ಜಸ್ಪ್ರೀತ್ ಬುಮ್ರಾ 
ಕ್ರಿಕೆಟ್

'ಪಾಕಿಸ್ತಾನ ಈ ಶಿಕ್ಷೆಗೆ ಅರ್ಹ': ಹ್ಯಾರಿಸ್ ರೌಫ್‌ಗೆ ತಿರುಗೇಟು ನೀಡಿದ ಜಸ್ಪ್ರೀತ್ ಬುಮ್ರಾ ನಡೆಗೆ ಕಿರಣ್ ರಿಜಿಜು

ನಿನ್ನೆ ರಾತ್ರಿ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಒಂಬತ್ತನೇ ಬಾರಿಗೆ ಚಾಂಪಿಯನ್‌ಶಿಪ್ ಗೆದ್ದುಕೊಂಡಿತು.

ನವದೆಹಲಿ: ದುಬೈನಲ್ಲಿ ಭಾನುವಾರ ನಡೆದ ಏಷ್ಯಾಕಪ್ 2025 ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ಹ್ಯಾರಿಸ್ ರೌಫ್ ಅವರನ್ನು ಔಟ್ ಮಾಡಿದ ನಂತರ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮಾಡಿದ 'ವಿಮಾನ ಬೀಳುವ' ರೀತಿಯ ಸನ್ನೆ ಈಗ ವೈರಲ್ ಆಗಿದೆ. ಬುಮ್ರಾ ಅವರ ಸಂಭ್ರಮಾಚರಣೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದಾರೆ.

ಹ್ಯಾರಿಸ್ ರೌಫ್ ಅವರು ಔಟ್ ಮತ್ತು ಬುಮ್ರಾ ಅವರ ಸನ್ನೆಗಳ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿರುವ ಅವರು, 'ಪಾಕಿಸ್ತಾನ ಈ ಶಿಕ್ಷೆಗೆ ಅರ್ಹವಾಗಿದೆ' ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನಿನ್ನೆ ರಾತ್ರಿ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಒಂಬತ್ತನೇ ಬಾರಿಗೆ ಚಾಂಪಿಯನ್‌ಶಿಪ್ ಗೆದ್ದುಕೊಂಡಿತು. 26 ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಆರಂಭಿಸಿದ ಆಪರೇಷನ್ ಸಿಂಧೂರವನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ರಿಕೆಟಿಗರು ಮೈದಾನದಲ್ಲಿ ಪ್ರಚೋದನಕಾರಿ ಸನ್ನೆಗಳನ್ನು ಮಾಡಿದ್ದರು.

ಸೂಪರ್ ಫೋರ್ಸ್ ಹಂತದಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ವೇಳೆ, ರೌಫ್ ಭಾರತೀಯ ಅಭಿಮಾನಿಗಳ ಕಡೆಗೆ 'ವಿಮಾನ ಬೀಳುವ' ಸನ್ನೆ ಮಾಡಿದ್ದರು. ಆಪರೇಷನ್ ಸಿಂಧೂರ ಸಮಯದಲ್ಲಿ ಆರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಿದ ಪಾಕಿಸ್ತಾನದ ಆಧಾರರಹಿತ ಹೇಳಿಕೆಗಳನ್ನು ಉಲ್ಲೇಖಿಸಿ ಅವರು ಈ ಸನ್ನೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಟೀಂ ಇಂಡಿಯಾ ತನ್ನ ಕ್ಷಣಕ್ಕಾಗಿ ಕಾಯುತ್ತಿತ್ತು ಮತ್ತು ಅದು ಬುಮ್ರಾ ಅವರ ಎಸೆತದಲ್ಲಿ ರೌಫ್ ಅವರ ಆಫ್-ಸ್ಟಂಪ್ ಕಿತ್ತುಹಾಕಿದಾಗ ಸಂಭವಿಸಿತು. ನಂತರ ಭಾರತೀಯ ವೇಗಿ ರೌಫ್‌ಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದರು.

ಭಾರತ ತಂಡವು ಭರ್ಜರಿ ಜಯ ಸಾಧಿಸಿದ ನಂತರ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮತ್ತು ಪಾಕಿಸ್ತಾನಿ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ಟೀಂ ಇಂಡಿಯಾ ನಿರಾಕರಿಸಿದ್ದರಿಂದ ಪ್ರದಾನ ಸಮಾರಂಭದಲ್ಲಿ ನಾಟಕೀಯ ವಾತಾವರಣ ನಿರ್ಮಾಣವಾಯಿತು. ಅಂತಿಮವಾಗಿ, ನಖ್ವಿ ವೇದಿಕೆಯಿಂದ ಹೊರನಡೆದರು ಮತ್ತು ಭಾರತೀಯ ತಂಡವು ಟ್ರೋಫಿ ಇಲ್ಲದೆಯೇ ಸಂಭ್ರಮಾಚರಣೆ ಮಾಡಿತು.

ಪ್ರಧಾನಿ ಮೋದಿ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿ ಅವರು ಮೆನ್ ಇನ್ ಬ್ಲೂ ತಂಡವನ್ನು ಅಭಿನಂದಿಸಿದ್ದು, 'ಮೈದಾನದಲ್ಲಿ ಆಪರೇಷನ್ ಸಿಂಧೂರ. ಫಲಿತಾಂಶ ಮಾತ್ರ ಒಂದೇ - ಭಾರತ ಗೆದ್ದಿದೆ! ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು' ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಈ ಗೆಲುವನ್ನು 'ಅದ್ಭುತ ಗೆಲುವು' ಎಂದು ಬಣ್ಣಿಸಿದ್ದಾರೆ. 'ನಮ್ಮ ಹುಡುಗರ ಉಗ್ರ ಶಕ್ತಿಯು ಮತ್ತೊಮ್ಮೆ ಪ್ರತಿಸ್ಪರ್ಧಿಗಳನ್ನು ಸ್ಫೋಟಿಸಿತು. ಭಾರತವು ಯಾವುದೇ ಕ್ಷೇತ್ರದಲ್ಲಿ ಗೆಲ್ಲಲೇಬೇಕು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

ಬಿಹಾರ ಚುನಾವಣೆ 2025: ಸೋತು ಗೆದ್ದ ತೇಜಸ್ವಿ ಯಾದವ್; ಕುಟುಂಬದ ಭದ್ರಕೋಟೆ ರಾಘೋಪುರ್ ಉಳಿಸಿಕೊಳ್ಳಲು ಸುಸ್ತೋ ಸುಸ್ತು!

Bihar Elections 2025: NDA ಗೆಲುವಿನ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ Modi ಬಗ್ಗೆ Nitish ಅಚ್ಚರಿಯ ಹೇಳಿಕೆ!

Bihar Election Results: ಅಲಿನಗರ ಕ್ಷೇತ್ರದಲ್ಲಿ BJP ಅಭ್ಯರ್ಥಿ ಮೈಥಿಲಿ ಠಾಕೂರ್ ಇತಿಹಾಸ ಸೃಷ್ಟಿ; ಅತಿ ಕಿರಿಯ ವಯಸ್ಸಿನ ಶಾಸಕಿ!

ಬಿಹಾರದಲ್ಲಿ Congress ಹೀನಾಯ ಹಿನ್ನಡೆ: 'ಸೋಲಿನ ಸರದಾರ' ರಾಹುಲ್ ಗಾಂಧಿಗೆ ಇದು '95 ನೇ ಸೋಲು'!

SCROLL FOR NEXT