ಶ್ರೇಯಸ್ ಅಯ್ಯರ್  
ಕ್ರಿಕೆಟ್

IPL 2026: ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ರೂ ದಂಡ! ಯಾಕೆ ಗೊತ್ತಾ?

ಐಪಿಎಲ್ ಸಮಿತಿಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮೂರು ವಿಕೆಟ್ ಗಳಿಂದ ಗುಜರಾತ್ ನ್ನು ಸೋಲಿಸಿದ ಪಂಜಾಬ್ ಕಿಂಗ್ಸ್ IPL 2026 ರ ಗೆಲುವಿನ ಅಭಿಯಾನವನ್ನು ಆರಂಭಿಸಿತು.

ಮುಲ್ಲನ್‌ಪುರ: ಗುಜರಾತ್‌ ಟೈಟಾನ್ಸ್‌ ವಿರುದ್ಧದ ಐಪಿಎಲ್‌ ಪಂದ್ಯದಲ್ಲಿ 'ಸ್ಲೋ ಓವರ್ ರೇಟ್' ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಐಪಿಎಲ್ ಸಮಿತಿಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮೂರು ವಿಕೆಟ್ ಗಳಿಂದ ಗುಜರಾತ್ ನ್ನು ಸೋಲಿಸಿದ ಪಂಜಾಬ್ ಕಿಂಗ್ಸ್ IPL 2026 ರ ಗೆಲುವಿನ ಅಭಿಯಾನವನ್ನು ಆರಂಭಿಸಿತು. ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕಾಗಿ ಲಕ್ಷಾಂತರ ರೂಪಾಯಿ ದಂಡ ವಿಧಿಸಲಾಗಿದೆ.

ನಿಧಾನಗತಿಯ ಓವರ್ ರೇಟ್ ಗೆ ಸಂಬಂಧಿಸಸಿದಂತೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ಪ್ರಕಾರ, ಇದು ಪಂಜಾಬ್ ಕಿಂಗ್ಸ ತಂಡದ ಮೊದಲ ತಪ್ಪು ಆಗಿದೆ. ಇದಕ್ಕಾಗಿ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಒಂದು ವೇಳೆ ಮುಂದಿನ ಪಂದ್ಯಗಳಲ್ಲಿ ಇದೇ ತಪ್ಪು ಪುನರಾವರ್ತನೆಯಾದರೆ ದಂಡದ ಮೊತ್ತ 24 ಲಕ್ಷಕ್ಕೆ ಏರಿಕೆಯಾಗಲಿದೆ. ಮತ್ತು ತಂಡದ ಇತರ ಆಟಗಾರರಿಗೂ ದಂಡ ಬೀಳಲಿದೆ. ಮೂರನೇ ಬಾರಿ ತಪ್ಪು ಮಾಡಿದರೆ ನಾಯಕನಿಗೆ ಒಂದು ಪಂದ್ಯದ ನಿಷೇಧ ಎದುರಾಗುವ ಸಾಧ್ಯತೆಯಿದೆ.

ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ಬೌಲರ್‌ಗಳು 162 ರನ್‌ಗಳಿಗೆ ಕಟ್ಟಿಹಾಕಿದ್ದರು.

ಗುರಿ ಬೆನ್ನತ್ತಿದ ಪಂಜಾಬ್ ಪರ ಪ್ರಭ್‌ಸಿಮ್ರಾನ್ ಸಿಂಗ್ ಮತ್ತು ಕೂಪರ್ ಕೊನೊಲಿ ಎರಡನೇ ವಿಕೆಟ್‌ಗೆ 77 ರನ್‌ಗಳ ಜೊತೆಯಾಟವಾಡಿ ಸುಲಭ ಗೆಲುವಿನತ್ತ ತಂಡವನ್ನು ಕೊಂಡೊಯ್ದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT