ಅಭಿಷೇಕ್ ಶರ್ಮಾ 
ಕ್ರಿಕೆಟ್

Asia CUP 2025: ಅದು ಬೇಕಿತ್ತಾ? ಶಾಟ್ ಹೊಡೆಯಲು ಹೋಗಿ ಬೇಗನೆ ಔಟಾದ ಅಭಿಷೇಕ್ ಶರ್ಮಾ; ಕೆರಳಿದ ಗವಾಸ್ಕರ್! Video

ಇನ್ನಿಂಗ್ಸ್ ನ 2ನೇ ಓವರ್ ನಲ್ಲಿ ಅನಗತ್ಯವಾಗಿ ಶಾಟ್ ಹೊಡೆಯಲು ಹೋಗಿ ಅಭಿಷೇಕ್ ಶರ್ಮಾ ಕ್ಯಾಚ್ ನೀಡಿ ಫೆವಿಲಿಯನ್ ಸೇರಿದರು.

ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಏಷ್ಯಾ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಅಭಿಷೇಕ್ ಶರ್ಮಾ ಆತುರದ ವಿರುದ್ಧ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.

ಇನ್ನಿಂಗ್ಸ್ ನ 2ನೇ ಓವರ್ ನಲ್ಲಿ ಅನಗತ್ಯವಾಗಿ ಶಾಟ್ ಹೊಡೆಯಲು ಹೋಗಿ ಅಭಿಷೇಕ್ ಶರ್ಮಾ ಕ್ಯಾಚ್ ನೀಡಿ ಫೆವಿಲಿಯನ್ ಸೇರಿದರು. ಅಭಿಷೇಕ್ ಶರ್ಮಾ ವಿಕೆಟ್ ಪಾಕಿಸ್ತಾನಕ್ಕೆ ಪ್ರಮುಖವಾದ ವಿಕೆಟ್ ಆಗಿತ್ತು. ಈ ಹಿಂದಿನ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ ವಿರುದ್ಧ ಅಭಿಷೇಕ್ ಶರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಆದಾಗ್ಯೂ, ನಿರ್ಣಾಯಕ ಫೈನಲ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಫಹೀಮ್ ಅಶ್ರಫ್ ಬೇಗನೆ ಫೆವಿಲಿಯನ್ ಸೇರುವಂತೆ ಮಾಡಿದ್ದರು.

ಅಭಿಷೇಕ್ ಶರ್ಮಾ ವಿಕೆಟ್ ಬೀಳುತ್ತಿದ್ದಂತೆಯೇ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಭಾರತದ ಟಾರ್ಗೆಟ್ 190 ಆಗಿದ್ದರೆ ಕಷ್ಟವಾಗುತಿತ್ತು. 147 ಇರುವಾಗ ಅದನ್ನು ಚೇಸಿಂಗ್ ಮಾಡುವುದು ಅಷ್ಟು ಕಷ್ಟವಲ್ಲ. ಆದರೆ ಎರಡನೇ ಓವರ್ ಲ್ಲಿಯೇ ಶಾಟ್ ಹೊಡೆಯುವ ಅಗತ್ಯವಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಭಾರತವು ಸೂಕ್ಷ್ಮವಾಗಿ ಆಡಬೇಕಾಗಿದೆ. ಫೈನಲ್ ಪೈಪೋಟಿಯಲ್ಲಿ ಪಾಕಿಸ್ತಾನಕ್ಕೆ ಒಂದು ಸಣ್ಣ ಅವಕಾಶ ನೀಡಿದ್ರು ದೊಡ್ಡ ಅಪಾಯವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!