ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

Asia CUP2025: 'ಸೂಪರ್ ಓವರ್' ಪಂದ್ಯದಲ್ಲಿ ಲಂಕಾ ಮಣಿಸಿದ ಭಾರತ! ಫೈನಲ್ ಗೆ ಲಗ್ಗೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಸೂಪರ್ 4 ಹಂತದ ಕೊನೆಯ ಪಂದ್ಯ ಸಾಕಷ್ಟು ರೋಚಕತೆಗೆ ಸಾಕ್ಷಿಯಾಯಿತು. ಪಂದ್ಯ ಟೈ ಆದ್ದರಿಂದ ನಡೆದ ಸೂಪರ್ ಓವರ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ಸೋಲಿಸಿತು

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಸೂಪರ್ 4 ಹಂತದ ಕೊನೆಯ ಪಂದ್ಯ ಸಾಕಷ್ಟು ರೋಚಕತೆಗೆ ಸಾಕ್ಷಿಯಾಯಿತು.

ಪಂದ್ಯ ಟೈ ಆದ್ದರಿಂದ ನಡೆದ ಸೂಪರ್ ಓವರ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಸೋಲಿಸಿದ ಭಾರತ ಅಜೇಯವಾಗಿ ಫೈನಲ್ ಗೆ ಲಗ್ಗೆ ಹಾಕಿತು. ಭಾನುವಾರ ನಡೆಯಲಿರುವ ಫೈನಲ್ ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಇದಕ್ಕೂ ಮುನ್ನ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿತು. ಈ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಗಳಿಸುವ ಮೂಲಕ ಪಂದ್ಯ ಟೈ ಆಯಿತು.

ಹೀಗಾಗಿ ವಿಜೇತರನ್ನು ನಿರ್ಧರಿಸಲು ನಡೆದ ಸೂಪರ್ ಓವರ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎರಡು ರನ್ ಗೆ ನಿಯಂತ್ರಿಸಿದ ಭಾರತ ಗೆಲುವು ದಾಖಲಿಸಿತು.

ಭಾರತದ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿ ತಲಾ ಅರ್ಧಶತಕ ಸಿಡಿಸಿ ಭಾರತದ ಬೃಹತ್ ಮೊತಕ್ಕೆ ಕಾರಣರಾದರು.

ಅಭಿಷೇಕ್ ಶರ್ಮಾ ಕೇವಲ 31 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 61 ರನ್ ಪೇರಿಸಿದರೆ, ಇತ್ತ ತಿಲಕ್ ವರ್ಮಾ ಕೂಡ 34 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ ಅಜೇಯ 49 ರನ್ ಚಚ್ಚಿದರು. ಆ ಮೂಲಕ ಕೇವಲ 1 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.

ಅತ್ತ ಲಂಕಾ ಪರ ನಿಸ್ಸಾಂಕಾ 58 ಎಸೆತಗಳಲ್ಲಿ ಆರು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 107 ರನ್ ಗಳಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಕುಸಾಲ್ ಪರೇರಾ 58 ರನ್ ಗಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಡ್ಯ: ಕೆಆರ್ ಎಸ್ ಬಳಿ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ!

Israel 'must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು 'ಉದ್ಧಟತನದ ಭಾಷಣ'; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು walk out!

Rahul-Priyanka Bond: ರಾಹುಲ್- ಪ್ರಿಯಾಂಕಾ ಬಾಂಧವ್ಯದ ಬಗ್ಗೆ ಬಿಜೆಪಿಯ ಕೈಲಾಶ್ ವರ್ಗಿಯಾ ವಿವಾದಾತ್ಮಕ ಹೇಳಿಕೆ!

ಸಿನಿಮಾ ಟಿಕೆಟ್, ಟಿವಿ ಚಾನಲ್ ಗಳ ಮೇಲೆ ಶೇ.2 ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದು: ಇದರ ಪರಿಣಾಮ ಏನು...?

'ಭಾರತ ಶತ್ರು ರಾಷ್ಟ್ರ.. Donald Trump ನೊಬೆಲ್ ಪ್ರಶಸ್ತಿಗೆ ಅರ್ಹ'; ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif

SCROLL FOR NEXT