ವಾಸಿಂ ಅಕ್ರಂ 
ಕ್ರಿಕೆಟ್

Asia Cup 2025: 'ಭಾರತವೇ ಗೆಲ್ಲುವ ಫೇವರಿಟ್.. ಆದರೆ..'; ಪಾಕ್ ಮಾಜಿ ಕ್ರಿಕೆಟಿಗ Wasim Akram

'ಫೈನಲ್‌ ಪಂದ್ಯಕ್ಕೂ ಮುನ್ನ ಭಾರತವು ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ, ಉತ್ತಮ ಆಟದ ಮೂಲಕ ಭಾರತವನ್ನು ಪಾಕಿಸ್ತಾನವು ಸೋಲಿಸಬಹುದು.

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತವೇ ಗೆಲ್ಲುವ ಫೇವರಿಟ್ ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸಿಂ ಆಕ್ರಂ ಹೇಳಿದ್ದಾರೆ.

ಏಷ್ಯಾ ಕಪ್‌ 17ನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಭಾರತವೇ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದು ಪಾಕ್‌ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಹೇಳಿದ್ದಾರೆ.

ಖಾಸಗಿ ಚಾನೆಲ್ ಜೊತೆ ಮಾತನಾಡಿರುವ ವಾಸಿಂ ಅಕ್ರಂ, 'ಫೈನಲ್‌ ಪಂದ್ಯಕ್ಕೂ ಮುನ್ನ ಭಾರತವು ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ, ಉತ್ತಮ ಆಟದ ಮೂಲಕ ಭಾರತವನ್ನು ಪಾಕಿಸ್ತಾನವು ಸೋಲಿಸಬಹುದು.

ಸೂಪರ್‌ 4 ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಕೇವಲ 136 ರನ್‌ಗಳನ್ನು ಪಾಕಿಸ್ತಾನ ಡಿಫೆಂಡ್ ಮಾಡಿತ್ತು. ಇದು ಪಾಕಿಸ್ತಾನದ ಮನೋಬಲವನ್ನು ಹೆಚ್ಚಿಸಿದೆ. ಪಾಕ್‌ ಬೌಲಿಂಗ್‌ ದಾಳಿಯು ಫೈನಲ್‌ನಲ್ಲೂ ಹಾಗೇ ಮುಂದುವರಿಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಆತ್ಮವಿಶ್ವಾಸ ಮುಖ್ಯ

‘ಟಿ 20 ಕ್ರಿಕೆಟ್‌ನಲ್ಲಿ ಏನು ಬೇಕಾದರೂ ಸಂಭವಿಸಬಹುದು. ಒಂದು ಉತ್ತಮ ಇನ್ನಿಂಗ್ಸ್‌ ಪಂದ್ಯದ ಗತಿಯನ್ನೇ ಬದಲಿಸಬಲ್ಲದು. ಉತ್ತಮ ಕ್ರಿಕೆಟ್‌ ಆಡುವ ತಂಡಕ್ಕೆ ಗೆಲ್ಲುವ ಅರ್ಹತೆಯಿದೆ. ಭಾರತದ ವಿರುದ್ಧ ಪಂದ್ಯ ಗೆಲ್ಲಬೇಕಾದರೆ, ಪಾಕಿಸ್ತಾನವು ವಿಶ್ವಾಸದಿಂದ ಮೈದಾನಕ್ಕೆ ಕಣಕ್ಕಿಳಿಯಬೇಕಿದೆ.

ಭಾರತದ ಆರಂಭಿಕ ಆಟಗಾರರಾದ ಅಭಿಷೇಕ್‌ ಶರ್ಮಾ, ಶುಭಮನ್‌ ಗಿಲ್‌ ಅವರ ವಿಕೆಟ್‌ಗಳು ಪಂದ್ಯದ ಗತಿಯನ್ನು ಬದಲಿಸಲಿವೆ. ಹೊಸ ಚೆಂಡಿನಲ್ಲೇ ಅವರ ವಿಕೆಟ್‌ ಪಡೆದರೆ, ಪಾಕ್‌ ಮೇಲುಗೈ ಸಾಧಿಸಬಹುದು ಎಂದು ಅಕ್ರಂ ಅಭಿಪ್ರಾಯಪಟ್ಟಿದ್ದಾರೆ.

41 ವರ್ಷಗಳ ಏಷ್ಯಾ ಕಪ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ ಪಂದ್ಯದಲ್ಲಿ ಸೆಣಸುತ್ತಿದ್ದು, ಇಂದು ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT