ಭಾರತ ತಂಡ 
ಕ್ರಿಕೆಟ್

ಪಾಕ್ ಮಣಿಸಿ ಏಷ್ಯಾಕಪ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ BCCI ಭರ್ಜರಿ ಗಿಫ್ಟ್

ಈ ಬಹುಮಾನವು ತಂಡದ ಮನೋಸ್ಥೈರ್ಯವನ್ನು ಹೆಚ್ಚಿಸುವುದಲ್ಲದೆ, ಭವಿಷ್ಯದಲ್ಲಿ ಯುವ ಆಟಗಾರರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಸ್ಫೂರ್ತಿ ನೀಡುತ್ತದೆ.

ನವದೆಹಲಿ: ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳಲ್ಲೂ ಪ್ರಾಬಲ್ಯ ಸಾಧಿಸಿ ಗಮನಾರ್ಹ ವಿಜಯ ದಾಖಲಿಸಿರುವ ಟೀಮ್ ಇಂಢಿಯಾಗೆ ಬಿಸಿಸಿಐ ಗಿಫ್ಟ್ ಘೋಷಣೆ ಮಾಡಿದೆ.

ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯ ಸಿಬ್ಬಂದಿಗೆ ಬಿಸಿಸಿಐ ಬರೋಬ್ಬರಿ ರೂ.21 ಕೋಟಿ ನಗದು ಬಹುಮಾನ ಘೋಷಿಸಿದೆ. ಇದು ಏಷ್ಯಾಕಪ್ ಆಯೋಜಕರಾದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿಂದ ಚಾಂಪಿಯನ್ ತಂಡಕ್ಕೆ ಸಿಗುವ ಮೊತ್ತಕ್ಕಿಂತ ಶೇ.10ಪಟ್ಟು ಹೆಚ್ಚಾಗಿದೆ.

ಟೂರ್ನಿ ಬಹುಮಾನ ಮೊತ್ತವಾಗಿ ಭಾರತಕ್ಕೆ 2.3 ಕೋಟಿ ಲಭಿಸಿತ್ತು. ರನ್ನರ್ ಅಪ್ ಪಾಕಿಸ್ತಾನಕ್ಕೆ ಏಷ್ಯಾ ಕ್ರಿಕೆಟ್ ಮಂಡಳಿಯಿಂದ 1.3 ಕೋಟಿ ರೂ. ಬಹುಮಾನ ದೊರೆಯಿತು. ಅಭಿಷೇಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಈ ಬಹುಮಾನವು ತಂಡದ ಮನೋಸ್ಥೈರ್ಯವನ್ನು ಹೆಚ್ಚಿಸುವುದಲ್ಲದೆ, ಭವಿಷ್ಯದಲ್ಲಿ ಯುವ ಆಟಗಾರರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಸ್ಫೂರ್ತಿ ನೀಡುತ್ತದೆ. ಇದೀಗ ಬಿಸಿಸಿಐ ನಡೆಗೆ ಕ್ರಿಕೆಟ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಇಂದಿರಾ, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್!

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ಬಂಡೀಪುರ, ನಾಗರಹೊಳೆ ಸಫಾರಿ ತಾತ್ಕಾಲಿಕ ಸ್ಥಗಿತ ಸಮರ್ಥಿಸಿಕೊಂಡ ಖಂಡ್ರೆ; ಷರತ್ತುಬದ್ಧ ಆರಂಭ

SCROLL FOR NEXT