಯಾದವ್ 3 ವಿಕೆಟ್ ಪಡೆದರೆ, ಜಸ್ ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಅಂತೆಯೇ ಅಕ್ಸರ್ ಪಟೇಲ್ ಮತ್ತು ತಿಲಕ್ ವರ್ಮಾ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Ladakh violence ಗೆ ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ: ಕೇಂದ್ರ ಸರ್ಕಾರ

ಲಡಾಖ್ ಹಿಂಸಾಚಾರಕ್ಕೆ ನಾಲ್ವರು ಬಲಿ: 30 ಜನರಿಗೆ ಗಾಯ; ಬಿಜೆಪಿ ಕಚೇರಿ, ಪೊಲೀಸ್ ವ್ಯಾನ್ ಗೆ ಬೆಂಕಿ; Video

Asia Cup 2025: ಇತಿಹಾಸ ಬರೆದ Abhishek Sharma, ಶ್ರೀಲಂಕಾ ಲೆಜೆಂಡ್ Sanath Jayasuriya ದಾಖಲೆ ಪತನ

Asia Cup 2025: ಭಾರತ ಕಳಪೆ ಫೀಲ್ಡಿಂಗ್, Saif Hassan ಗೆ 4 ಬಾರಿ ಜೀವದಾನ, ಬಾಂಗ್ಲಾ ಬ್ಯಾಟರ್ ವಿಚಿತ್ರ ದಾಖಲೆ! Elite Group ಸೇರ್ಪಡೆ!

ನನ್ನ ರಾಷ್ಟ್ರ ನಿರ್ಮಾಣದ ಆಶಯಗಳಿಗೆ ಎಸ್ಎಲ್ ಭೈರಪ್ಪನವರೇ ಪ್ರೇರಣೆ: BJP ಸಂಸದ ತೇಜಸ್ವೀ ಸೂರ್ಯ

SCROLL FOR NEXT