ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ 
ಕ್ರಿಕೆಟ್

Asia Cup 2025: Abhishek Sharma, Tilak Varma ಭರ್ಜರಿ ಬ್ಯಾಟಿಂಗ್; Sri Lanka ಗೆ ಬೃಹತ್ ಗುರಿ ನೀಡಿದ ಭಾರತ

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾಗೆ ಗೆಲ್ಲಲು ಭಾರತ ತಂಡ 203 ರನ್ ಗಳ ಬೃಹತ್ ಗುರಿ ನೀಡಿದೆ.

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾಗೆ ಗೆಲ್ಲಲು ಭಾರತ ತಂಡ 203 ರನ್ ಗಳ ಬೃಹತ್ ಗುರಿ ನೀಡಿದೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿತು.

ಭಾರತದ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿ ತಲಾ ಅರ್ಧಶತಕ ಸಿಡಿಸಿ ಭಾರತದ ಬೃಹತ್ ಮೊತಕ್ಕೆ ಕಾರಣರಾದರು.

ಅಭಿಷೇಕ್ ಶರ್ಮಾ ಕೇವಲ 31 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 61 ರನ್ ಪೇರಿಸಿದರೆ, ಇತ್ತ ತಿಲಕ್ ವರ್ಮಾ ಕೂಡ 34 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ ಅಜೇಯ 49 ರನ್ ಚಚ್ಚಿದರು. ಆ ಮೂಲಕ ಕೇವಲ 1 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.

ಮುಗ್ಗರಿಸಿದ ಗಿಲ್, ಸಂಜು ಸ್ಯಾಮ್ಸನ್ ಸಮಯೋಚಿತ ಬ್ಯಾಟಿಂಗ್

ಮತ್ತೊಂದೆಡೆ ಹಾಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಮತ್ತೆ ಭಾರತದ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಮುಗ್ಗರಿಸಿದ್ದಾರೆ. ಗಿಲ್ ಕೇವಲ 3 ಎಸೆತ ಎದುರಿಸಿ 4 ರನ್ ಗಳಿಸಿ ತೀಕ್ಷಣಗೆ ವಿಕೆಟ್ ಒಪ್ಪಿಸಿದರು.

ಅಂತೆಯೇ ನಾಯಕ ಸೂರ್ಯ ಕುಮಾರ್ ಯಾದವ್ ಕೂಡ 13 ರನ್ ಗಳಿಸಿ ನಿರ್ಗಮಿಸಿದರೆ, ಹಾರ್ದಿಕ್ ಪಾಂಡ್ಯಾ 2 ರನ್ ಗಳಿಸಿ ಔಟಾದರು. ಈ ನಡುವೆ ದಿಢೀರ್ ಸತತ ವಿಕೆಟ್ ಪತನವಾದರೂ ದೃತಿಗೆಡದ ತಿಲಕ್ ವರ್ಮಾ ಸಂಜು ಸ್ಯಾಮ್ಸನ್ ಜೊತೆಗೂಡಿ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿ 4ನೇ ವಿಕೆಟ್ ಗೆ 66 ರನ್ ಕಲೆಹಾಕಿತು. ಈ ಪೈಕಿ ಸಂಜು ಸ್ಯಾಮ್ಸನ್ 39 ರನ್ ಕಲೆ ಹಾಕಿದರು.

ಅಂತಿಮ ಹಂತದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ ಅಕ್ಸರ್ ಪಟೇಲ್ ಕೂಡ ಕೇವಲ 15 ಎಸೆತಗಳಲ್ಲಿ 21 ರನ್ ಗಳಿಸಿದರು. ಭಾರತದ ಇನ್ನಿಂಗ್ಸ್ ನ ಅಂತಿಮ ಎಸೆತದಲ್ಲಿ ಸಿಕ್ಸರ್ ಭಾರಿಸಿ ಭಾರತ ಸ್ಕೋರ್ 200ರ ಗಡಿ ದಾಟುವಂತೆ ನೋಡಿಕೊಂಡರು. ಅಂತಿಮವಾಗಿ ಭಾರತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿ ಶ್ರೀಲಂಕಾಗೆ ಗೆಲ್ಲಲು 203 ರನ್ ಗಳ ಬೃಹತ್ ಗುರಿ ನೀಡಿದೆ.

ಇನ್ನು ಶ್ರೀಲಂಕಾ ಪರ ತೀಕ್ಷಣ, ಚಮೀರಾ, ಹಸರಂಗ, ಶನಕ ಮತ್ತು ನಾಯಕ ಅಸಲಂಕಾ ತಲಾ ಒಂದೊಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್